
ನವದೆಹಲಿ(ಜ.26): ಗಣರಾಜ್ಯೋತ್ಸವ ದಿನ ರೈತ ಸಂಘಟನೆಗಳ ಟ್ರಾಕ್ಟರ್ ರ್ಯಾಲಿ ಇದೀಗ ಹಿಂಸಾ ರೂಪ ಪಡೆದುಕೊಂಡಿದೆ. ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಟ್ರಾಕ್ಟರ್ ರ್ಯಾಲಿ ಆಯೋಜಿಸಿದ ರೈತ ಸಂಘಟನೆಗಳು ಇದೀಗ ತಾವು ಬಹಿರಂಗ ಪಡಿಸಿದ ಮಾರ್ಗ ಬದಲಾಯಿಸಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದಾರೆ.
ಹಿಂಸಾತ್ಮಕ ರೂಪ ತಳೆದ ಅನ್ನದಾತನ ಕಿಚ್ಚು: ಪೊಲೀಸರ ಮೇಲೆ ದಾಳಿ!.
ಪೊಲೀಸ್ ಬ್ಯಾರಿಕೇಡ್ ಮುರಿದು, ಭದ್ರತಾ ಸಿಬ್ಬಂದಿಗಳ ಮೇಲೆ ದಾಳಿ ಮಾಡಿದ ಪ್ರತಿಭಟನಾಕಾರರು, ಮಾರ್ಗ ಬದಲಾಯಿಸಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ್ದಾರೆ. ಹಲವು ಭಾಗಗಗಳಿಂದ ರೈತರನ್ನು ನಿಯಂತ್ರಿಸಲು ಪೊಲೀಸರಿಗೆ ಸಾಧ್ಯವಾಗಿಲ್ಲ. ರೈತರ ಗುಂಪಿನಲ್ಲಿ ಕೆಲ ಸಂಘಟನೆಗಳು ಕತ್ತಿ ಗುರಾಣಿ ಮೂಲಕ ಪೊಲೀಸರ ಮೇಲೆ ದಾಳಿ ಮಾಡಿದೆ.
ನೇರವಾಗಿ ಕೆಂಪು ಕೋಟೆಗೆ ಮುತ್ತಿಗೆ ಹಾಕಿದ ರೈತ ಸಂಘಟನೆಗಳು, ಕೆಂಪು ಕೋಟೆಯಲ್ಲಿನ ಧ್ವಜ ಸ್ಥಂಭದಲ್ಲಿ ತಮ್ಮ ಧ್ವಜ ಹಾರಿಸಿದ್ದಾರೆ. ಇಷ್ಟೇ ಅಲ್ಲ ಕೆಂಪು ಕೋಟೆ ಮೇಲೆ ಹತ್ತಿ ಕೋಟೆಯ ಮೇಲ್ಬಾಗದಲ್ಲೂ ತಮ್ಮ ಧ್ವಜ ಹಾರಿಸಿದ್ದಾರೆ. ಪ್ರತಿಭಟನೆ ಉಗ್ರಸ್ಪರೂಪ ಪಡೆದುಕೊಂಡಿದೆ. ಇದೀಗ ಮತ್ತಷ್ಟು ಗುಂಪುಗಳು ಕೆಂಪು ಕೋಟೆಗೆ ಆಗಮಿಸುತ್ತಿದ್ದು, ಪ್ರತಿಭಟನೆ ಪೊಲೀಸರ ನಿಯಂತ್ರಣ ಮೀರಿದಂತೆ ಕಾಣುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ