ಏನಾಗಿದೆ ಸಮಾಜಕ್ಕೆ?: ಹೆಂಡತಿಗೆ ಸೀಟು ಕೇಳಿದವನನ್ನು ರೈಲಲ್ಲೇ ಬಡಿದು ಕೊಂದರು!

Suvarna News   | Asianet News
Published : Feb 14, 2020, 12:56 PM IST
ಏನಾಗಿದೆ ಸಮಾಜಕ್ಕೆ?: ಹೆಂಡತಿಗೆ ಸೀಟು ಕೇಳಿದವನನ್ನು ರೈಲಲ್ಲೇ ಬಡಿದು ಕೊಂದರು!

ಸಾರಾಂಶ

ಸಂವೇದನೆ ಕಳೆದುಕೊಂಡ ಆಧುನಿಕ ನಾಗರಿಕ ಸಮಾಜ| ಪತ್ನಿಗಾಗಿ ಸೀಟು ಕೇಳಿದ ವ್ಯಕ್ತಿಯನ್ನು ಬಡಿದು ಕೊಂದರು| ಮುಂಬೈ-ಲಾತೂರ್-ಬೀದರ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ದುರ್ಘಟನೆ| ಪತ್ನಿ ಜ್ಯೋತಿಗಾಗಿ ಸೀಟು ಕೇಳಿದ ಸಾಗರ್ ಮಾರ್ಕಂಡ್| ಮಹಿಳೆಯರೂ ಸೇರಿ 12 ಜನರಿಂದ ಸಾಗರ್ ಮಾರ್ಕಂಡ್ ಮೇಲೆ ಮಾರಣಾಂತಿಕ ಹಲ್ಲೆ| ಪ್ರಕರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ ರೈಲ್ವೇ ಪೊಲೀಸ್|

ಮುಂಬೈ(ಫೆ.14): ಅದೊಂದು ಕಾಲವಿತ್ತು. ಮಹಿಳೆಯರತು, ವೃದ್ಧರು, ಗರ್ಭಿಣಿ, ವಿಶೇಷ ಚೇತನರನ್ನು ಕಂಡರೆ, ಬಸ್ಸು ಹಾಗೂ ರೈಲುಗಳಲ್ಲಿ ತಾವಾಗಿಯೇ ಎದ್ದು ಸೀಟು ಬಿಟ್ಟುಕೊಡುವ ಸಂವೇದನೆ ನಮ್ಮ ಸಮಾಜಕ್ಕಿತ್ತು.

ಆದರೆ ಕಾಲ ಬದಲಾಗಿದೆ. ಆಧುನಿಕ ಜೀವನ ಶೈಲಿಯನ್ನೇನೋ ಅಳವಡಿಸಿಕೊಂಡಿರುವ ನಾವು, ನಮ್ಮ ಸಮಾಜದ ಅವಿಭಾಜ್ಯ ಅಂಗವಾಗಿದ್ದ ಸಂವೇದನೆಯನ್ನೇ ಕಳೆದುಕೊಳ್ಳುತ್ತಿದ್ದೇವೆ.

ಇದಕ್ಕೆ ಪುಷ್ಠಿ ಎಂಬಂತೆ ರೈಲಿನಲ್ಲಿ ತನ್ನ ಹೆಂಡತಿ ಹಾಗೂ ಎರಡು ವರ್ಷದ ಮಗುವಿಗಾಗಿ ಸೀಟು ಕೇಳಿದ ವ್ಯಕ್ತಿಯೋರ್ವನನ್ನು ಸಹ ಪ್ರಯಾಣಿಕರು ಬಡಿದು ಕೊಂದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮುಂಬೈ-ಲಾತೂರ್-ಬೀದರ್ ನಡುವೆ ಸಂಚರಿಸುತ್ತಿದ್ದ ರೈಲಿನಲ್ಲಿ ಸಾಗರ್ ಮಾರ್ಕಂಡ್ ಎಂಬ ವ್ಯಕ್ತಿ ತಮ್ಮ ಪತ್ನಿ ಜ್ಯೋತಿ ಹಾಗೂ ಎರಡು ವರ್ಷದ ಪುಟ್ಟ ಮಗಳೊಂದಿಗೆ ಸಂಚರಿಸುತ್ತಿದ್ದರು.

ಕಲ್ಯಾಣ್’ದಲ್ಲಿ ರೈಲು ಏರಿದ್ದ ಸಾಗರ್ ಮಾರ್ಕಂಡ್ ದಂಪತಿ, ಮೂರನೇ ದರ್ಜೆ ಬೋಗಿಯಲ್ಲಿ ಹೆಚ್ಚಿನ ಜನಸಂದಣಿ ಇದ್ದ ಪರಿಣಾಮ ಹೆಂಡತಿಗಾಗಿ ಸೀಟು ಬಿಟ್ಟು ಕೊಡುವಂತೆ ಕೆಲವು ಮಹಿಳೆಯರಲ್ಲಿ ಮನವಿ ಮಾಡಿದ್ದರು.

ರೈಲಿಗೆ ಸಿಲುಕಿ ಕಾಲೇಜು ವಿದ್ಯಾರ್ಥಿ ದಾರುಣ ಸಾವು

ಆದರೆ ಇದರಿಂದ ಸಿಟ್ಟಿಗೆದ್ದಮಹಿಳೆಯರು ಸಾಗರ್ ಮಾರ್ಕಂಡ್’ನನ್ನು ಅವಾಚ್ಯ ಶಬ್ಧಗಳಿಂದ ಬೈದಿದ್ದಾರೆ. ಸಾಗರ್ ಕೂಡ ಮಾತಿಗೆ ಮಾತು ಬೆಳೆಸಿದಾಗ 12ಕ್ಕೂ ಹೆಚ್ಚು ಜನರು ಸೇರಿಕೊಂಡು ಸಾಗರ್ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.

ರೈಲು ಕಲ್ಯಾಣ್’ದಿಂದ ದೌಂಡ್’ವರೆಗೆ ಬರುವವರೆಗೂ ಸಾಗರ್ ಮೇಲೆ ಹಲ್ಲೆ ನಡೆಸಲಾಗಿದ್ದು, ಪತ್ನಿ ಜ್ಯೋತಿ ಅವರ ಮನವಿಗೂ ಸ್ಪಂದಿಸದೇ ಸಾಗರ್’ನನ್ನು ಬಡಿದು ಕೊಂದಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರೈಲ್ವೇ ಪೊಲೀಸ್ ಅಧೀಕ್ಷಕ ದೀಪಕ್ ಸತೋರೆ, ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಹಿಳೆಯರು ಹಾಗೂ ನಾಲ್ವರು ಪುರುಷರನ್ನು ಬಂಧಿಸಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಆರ್ಥಿಕತೆ ಬಾಹುಬಲಿಯ ರೂಪಾಯಿ ಮೌಲ್ಯ ICUನಲ್ಲಿ; ಅಂದುಕೊಂಡಂಗಿಲ್ಲ ಭವಿಷ್ಯ!
India Latest News Live: ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!