Kerala Trekker Trapped: ಬೆಟ್ಟದಿಂದ ಜಾರಿ ಬಂಡೆ ಮಧ್ಯೆ ಸಿಕ್ಕಿಬಿದ್ದ ಯುವಕ: ರಕ್ಷಣೆಗಾಗಿ ಸೇನೆ ನೆರವು ಕೋರಿಕೆ!

Published : Feb 09, 2022, 07:29 AM IST
Kerala Trekker Trapped: ಬೆಟ್ಟದಿಂದ ಜಾರಿ ಬಂಡೆ ಮಧ್ಯೆ ಸಿಕ್ಕಿಬಿದ್ದ ಯುವಕ: ರಕ್ಷಣೆಗಾಗಿ ಸೇನೆ ನೆರವು ಕೋರಿಕೆ!

ಸಾರಾಂಶ

*2 ದಿನದಿಂದ ಅನ್ನ, ನೀರು ಇಲ್ಲದೇ ಬಿಸಿಲಲ್ಲಿ ಬಸವಳಿದ ಯುವಕ *ಕೇರಳದಲ್ಲೊಂದು ಆಘಾತಕಾರಿ ಘಟನೆ: ಸೇನೆ ನೆರವು ಕೋರಿಕೆ

ಪಾಲಕ್ಕಾಡ್‌ (ಫೆ. 09): ಬೃಹತ್‌ ಬೆಟ್ಟಹತ್ತುವ ಸಾಹಸ ಯಶಸ್ವಿಯಾದ ಬಳಿಕ ಕಾಲುಜಾರಿ ಬಿದ್ದ ಯುವಕನೊಬ್ಬ ದೊಡ್ಡ ಬೆಟ್ಟದ ನಡುವಿನ ಸಣ್ಣ ಜಾಗದಲ್ಲಿ ಸಿಕ್ಕಿಹಾಕಿಕೊಂಡಿರುವ ಘಟನೆಯೊಂದು ಕೇರಳದಲ್ಲಿ (Kerala) ನಡೆದಿದೆ. ಸುಡು ಬಿಸಿಲಿನಲ್ಲೇ 2 ದಿನಗಳಿಂದ ಅನ್ನ, ನೀರು ಇಲ್ಲದೇ ಯುವಕ ಸಂಕಷ್ಟದಲ್ಲಿದ್ದು, ಆತನ ರಕ್ಷಣೆಗಾಗಿ ಕೇರಳ ಸರ್ಕಾರ ಸೇನೆಯ ನೆರವು ಕೋರಿದೆ. ಬಾಬು ಎಂಬ ಯುವಕ ತನ್ನಿಬ್ಬರು ಸ್ನೇಹಿತರ ಜೊತೆಗೂಡಿ ಸೋಮವಾರ ಪಾಲಕ್ಕಾಡ್‌ (Palakkad) ಸಮೀಪದ ಕುರುಂಬಚ್ಚಿ ಬೆಟ್ಟಏರಲು ತೆರಳಿದ್ದ. ಉಳಿದಿಬ್ಬರು ಮಾರ್ಗಮಧ್ಯದಲ್ಲೇ ಇದು ತಮ್ಮ ಕೈಲಾಗದು ಎಂದು ಸುಮ್ಮನಾಗಿದ್ದರು. ಆದರೆ ಬಾಬು ಬೆಟ್ಟದ ತುದಿ ಏರಿದ್ದ. ಅಲ್ಲಿಂದ ಇನ್ನೇನು ಕೆಳಗೆ ಇಳಿಯಬೇಕು ಎನ್ನುವಷ್ಟರಲ್ಲಿ ಕಡಿದಾದ ಬೆಟ್ಟದ ತುದಿಯಿಂದ ಕಾಲು ಜಾರಿ ಕೆಳಕ್ಕೆ ಉರುಳಿದ್ದ.

ಅದೃಷ್ಟವಶಾತ್‌ ಆತ ಪೂರ್ಣ ಕೆಳಕ್ಕೆ ಉರುಳುವ ಬದಲು ನಡುವೆ ಸಣ್ಣದಾದ ಜಾಗವೊಂದಲ್ಲಿ ಸಿಕ್ಕಿಹಾಕಿಕೊಂಡಿದ್ದ. ಆತ ಮೇಲೆ ಹತ್ತಿ ಬರುವಂತೆಯೂ ಇರಲಿಲ್ಲ, ಸ್ನೇಹಿತರು ರಕ್ಷಿಸುವ ಸಾಧ್ಯತೆಯೂ ಇರಲಿಲ್ಲ. ಹೀಗಾಗಿ ಅವರು ಕೆಳಗೆ ಬಂದು ಗ್ರಾಮಸ್ಥರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಯತ್ನ ಮಾಡಿದರೂ ಯುವಕನ ಸಮೀಪ ತೆರಳಲು ಸಾಧ್ಯವಾಗಲಿಲ್ಲ. ಹೀಗಾಗಿ ಸೋಮವಾರ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿತ್ತು.

ಇದನ್ನೂ ಓದಿ: Viral News: ಬೆಟ್ಟದಿಂದ ಬೈಕ್ ಸಮೇತ ಜಂಪ್ ಮಾಡಿದ ಸವಾರ, ಮುಂದೇನಾಯ್ತು.?

ಮಂಗಳವಾರ ಬೆಳಗ್ಗೆ ಕರಾವಳಿ ಕಾವಲು ಪಡೆಯ ಕಾಪ್ಟರ್‌ಗಳು ಯುವಕನ ರಕ್ಷಣೆಗೆ ಧಾವಿಸಿತ್ತಾದರೂ, ಯುವಕ ಸಿಕ್ಕಿಬಿದ್ದ ಸ್ಥಳ ಅತ್ಯಂತ ಕಡಿದಾಗಿದ್ದ ಕಾರಣ ಅಲ್ಲಿಗೆ ತೆರಳಲಾಗದೇ ಮರಳಿವೆ. ಹೀಗಾಗಿ ಸೋಮವಾರ ಬೆಳಗ್ಗೆಯಿಂದಲೂ ಯುವಕ ತಾನು ಕೂರಬಹುದಾದಷ್ಟೇ ಸಣ್ಣ ಜಾಗದಲ್ಲಿ ಸುಡು ಬಿಸಿಲು, ರಾತ್ರಿಯ ಚಳಿಯ ನಡುವೆ, ಅನ್ನ, ನೀರು ಇಲ್ಲದೇ ಸಂಕಷ್ಟಸ್ಥಿತಿಯಲ್ಲಿ ಕುಳಿತುಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಯುವಕನ ರಕ್ಷಣೆಗಾಗಿ ಸೇನೆಯ ನೆರವು ಕೋರಿದೆ. ಸೇನೆ ಮತ್ತು ವಾಯುಪಡೆ ತಂಡಗಳು ಇದೀಗ ಪಾಲಕ್ಕಾಡ್‌ನತ್ತ ಧಾವಿಸುತ್ತಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!