ಕಾಂಗ್ರೆಸ್‌ಗೆ ಬಿಗ್ ಶಾಕ್: ಮತ್ತೊಬ್ಬ ರಾಜ್ಯಾಧ್ಯಕ್ಷ ಟಿಎಂಸಿಗೆ?

Published : Aug 22, 2021, 09:17 AM IST
ಕಾಂಗ್ರೆಸ್‌ಗೆ ಬಿಗ್ ಶಾಕ್: ಮತ್ತೊಬ್ಬ ರಾಜ್ಯಾಧ್ಯಕ್ಷ ಟಿಎಂಸಿಗೆ?

ಸಾರಾಂಶ

* ಮಾಜಿ ಸಂಸದೆ ಸುಶ್ಮಿತಾ ದೇವ್‌ ಕಾಂಗ್ರೆಸ್‌ ತೊರೆದ ಬೆನ್ನಿಗೇ ಪಕ್ಷಕ್ಕೆ ಮತ್ತೊಂದು ಆಘಾತ  * ಕಾಂಗ್ರೆಸ್‌ಗೆ ಬಿಗ್ ಶಾಕ್: ಮತ್ತೊಬ್ಬ ರಾಜ್ಯಾಧ್ಯಕ್ಷ ಟಿಎಂಸಿಗೆ?

ತ್ರಿಪುರಾ(ಆ.22): ಮಾಜಿ ಸಂಸದೆ ಸುಶ್ಮಿತಾ ದೇವ್‌ ಕಾಂಗ್ರೆಸ್‌ ತೊರೆದ ಬೆನ್ನಿಗೇ ಪಕ್ಷಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ತ್ರಿಪುರಾ ಕಾಂಗ್ರೆಸ್‌ ಅಧ್ಯಕ್ಷ ಪಿಜುಶ್‌ ಕಾಂತಿ ಬಿಸ್ವಾಸ್‌ ಕಾಂಗ್ರೆಸ್‌ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಮೂರು ದಶಕಗಳ ಕಾಲ ಕಾಂಗ್ರಸ್‌ನಲ್ಲಿದ್ದ ಸುಶ್ಮಿತಾ ಅವರು ಕೆಲ ದಿನಗಳ ಹಿಂದಷ್ಟೇ ಪಕ್ಷ ತೊರೆದು ತೃಣಮೂಲ ಕಾಂಗ್ರೆಸ್‌ ಸೇರಿದ್ದರು. ಅದರ ಬೆನ್ನಲ್ಲೇ ಬಿಸ್ವಾಸ್‌ ಅವರೂ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ. ಮೂಲಗಳ ಪ್ರಕಾರ ಬಿಸ್ವಾಸ್‌ ಟಿಎಂಸಿ ಸೇರುವ ಸಾಧ್ಯತೆ ಇದೆ.

‘ತ್ರಿಪುರಾ ಕಾಂಗ್ರೆಸ್‌ ಅಧ್ಯಕ್ಷನಾಗಿದ್ದ ನನ್ನನ್ನು ಬೆಂಬಲಿಸಿದ ಎಲ್ಲಾ ಕಾರ್ಯಕರ್ತರು, ನಾಯಕರಿಗೂ ಧನ್ಯವಾದಗಳು. ಇಂದು ನಾನು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಹಾಗೂ ರಾಜಕೀಯಕ್ಕೆ ವಿದಾಯ ಹೇಳುತ್ತಿದ್ದೇನೆ. ಗೌರವಾನ್ವಿತ ಸೋನಿಯಾ ಗಾಂಧಿಗೆ ಕೃತಜ್ಞತೆಗಳು’ ಎಂದು ಬಿಸ್ವಾಸ್‌ ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಸಿದ್ದೇಶ್ವರ್‌ ಎಕ್ಸ್‌ಪ್ರೆಸ್‌ನಲ್ಲಿ ನಿದ್ದೆಗೆ ಜಾರಿದ ಚಿನ್ನದ ವ್ಯಾಪಾರಿಗೆ ಆಘಾತ: 5.53 ಕೋಟಿ ಮೊತ್ತದ ಚಿನ್ನ ಮಾಯ
ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?