ಆಡಳಿತದ ಬಗ್ಗೆ ದೂರು; ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ!

Published : Mar 09, 2021, 05:21 PM IST
ಆಡಳಿತದ ಬಗ್ಗೆ ದೂರು; ಉತ್ತರಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ರಾಜೀನಾಮೆ!

ಸಾರಾಂಶ

ಉತ್ತರಖಂಡ ಮುಖ್ಯಮಂತ್ರಿ ತ್ರೀವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಇನ್ನೂ ಒಂದು ವರ್ಷ ಅಧಿಕಾರವದಿ ಬಾಕಿ ಇರುವಾಗಲೇ ಮತ್ತೊರ್ವ ಸಿಎಂ ಆಯ್ಕೆಗೆ ಬಿಜೆಪಿ ಮುಂದಾಗಿದೆ

ಉತ್ತರಖಂಡ(ಮಾ.09): ಶಾಸಕರ, ಸಚಿವರು ತಿರುಗಿ ಬಿದ್ದ ಹಿನ್ನಲೆಯಲ್ಲಿ ಉತ್ತರಖಂಡ ಮುಖ್ಯಮಂತ್ರಿ ತ್ರೀವೇಂದ್ರ ಸಿಂಗ್ ರಾವತ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು(ಮಾ.09): ಸಂಜೆ ರಾಜ್ಯಪಾಲ ಬೆಬಿ ರಾಣಿ ಮೌರ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ರಾಜ್ಯಪಾಲರಿಗೆ ರಾಜೀನಾಮೆ ಪತ್ರ ನೀಡಿದ ಬಳಿಕ ಸುದ್ಧಿಗೋಷ್ಠಿ ನಡೆಸಿದ ತೀವೇಂದ್ರ ಸಿಂಗ್ ರಾವತ್, ಉತ್ತರಖಂಡದ ನಾಯಕತ್ವ ಬದಲಾವಣೆಗಾಗಿ ದಾರಿ ಮಾಡಿಕೊಡುತ್ತಿದ್ದೇನೆ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾವತ್ ಹೇಳಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿದ ಮರುದಿನವೇ ರಾವತ್ ರಾಜೀನಾಮೆ ಸಲ್ಲಿಸಿದ್ದಾರೆ.

ಉತ್ತರಖಂಡ ದುರಂತಕ್ಕೆ ದೇವಿ ಶಾಪ; ಗ್ರಾಮಸ್ಥರು ನೀಡಿದ ಎಚ್ಚರಿಕೆ ನಿಜವಾಯಿತಾ?...

ಉತ್ತರಖಂಡ ಬಿಜೆಪಿ ಸರ್ಕಾರದ ಅವಧಿ ಇನ್ನೂ ಒಂದು ವರ್ಷ ಬಾಕಿ ಇದೆ. ಇದೀಗ ಇನ್ನೊಂದು ವರ್ಷಕ್ಕೆ ಹೊಸ ಸಿಎಂ ಆಯ್ಕೆ ಪ್ರಕ್ರಿಯೆ ನಾಳೆ ನಡೆಯಲಿದೆ. ನಾಳೆ(ಮಾ.10) ಬೆಳಗ್ಗೆ 11 ಗಂಟೆಗೆ ಬಿಜೆಪಿ ಮಹತ್ವದ ಸಭೆ ನಡೆಸಲಿದೆ. ಧನ್ ಸಿಂಗ್ ಮುಂದಿನ ಸಿಎಂ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ.

ಬಿಜೆಪಿ ನಾಲ್ಕು ವರ್ಷ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟಿದ್ದೆ. ನಾನು ಯಾವತ್ತು ಮುಖ್ಯಮಂತ್ರಿ ಆಗುತ್ತೇನೆ ಎಂದುಕೊಂಡಿರಲಿಲ್ಲ. ಆದರೆ ಹೈಕಮಾಂಡ್ ನನಗೆ ಸಿಎಂ ಪಟ್ಟ ನೀಡಿತ್ತು. ಇದೀಗ ಒಂದು ವರ್ಷ ಅವಧಿಗೆ ಇತರರಿಗೆ ಅವಕಾಶ ಮಾಡಿಕೊಡಲು ಹೈಕಮಾಂಡ್ ಸೂಚಿಸಿದೆ ಎಂದು ರಾವತ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಪೌರತ್ವ ಸಿಗುವ ಮುನ್ನವೇ ವೋಟರ್‌ ಲಿಸ್ಟ್‌ನಲ್ಲಿ ಹೆಸರು, ಸೋನಿಯಾ ಗಾಂಧಿಗೆ ನೋಟಿಸ್‌ ಕೊಟ್ಟ ದೆಹಲಿ ಕೋರ್ಟ್!
ರಿಯಲ್ ಎಸ್ಟೇಟ್ ಉದ್ಯಮಿಯ ಬರ್ಬರ ಹತ್ಯೆ: ಮಗ ಓದುತ್ತಿದ್ದ ಶಾಲೆಯ ಮುಂದೆಯೇ ಕೃತ್ಯ