ನಟಿ ಜಯಪ್ರದಾಗೆ ಬಂಧನ ಭೀತಿ: ಮಾರ್ಚ್‌ 6ರೊಳಗೆ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲು ಸೂಚನೆ

Published : Feb 28, 2024, 10:22 AM ISTUpdated : Feb 28, 2024, 11:31 AM IST
ನಟಿ ಜಯಪ್ರದಾಗೆ ಬಂಧನ ಭೀತಿ: ಮಾರ್ಚ್‌ 6ರೊಳಗೆ ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಲು ಸೂಚನೆ

ಸಾರಾಂಶ

ಸಮಾಜವಾದಿ ಪಕ್ಷದ ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ನಾಪತ್ತೆಯಾಗಿದ್ದಾರೆ ಎಂದು ಘೋಷಿಸಿರುವ ನ್ಯಾಯಾಲಯ ಜಯಪ್ರದಾ ಬಂಧನಕ್ಕೆ ಆದೇಶ ನೀಡಿದೆ. 

ಲಕ್ನೋ: ಸಮಾಜವಾದಿ ಪಕ್ಷದ ಮಾಜಿ ಸಂಸದೆ ಹಾಗೂ ನಟಿ ಜಯಪ್ರದಾ ನಾಪತ್ತೆಯಾಗಿದ್ದಾರೆ ಎಂದು ಘೋಷಿಸಿರುವ ನ್ಯಾಯಾಲಯ ಜಯಪ್ರದಾ ಬಂಧನಕ್ಕೆ ಆದೇಶ ನೀಡಿದೆ. ನಟಿ ಜಯಪ್ರದಾ ವಿರುದ್ಧ 2019ರ ಲೋಕಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕೆ ಸಂಬಂಧಿಸಿದಂತೆ 2 ಪ್ರಕರಣಗಳು ದಾಖಲಾಗಿದೆ. ಉತ್ತರಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದ ಮಾಜಿ ಸಂಸದೆಯಾಗಿರುವ ಜಯಪ್ರದಾ ಅವರನ್ನು ಮಾರ್ಚ್ 6ರ ಒಳಗಾಗಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಪೊಲೀಸರಿಗೆ ಉತ್ತರ ಪ್ರದೇಶದ ಕೋರ್ಟ್ ಆದೇಶಿಸಿದೆ. 

ಹಿರಿಯ ಪ್ರಾಸಿಕ್ಯೂಷನ್ ಅಧಿಕಾರಿ ಅಮರನಾಥ್ ತಿವಾರಿ ಪ್ರಕಾರ, 2019 ರ ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ರಾಂಪುರದ ಮಾಜಿ ಸಂಸದೆ ಜಯಪ್ರದಾ ವಿರುದ್ಧ ಉತ್ತರಪ್ರದೇಶದ ಕೆಮಾರಿ ಮತ್ತು ಸ್ವರ್ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಲಾಗಿದೆ.

2019ರ ಚುನಾವಣೆ ವೇಳ ಜಯಪ್ರದಾ ಅವರು ರಾಂಪುರ ಕ್ಷೇತ್ರದಿಂದ ಬಿಜೆಪಿ ಸಂಸದೆಯಾಗಿ ಸ್ಪರ್ಧಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಜಂ ಖಾನ್ ವಿರುದ್ಧ ಸೋತಿದ್ದರು. ಇದಕ್ಕೂ ಮೊದಲು ಸಮಾಜವಾದಿ ಪಾರ್ಟಿಯಿಂದ 2004 ಹಾಗೂ 2009ರಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ನಂತರ ಅವರನ್ನು ಸಮಾಜವಾದಿ ಪಕ್ಷ ಅಮಾನತು ಮಾಡಿತ್ತು. 

ಬಾಲಿವುಡ್‌ನ ಟಾಪ್‌ ಹೀರೋಸ್ ಜೊತೆ ರೋಮ್ಯಾನ್ಸ್ ಮಾಡಿದ್ದ ನಟಿ, ಅಪ್ಸರೆಯಂತಿದ್ದ ಚೆಲುವೆ ಈಗ ಏಕಾಂಗಿ!

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಪ್ರದೇಶದ ವಿಶೇಷ ಎಂಎಲ್‌ಎ, ಎಂಪಿ ನ್ಯಾಯಾಲಯವೂ ಹಲವು ಬಾರಿ ಜಯಪ್ರದಾಗೆ ನೋಟಿಸ್ ನೀಡಿದ್ದರೂ ಜಯಪ್ರದಾ ಇಲ್ಲಿಯವರೆಗೆ ನ್ಯಾಯಾಲಯಕ್ಕೆ ಹಾಜರಾಗಿಲ್ಲ, ಈ ಹಿನ್ನೆಲೆಯಲ್ಲಿ 7 ಬಾರಿ ಆಕೆಯ ವಿರುದ್ಧ ಜಾಮೀನು ರಹಿತ ವಾರೆಂಟ್ ನೀಡಲಾಗಿದೆ. ಆದರೆ ಪೊಲೀಸರು ಮಾತ್ರ ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಾಧ್ಯವಾಗಿಲ್ಲ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ನ್ಯಾಯಾಲಯಕ್ಕೆ ಪ್ರತಿಕ್ರಿಯೆ ನೀಡಿದ್ದು, ಜಯಾಪ್ರದಾ ಬಂಧನ ತಪ್ಪಿಸಲು ಪ್ರಯತ್ನಿಸುತ್ತಿದ್ದು, ಆಕೆಯ ಎಲ್ಲಾ ಮೊಬೈಲ್ ಫೋನ್ ಸ್ವಿಚ್‌ಆಫ್ ಬರುತ್ತಿದೆ ಎಂದು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಜಯಾಪ್ರದಾ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ನ್ಯಾಯಾಧೀಶ ಶೋಭೀತ್ ಬನ್ಸಾಲ್ ಆಕೆ ಭೂಗತರಾಗಿದ್ದಾರೆ ಎಂದು ಘೋಷಿಸಿದ್ದಾರೆ ಎಂದು ತಿವಾರಿ ಹೇಳಿದ್ದಾರೆ.

ಇನ್‌ಕಮ್‌ ಟ್ಯಾಕ್ಸ್‌ ಸಮಸ್ಯೆಗೆ ಪರಿಹಾರ ಹುಡುಕಲು ಹೋಗಿ ಮೋಸದ ಬಲೆಗೆ ಬಿದ್ರಾ ನಟಿ ಜಯಪ್ರದಾ..!?

ಕೋರ್ಟ್‌ ಆದೇಶದ ಹಿನ್ನೆಲೆಯಲ್ಲಿ ರಾಂಪುರ ಎಸ್‌ಪಿಯವರು ಸರ್ಕಲ್ ಇನ್ಸ್‌ಪೆಕ್ಟರ್ ನಾಯಕತ್ವದಲ್ಲಿ ತಂಡವೊಂದನ್ನು ರಚಿಸಿ  ಮಾರ್ಚ್‌ 6ರ ಒಳಗೆ ಜಯಪ್ರದಾರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲು ಸೂಚಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!