ಕಾಶ್ಮೀರ, ಮೋದಿ ಕ್ಷೇತ್ರ ವಾರಾಣಸಿಯಲ್ಲೂ ತಿಮ್ಮಪ್ಪನ ದೇಗುಲ!

Published : Dec 29, 2019, 02:21 PM IST
ಕಾಶ್ಮೀರ, ಮೋದಿ ಕ್ಷೇತ್ರ ವಾರಾಣಸಿಯಲ್ಲೂ ತಿಮ್ಮಪ್ಪನ ದೇಗುಲ!

ಸಾರಾಂಶ

ಕಾಶ್ಮೀರ, ಮೋದಿ ಕ್ಷೇತ್ರ ವಾರಾಣಸಿಯಲ್ಲೂ ತಿಮ್ಮಪ್ಪನ ದೇಗುಲ| ಟಿಟಿಡಿ ಮಂಡಳಿ ಸಭೆಯಲ್ಲಿ ಮಹತ್ವದ ನಿರ್ಧಾರ

ತಿರುಪತಿ[ಡಿ.29]:  ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯನ್ನು ಪ್ರತಿನಿಧಿಸುವ ಉತ್ತರಪ್ರದೇಶದ ವಾರಾಣಸಿಯಲ್ಲಿ ತಿರುಪತಿ ತಿಮ್ಮಪ್ಪನ ದೇಗುಲ ತೆರೆಯಲು, ಟಿಟಿಡಿ ನಿರ್ಧರಿಸಿದೆ.

ಶನಿವಾರ ನಡೆದ ಟಿಟಿಡಿ ಮಂಡಳಿ ಸಭೆಯಲ್ಲಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಎರಡೂ ರಾಜ್ಯಗಳಿಂದ ದೇಗುಲ ನಿರ್ಮಾಣ ಮಾಡುವಂತೆ ಮತ್ತು ಇದಕ್ಕೆ ಅಗತ್ಯ ಜಮೀನು ನೀಡುವ ಪ್ರಸ್ತಾಪ ಬಂದಿತ್ತು. ಅದನ್ನು ಮಾನ್ಯ ಮಾಡಿ ದೇಗುಲ ನಿರ್ಮಾಣಕ್ಕೆ ನಿರ್ಧರಿಸಲಾಗಿದೆ ಎಂದು ಟಿಟಿಡಿ ಅಧ್ಯಕ್ಷ ವೈ.ವಿ.ಸುಬ್ಬಾ ರೆಡ್ಡಿ ತಿಳಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ ಸಂವಿಧಾನದ 370ನೇ ವಿಧಿ ರದ್ದು ಮಾಡಿದ ಬೆನ್ನಲ್ಲೇ ಈ ಮಹತ್ವದ ಬೆಳವಣಿಗೆ ನಡೆದಿದೆ. ಇದೇ ವೇಳೆ ಟಿಟಿಡಿ ಕುರಿತ ಸುಳ್ಳು ಸುದ್ದಿಯೊಂದನ್ನು ಪ್ರಕಟಿಸಿದ ಸ್ಥಳೀಯ ಪತ್ರಿಕೆಯೊಂದರ ವಿರುದ್ಧ 100 ಕೋಟಿ ರು. ಮಾನನಷ್ಟಮೊಕದ್ದಮೆ ಹೂಡಲೂ ಟಿಟಿಡಿ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕೇವಲ 2 ನಿಮಿಷ ಮಗಳ ನೋಡಲು 11ಗಂಟೆಗೆ ಸ್ಟೇಶನ್‌ಗೆ ಬಂದ ತಂದೆ, ಭಾವುಕ ಕ್ಷಣದ ವಿಡಿಯೋ
ಬೀದಿಯಲ್ಲಿ ಬಿದ್ದಿದ್ದ ಕಲ್ಲಿಂದ ಹಣ ಮಾಡೋದು ಹೇಗೆ ಎಂದು ತೋರಿಸಿಕೊಟ್ಟ ಹುಡುಗ: ವೀಡಿಯೋ ಭಾರಿ ವೈರಲ್