ಸಹೋದ್ಯೋಗಿ ಜತೆ ‘ಸರಸ ಸಲ್ಲಾಪದ ಮಾತು’: TTD ಚಾನೆಲ್‌ ಮುಖ್ಯಸ್ಥ ರಾಜೀನಾಮೆ!

Published : Jan 13, 2020, 08:52 AM ISTUpdated : Jan 13, 2020, 10:24 AM IST
ಸಹೋದ್ಯೋಗಿ ಜತೆ ‘ಸರಸ ಸಲ್ಲಾಪದ ಮಾತು’: TTD ಚಾನೆಲ್‌ ಮುಖ್ಯಸ್ಥ ರಾಜೀನಾಮೆ!

ಸಾರಾಂಶ

ಸಹೋದ್ಯೋಗಿಯೊಬ್ಬರ ಜತೆ ‘ಸರಸ ಸಲ್ಲಾಪದ ಮಾತು’| ವೆಂಕಟೇಶ್ವರ ಚಾನೆಲ್‌ ಮುಖ್ಯಸ್ಥ ರಾಜೀನಾಮೆ

ತಿರುಪತಿ[ಜ.13]: ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಸಮಿತಿ ನಡೆಸುವ ಶ್ರೀ ವೆಂಕಟೇಶ್ವರ ಭಕ್ತಿ ಚಾನೆಲ್‌ (ಎಸ್‌ವಿಬಿಸಿ) ಚಾನೆಲ್‌ ಮುಖ್ಯಸ್ಥ ಹಾಗೂ ಹಾಸ್ಯ ನಟ ಪೃಥ್ವಿರಾಜ್‌ ಅವರು ತಮ್ಮ ಹುದ್ದೆಗೆ ಭಾನುವಾರ ರಾಜೀನಾಮೆ ನೀಡಿದ್ದಾರೆ.

ಸಹೋದ್ಯೋಗಿಯೊಬ್ಬರ ಜತೆ ‘ಸರಸ ಸಲ್ಲಾಪದ ಮಾತು’ಗಳನ್ನು ಅವರು ಆಡಿದ್ದಾರೆ ಎನ್ನಲಾದ ಆಡಿಯೋವೊಂದು ಮಾಧ್ಯಮಗಳಲ್ಲಿ ಪ್ರಸಾರವಾದ ಕಾರಣ ಅವರು ರಾಜೀನಾಮೆ ನೀಡಿದ್ದಾರೆ. ‘ಮುಖ್ಯಮಂತ್ರಿ ವೈ.ಎಸ್‌. ಜಗನ್ಮೋಹನ ರೆಡ್ಡಿ ಸೂಚನೆ ಮೇರೆಗೆ ಅವರು ರಾಜೀನಾಮೆ ನೀಡಿದ್ದು, ಈ ಪ್ರಕರಣದ ಕುರಿತು ತನಿಖೆಗೆ ಆದೇಶಿಸಲಾಗಿದೆ’ ಎಂದು ಟಿಟಿಡಿ ಅಧ್ಯಕ್ಷ ವೈ.ವಿ. ಸುಬ್ಬಾರೆಡ್ಡಿ ತಿಳಿಸಿದ್ದಾರೆ.

ಬೆಂಗಳೂರು ಐಟಿ ಕಂಪನಿ ಮಾಲೀಕನಿಂದ ತಿರುಪತಿ ದೇವಸ್ಥಾನಕ್ಕೆ 1 ಕೋಟಿ ರೂ. ದೇಣಿಗೆ!

ಆದರೆ ತಮ್ಮ ಸಂಭಾಷಣೆ ತಿರುಚಲಾಗಿದೆ ಎಂದು ಪೃಥ್ವಿರಾಜ್‌ ಆರೋಪಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!