ತಿರುಪತಿ ಲಡ್ಡುನಲ್ಲಿ ಗುಟ್ಕಾ ಪ್ಯಾಕೇಟ್ ಪತ್ತೆಯಾಗಿದ್ದು ನಿಜವೇ? ಟಿಟಿಡಿಯ ಸ್ಪಷ್ಟನೆ ಏನು?

Published : Sep 25, 2024, 08:06 AM IST
ತಿರುಪತಿ ಲಡ್ಡುನಲ್ಲಿ ಗುಟ್ಕಾ ಪ್ಯಾಕೇಟ್ ಪತ್ತೆಯಾಗಿದ್ದು ನಿಜವೇ? ಟಿಟಿಡಿಯ ಸ್ಪಷ್ಟನೆ ಏನು?

ಸಾರಾಂಶ

ತಾನು ಖರೀದಿಸಿದ ತಿರುಮಲದ ಲಡ್ಡುವಿನಲ್ಲಿ ಗುಟ್ಕಾ ಪ್ಯಾಕೇಟ್ ಸಿಕ್ಕಿದೆ ಎಂದು ಮಹಿಳೆಯೊಬ್ಬರು ಹೇಳಿಕೊಂಡಿದ್ದುರು.  ಮಹಿಳೆಯ ಆರೋಪಕ್ಕೆ ಟಿಟಿಡಿ ಸ್ಪಷ್ಟನೆ ನೀಡಿದೆ.

ತಿರುಪತಿ: ದನ ಹಾಗೂ ಹಂದಿ ಕೊಬ್ಬು ಬಳಕೆಯ ವಿವಾದದಲ್ಲಿ ಸಿಲುಕಿರುವ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯದ ಲಡ್ಡು ಪ್ರಸಾದದಲ್ಲಿ ಮಹಿಳೆಯೊಬ್ಬರು ತಮಗೆ ತಂಬಾಕು ಸಿಕ್ಕಿದೆ ಎಂದು ಹೊಸ ಆರೋಪ ಮಾಡಿದ್ದಾರೆ. ಆದರೆ, ಇದನ್ನು ತಿರುಮಲ ತಿರುಪತಿ ದೇವಸ್ಥಾನಮ್ಸ್‌ (ಟಿಟಿಡಿ) ಮಂಡಳಿ ಅಲ್ಲಗಳೆದಿದೆ.

ಖಮ್ಮಂ ಜಿಲ್ಲೆಯ ದೊಂತು ಪದ್ಮಾವತಿ ಎಂಬ ಮಹಿಳೆ, ‘ನಾನು ಸೆ.19ರಂದು ತಿರುಪತಿ ದೇವಸ್ಥಾನಕ್ಕೆ ತೆರಳಿದ್ದೆ. ಅಲ್ಲಿಂದ ಕೆಲ ಲಡ್ಡು ಪ್ರಸಾದಗಳನ್ನು ತಂದಿದ್ದೆ. ಅದನ್ನು ಮನೆಯವರಿಗೆ ಹಾಗೂ ಅಕ್ಕಪಕ್ಕದವರಿಗೆ ಹಂಚಲು ಹೋದಾಗ ಲಡ್ಡು ಒಳಗೆ ಸಣ್ಣ ಕಾಗದದಲ್ಲಿ ಸುತ್ತಿದ ಕೆಲ ತಂಬಾಕಿನ ತುಣುಕುಗಳು ಸಿಕ್ಕಿವೆ. ಪ್ರಸಾದ ಪವಿತ್ರವಾಗಿರಬೇಕು. ಆದರೆ ಹೀಗೆ ಕಲಬೆರಕೆ ಆಗಿರುವುದನ್ನು ನೋಡಿ ತುಂಬಾ ಬೇಸರವಾಯಿತು’ ಎಂದು ಹೇಳಿಕೊಂಡಿದ್ದಾರೆ.

ಮಾತಾಡೋ ಮುನ್ನ ಯೋಚಿಸು; ಹಿಂದೂಗಳ ವಿರುದ್ಧ ನಾಲಗೆ ಹರಿಬಿಟ್ಟ ಪ್ರಕಾಶ ರಾಜ್‌ಗೆ ಡಿಸಿಎಂ ಪವನ್ ಕಲ್ಯಾಣ ಎಚ್ಚರಿಕೆ

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಟಿಟಿಡಿ, ‘ತಿರುಪತಿ ಲಡ್ಡುವಿನಲ್ಲಿ ತಂಬಾಕಿನ ಪ್ಯಾಕೆಟ್‌ ಸಿಕ್ಕಿದೆ ಎಂಬುದು ಸುಳ್ಳು ಆರೋಪ. ಲಡ್ಡುವನ್ನು ಶ್ರೀವೈಷ್ಣವ ಬ್ರಾಹ್ಮಣರು ದೇವಸ್ಥಾನದ ‘ಲಡ್ಡು ಪೋಟು’ನಲ್ಲಿ ಬಹಳ ಎಚ್ಚರಿಕೆಯಿಂದ ತಯಾರಿಸುತ್ತಾರೆ. ಅಲ್ಲಿ ಸಾಕಷ್ಟು ಭದ್ರತೆ, ಮುನ್ನೆಚ್ಚರಿಕೆ ಕ್ರಮ, ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಎಲ್ಲವೂ ಇರುತ್ತದೆ. ಅಲ್ಲಿ ಯಾರೂ ತಂಬಾಕು ಬಳಸುವುದಿಲ್ಲ’ ಎಂದು ಹೇಳಿದೆ. 

ಇದೇ ವೇಳೆ, ಆರೋಪ ಮಾಡಿರುವ ಮಹಿಳೆಯನ್ನು ಸಂಪರ್ಕಿಸಿರುವ ಟಿಟಿಡಿ, ತನಿಖೆಗಾಗಿ ಲಡ್ಡುವನ್ನು ಮರಳಿಸಬೇಕೆಂದು ಮನವಿ ಮಾಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಂಕೆ ಬಿಹಾರಿ ದೇಗುಲದಲ್ಲಿ ಶಾಲಿನ ಮೇಲೆ ಬಿತ್ತು ಚಿನ್ನದ ಉಂಗುರ: ಶ್ರೀಕೃಷ್ಣನ ಪ್ರತಿಮೆಯನ್ನೇ ಮದುವೆಯಾದ ಪಿಂಕಿ
'ವಂದೇ ಮಾತರಂ..' ದೇಶದ ಸ್ವಾತಂತ್ರ್ಯ ಹೋರಾಟಕ್ಕೆ ಶಕ್ತಿ ತುಂಬಿದ ಮಂತ್ರ ಎಂದ ಪ್ರಧಾನಿ ಮೋದಿ