ಪೇಜಾವರ ಶ್ರೀಗಳ ಅಗಲಿಕೆ ನೋವು ತಂದಿದೆ: ಸಿದ್ದಲಿಂಗ ಸ್ವಾಮೀಜಿ

Suvarna News   | Asianet News
Published : Dec 29, 2019, 11:10 AM IST
ಪೇಜಾವರ ಶ್ರೀಗಳ ಅಗಲಿಕೆ ನೋವು ತಂದಿದೆ: ಸಿದ್ದಲಿಂಗ ಸ್ವಾಮೀಜಿ

ಸಾರಾಂಶ

ಉಡುಪಿ ಪೇಜಾವರ ಶ್ರೀಗಳ ಅಗಲಿಕೆ ನೋವು ತಂದಿದೆ ಎಂದ ತುಮಕೂರು ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ|ರಾಮಜನ್ಮಭೂಮಿ ವಿಚಾರದಲ್ಲಿ ಶ್ರೀಗಳು ಮುಂಚೂಣಿಯಲ್ಲಿದ್ದರು| ಅವರು ಇದ್ದಾಗಲೇ ರಾಮಜನ್ಮಭೂಮಿ ತೀರ್ಮಾನವಾಗಿದ್ದು ಸಂತಸ ತಂದಿತ್ತು| ಬಹುತೇಕರಿಗೆ ರಾಮಮಂದಿರ ನಿರ್ಮಾಣಕ್ಕೆ ಅವರಿಂದಲ್ಲೇ ಶಂಕುಸ್ಥಾಪನೆ ಮಾಡಿಸಬೇಕೆಂಬ ಆಪೇಕ್ಷೆಯಿತ್ತು| ಪ್ರಕೃತಿ ನಿಯಮದ್ದಂತೆ ನಮ್ಮನ್ನು ಬಿಟ್ಟು ಹೋಗಿದ್ದಾರೆ|

ತುಮಕೂರು(ಡಿ.29): ಉಡುಪಿ ಪೇಜಾವರ ಶ್ರೀಗಳ ಅಗಲಿಕೆ ನೋವು ತಂದಿದೆ. ವೈದ್ಯರ ಪ್ರಯತ್ನದ ನಡುವೆ ಅವರು ನಮ್ಮನ್ನು ಅಗಲಿದ್ದಾರೆ, ಇದು ದುಖಃದ ಸಂಗತಿಯಾಗಿದೆ. ನಾಡು ರಾಷ್ಟ್ರಕ್ಕೆ ಅದ್ಭುತವಾದ ಸೇವೆ ಸಲ್ಲಿಸಿ ಸಂಘಟನೆ ಸಂಸ್ಕಾರದ ಸೇವೆ ಮಾಡಿಕೊಂಡಿದ್ದ ಅವರ ಅಗಲಿಕೆ ನೋವು ತಂದಿದೆ ಎಂದು ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಅವರು ಹೇಳಿದ್ದಾರೆ. 

ವಿಶ್ವಸಂತ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿ ಅಸ್ತಂಗತ

ಭಾನುವಾರ ನಗರದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಅವರು, ರಾಮಜನ್ಮಭೂಮಿ ವಿಚಾರದಲ್ಲಿ ಶ್ರೀಗಳು ಮುಂಚೂಣಿಯಲ್ಲಿದ್ದರು. ಅವರು ಇದ್ದಾಗಲೇ ರಾಮಜನ್ಮಭೂಮಿ ತೀರ್ಮಾನವಾಗಿದ್ದು ಸಂತಸ ತಂದಿತ್ತು. ಬಹುತೇಕರಿಗೆ ರಾಮಮಂದಿರ ನಿರ್ಮಾಣಕ್ಕೆ ಅವರಿಂದಲ್ಲೇ ಶಂಕುಸ್ಥಾಪನೆ ಮಾಡಿಸಬೇಕೆಂಬ ಆಪೇಕ್ಷೆಯಿತ್ತು. ಆದರೆ ಪ್ರಕೃತಿ ನಿಯಮದ್ದಂತೆ ನಮ್ಮನ್ನು ಬಿಟ್ಟು ಹೋಗಿದ್ದಾರೆ ಎಂದು ಹೇಳಿದ್ದಾರೆ. 

ಬೆಂಗಳೂರಿನ ವಿದ್ಯಾಪೀಠದಲ್ಲಿ ಪೇಜಾವರ ಶ್ರೀಗಳ ಅಂತ್ಯಸಂಸ್ಕಾರ

ಪೇಜಾವರ ಶ್ರೀಗಳು ದೊಡ್ಡ ಸಂತರಾಗಿ ಆಧ್ಯಾತ್ಮದ ಸಾಧನೆ ಮಾಡಿದ್ದಾರೆ. ಅವರ ಸಾಮಾಜಿಕ ಕಳಕಳ, ಸೇವಾ ಕೈಂಕರ್ಯ ನಮಗೆಲ್ಲಾ ಆದರ್ಶವಾಗಿವೆ. ಮಠದ ಕಿರಿಯ ಶ್ರೀಗಳಿಗೆ ಪೇಜಾವರ ಅಗಲಿಕೆ ದುಖಃ ತಡೆದುಕೊಳ್ಳುವ ಶಕ್ತಿ ಭಗವಂತ ನೀಡಲಿ. ಪೇಜಾವರ ಶ್ರೀಗಳು ಸಿದ್ದಗಂಗಾ ಮಠದ ಬಗ್ಗೆ ಹಾಗೂ ಶಿವಕುಮಾರ ಮಹಾಸ್ವಾಮೀಜಿಗಳ ಬಗ್ಗೆ ಅಪಾರವಾದ ಕಳಕಳಿ ಭಕ್ತಿ ಹೊಂದಿದ್ದರು. ಶಿವಕುಮಾರ ಸ್ವಾಮಿಗಳು ಸ್ವಾಮಿಗಳಿಗೆ ಮಹಾಸ್ವಾಮಿಗಳು ಅಂತ ಹೇಳುತ್ತಿದ್ದರು ಎಂದು ಅವರ ನೆನಪನ್ನು ಮೆಲುಕು ಹಾಕಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!