ಅಂಧವಿಶ್ವಾಸ ಮೂಡಿಸುವ ಕಾರ್ಯಕ್ರಮ ಪ್ರಸಾರ ಮಾಡಿದ್ರೆ ಹುಷಾರ್, ಹೈಕೋರ್ಟ್ ಮಹತ್ವದ ತೀರ್ಪು!

Published : Jan 06, 2021, 06:06 PM IST
ಅಂಧವಿಶ್ವಾಸ ಮೂಡಿಸುವ ಕಾರ್ಯಕ್ರಮ ಪ್ರಸಾರ ಮಾಡಿದ್ರೆ ಹುಷಾರ್, ಹೈಕೋರ್ಟ್ ಮಹತ್ವದ ತೀರ್ಪು!

ಸಾರಾಂಶ

ಅಂಧವಿಶ್ವಾಸಕ್ಕೆ ಪ್ರೋತ್ಸಾಹ ತಡೆಯುವ ನಿಟ್ಟಿನಲ್ಲಿ ಕೋರ್ಟ್‌ ಮಹತ್ವದ ಆದೇಶ| ಮೂಢನಂಬಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಯಾವುದೇ ಬಗೆಯ ಜಾಹೀರಾತು ಪ್ರಸಾರಕ್ಕೆ ತಡೆ| ಪ್ರಸಾರ ಮಾಡುವುದು ದಂಡನೀಯ

ಮುಂಬೈ(ಜ.06): ಬಾಂಬೆ ಹೈಕೋರ್ಟ್‌ನ ಔರಂಗಬಾದ್‌ನ ಪೀಠ ಮಂಗಳವಾರದಂದು ಅಂಧವಿಶ್ವಾಸಕ್ಕೆ ಪ್ರೋತ್ಸಾಹ ನೀಡುವುದನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ನಿರ್ಧಾರ ಪ್ರಕಟಿಸಿದೆ. ಬಾಂಬೆ ಹೈಕೋರ್ಟ್ ಮೂಢನಂಬಿಕೆ ಹಾಗೂ ಅದಕ್ಕೆ ಸಂಬಂಧಿಸಿದ ಯಾವುದೇ ಬಗೆಯ ಜಾಹೀರಾತು ಪ್ರಸಾರಕ್ಕೆ ತಡೆಯೊಡ್ಡುತ್ತಾ ಇಂತಹ ಕಾರ್ಯಕ್ರಮ ಪ್ರಸಾರ ಮಾಡುವುದು ದಂಡನೀಯ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿದ ಚಾನೆಲ್ ಹಾಗೂ ಜಾಹೀರಾತು ನೀಡುವ ಕಂಪನಿಗಳು ಕಾನೂನು ತನಿಖೆ ಎದುರಿಸಬೇಕಾಗುತ್ತದೆ ಎಂದಿದೆ.

ನ್ಯಾಯಾಂಗ ಪೀಠವು ಮಂಗಳವಾರ ಹನುಮಾನ್ ಚಾಲೀಸಾ ಯಂತ್ರದ ಜಾಹೀರಾತು ಪ್ರಸಾರ ವಿಚಾರದಲ್ಲಿ ವಿಚಾರಣೆ ನಡೆಸುತ್ತಾ ನಾಲ್ಕು ಟಿವಿ ಚಾನೆಲ್‌ಗಳ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವ ಆದೇಶವನ್ನೂ ನೀಡಿದೆ. ಇದರಿಂದ ಜನರ ನಡುವೆ ಅಂಧವಿಶ್ವಾಸ ಹೆಚ್ಚುತ್ತದೆ ಎಂದಿದೆ.

ಚಾನೆಲ್‌ಗಳ ಮೇಲೂ ತನಿಖೆ

ಪ್ರಕರಣದ ತನಿಖೆ ವೇಳೆ ನ್ಯಾಯಪೀಠವು ಬ್ಲ್ಯಾಕ್ ಮ್ಯಾಜಿಕ್ ಆಕ್ಟ್ 3ರಡಿ ಕೇವಲ ಜಾದೂ, ಕೆಟ್ಟ ಪದ್ಧತಿಯನ್ನು ನಿಷೇಧಿಸುವುದರೊಂದಿಗೆ, ಇದರ ಪ್ರಸಾರವನ್ನೂ ತಡೆಯುವ ಕೆಲಸ ನಿರ್ವಹಿಸುತ್ತದೆ. ಅಧಿನಿಯಮ 3 (2)ರಡಿ ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗುವುದು ಅಪರಾಧದ ಶ್ರೇಣಿಗೊಳಪಡುತ್ತದೆ ಎಂದಿದ್ದಾರೆ. ಹೀಗಾಗಿ ಇಂತಹ ಜಾಹೀರಾತು ಪ್ರಸಾರ ಮಾಡುವವರೂ ಇದರಡಿ ತನಿಖೆಗೊಳಪಡುತ್ತಾರೆ ಎಂದಿದೆ. 

ಅರ್ಜಿಯಲ್ಲೇನಿತ್ತು?

ಶಿಕ್ಷಕ ರಾಜೇಂದ್ರ ಅಂಭಾರೆ  ಹೈಕೋರ್ಟ್‌ನಲ್ಲಿ ಅರ್ಜಿಯೊಂದನ್ನು ಸಲ್ಲಿಸಿದ್ದು, ಇದರಲ್ಲಿ ಅವರು ದೇವ ದೇವತೆಗಳ ಹೆಸರಿನಲ್ಲಿ ಮಾಡಲಾಗುವ ಯಂತ್ರದ ಕುರಿತಾಗಿ ವಾಹಿನಿಯಲ್ಲಿ ಪ್ರಸಾರವಾಗುವ ಇಂತಹ ಕಾರ್ಯಕ್ರಮಗಳ ಬಗ್ಗೆ ಉಲ್ಲೇಖಿಸಿದ್ದರು. ಅಲ್ಲದೇ ಜನರಲ್ಲಿ ಆಸೆ ಹುಟ್ಟಿಸಿ ಖರೀದಿಸುವಂತೆ ಮಾಡುತ್ತಿದ್ದಾರೆಂದೂ ಉಲ್ಲೇಖಿಸಿದ್ದರು. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ದಿನಕ್ಕೆರಡು ಬಾರಿ ಠಾಣೆಗೆ ಹಾಜರಾಗಲು ಸೂಚನೆ, ಆದೇಶ ಪ್ರಶ್ನಿಸಿದ ಆರೋಪಿಗೆ 1 ಲಕ್ಷ ರೂ ಪರಿಹಾರ
Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!