
ಚೆನ್ನೈ(ಜೂ. 07) ಸಲಿಂಗ ಕಾಮದ ಬಗ್ಗೆ, ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಆಗಾಗ ಚರ್ಚೆಗಳು ನಡೆಯುತ್ತಲೇ ಇರುತ್ತವೆ. ಮದ್ರಾಸ್ ಹೈಕೋರ್ಟ್ LGBTQ+ ಸಮುದಾಯದ ಹಕ್ಕುಗಳ ರಕ್ಷಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.
ನ್ಯಾಯಮೂರ್ತಿ ವೆಂಕಟೇಶ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಸಲಿಂಗ ಸಂಬಂಧಗಳ ಒಳ-ಹೊರಗು ಅರ್ಥ ಮಾಡಿಕೊಳ್ಳಲು, ಲೈಂಗಿಕ ಅಪ್ಪಸ್ಂಖ್ಯಾತರ ಸಮಸ್ಯೆ ಆಲಿಸಲು ಸ್ವತಃ ನ್ಯಾಯಮೂರ್ತಿಗಳೇ ಈ ಸಮುದಾಯದ ಜತೆ ಸಂವಾದ ನಡೆಸಿದ್ದರು. ಮಾತುಕತೆ ಮೂಲಕ ಅನೇಕ ವಿಚಾರ ಅರ್ಥ ಮಾಡಿಕೊಂಡಿದ್ದರು.
'ನಾನು ಉಭಯಲಿಂಗಿಯಾ, ಹೀಗೆ ಮಾಡಿದ್ರೆ ತಪ್ಪಾ?'
ಲೈಂಗಿಕ ಅಲ್ಪಸಂಖ್ಯಾತರನ್ನು ನೋಡುವ ದೃಷ್ಟಿಕೋನ ಬದಲಾಗಬೇಕಿದೆ. ಪೊಲೀಸರು ಇವರಿಗೆ ರಕ್ಷಣೆ ನೀಡುವ ಕೆಲಸ ಆಗಬೇಕಿದೆ ಎಂದು ಆದೇಶ ಹೇಳಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಆದೇಶವನ್ನು ಕೊಂಡಾಡಲಾಗಿದೆ. ಇಂಥ ನ್ಯಾಯಾಧೀಶರಿಂದ ಮಾತ್ರ ಬದಲಾವಣೆ ಸಾಧ್ಯ ಎಂಬ ಅಭಿಪ್ರಾಯ ಹೊರಹಾಕಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ