ರಾಹುಲ್‌, ಕಾಂಗ್ರೆಸ್‌, ಕಾಂಗ್ರೆಸ್ಸಿಗರ ಟ್ವೀಟರ್‌ ಖಾತೆ ಮತ್ತೆ ಸಕ್ರಿಯ!

Published : Aug 15, 2021, 07:40 AM IST
ರಾಹುಲ್‌, ಕಾಂಗ್ರೆಸ್‌, ಕಾಂಗ್ರೆಸ್ಸಿಗರ ಟ್ವೀಟರ್‌ ಖಾತೆ  ಮತ್ತೆ ಸಕ್ರಿಯ!

ಸಾರಾಂಶ

* ‘ಸತ್ಯಮೇವ ಜಯತೇ’ ಎಂದು ಟ್ವೀಟ್‌ ಮಾಡಿದ ಕಾಂಗ್ರೆಸ್‌ * ರಾಹುಲ್‌, ಕಾಂಗ್ರೆಸ್‌, ಕಾಂಗ್ರೆಸ್ಸಿಗರ ಟ್ವೀಟರ್‌ ಖಾತೆ ‘ಅನ್‌ಲಾಕ್‌’ * ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಖಾತೆ ಲಾಕ್‌ ಮಾಡಿದ್ದ ಟ್ವೀಟರ್‌

ನವದೆಹಲಿ(ಆ.15): ಅತ್ಯಾಚಾರ ಸಂತ್ರಸ್ಥೆಯ ಪೋಷಕರ ಫೋಟೋ ಬಹಿರಂಗಪಡಿಸಿದ ಕಾರಣಕ್ಕೆ ಲಾಕ್‌ ಮಾಡಲಾಗಿದ್ದ ರಾಹುಲ್‌ ಗಾಂಧಿ, ಕಾಂಗ್ರೆಸ್‌ ಪಕ್ಷ ಮತ್ತು ಹಲವು ಕಾಂಗ್ರೆಸ್‌ ನಾಯಕರ ಟ್ವೀಟರ್‌ ಖಾತೆಗಳನ್ನು ಶನಿವಾರ ಮರುಸ್ಥಾಪನೆ ಮಾಡಲಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ‘ಸತ್ಯಮೇವ ಜಯತೇ’ ಎಂದು ಟ್ವೀಟ್‌ ಮಾಡಿದೆ.

ಕೆಲ ದಿನಗಳ ಹಿಂದೆ ದೆಹಲಿಯ ಅತ್ಯಾಚಾರ ಸಂತ್ರಸ್ಥೆಯ ಪೋಷಕರ ಭೇಟಿ ಮಾಡಿದ್ದ ರಾಹುಲ್‌, ಈ ಫೋಟೋಗಳನ್ನು ತಮ್ಮ ಟ್ವೀಟರ್‌ ಖಾತೆಯಲ್ಲಿ ಪ್ರಕಟಿಸಿದ್ದರು. ಅದನ್ನು ಕಾಂಗ್ರೆಸ್‌ ಮತ್ತು ಹಲವು ಕಾಂಗ್ರೆಸ್‌ ನಾಯಕರು ರೀಟ್ವೀಟ್‌ ಮಾಡಿದ್ದರು. ಆದರೆ ಇದು ಸಂಸ್ಥೆಯ ನಿಯಮ ಎನ್ನುವ ಕಾರಣ ಈ ಎಲ್ಲಾ ಖಾತೆಗಳನ್ನು ಟ್ವೀಟರ್‌ ಸಂಸ್ಥೆ ಕಳೆದ ವಾರದಿಂದ ತಡೆಹಿಡಿದಿತ್ತು.

ಶನಿವಾರ ಖಾತೆ ಮರುಸ್ಥಾಪನೆಗೊಂಡ ಬೆನ್ನಲ್ಲೇ, ಸತ್ಯಮೇಯ ಜಯತೇ ಎಂದು ಕಾಂಗ್ರೆಸ್‌ ಪಕ್ಷದ ಅಧಿಕೃತ ಟ್ವೀಟರ್‌ ಖಾತೆಯಿಂದ ಟ್ವೀಟ್‌ ಮಾಡಲಾಗಿದೆ. ಜೊತೆಗೆ ಪಕ್ಷ ಮತ್ತು ಹಲವು ಕಾಂಗ್ರೆಸ್ಸಿಗರು ‘ಟ್ವೀಟರ್‌ನ ಬೂಟಾಟಿಕೆ ವಿರುದ್ಧ ಧ್ವನಿ ಎತ್ತಿ’ ಎಂದು ಹ್ಯಾಷ್‌ಟ್ಯಾಗ್‌ ಮಾಡಿ ಅಭಿಯಾನ ಆರಂಭಿಸಿದ್ದಾರೆ.

‘ಅತ್ಯಾಚಾರ ಸಂತ್ರಸ್ತೆಯ ಪರ ಧ್ವನಿ ಎತ್ತಿದ್ದಕ್ಕಾಗಿ ನಮ್ಮ ಖಾತೆ ತಡೆಹಿಡಿದು ಹಾಗೂ ಮರುಸ್ಥಾಪಿಸಿದ ಬಗ್ಗೆ ಮತ್ತು ಮೋದಿ ಸರ್ಕಾರಕ್ಕೆ ಹೆದರಿಕೊಂಡು ನಮ್ಮ ರಾಜಕೀಯದಲ್ಲಿ ಪ್ರವೇಶ ನಿಲ್ಲಿಸಿ ಎಂದಿದ್ದಕ್ಕೆ’ ಟ್ವೀಟರ್‌ನಿಂದ ಭಾರತೀಯರು ಹೊಣೆಗಾರಿಕೆ ಬಯಸುತ್ತಿದ್ದಾರೆ. ಮೋದಿ ಸರ್ಕಾರಕ್ಕೆ ಹೆದರಿಕೊಂಡು ಭಾರತೀಯರ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಟ್ವೀಟರ್‌ ಬಿಡಬೇಕು ಎಂದು ನಾವು ಒತ್ತಾಯಿಸುತ್ತೇವೆ’ ಎಂದು ಕಾಂಗ್ರೆಸ್‌ ನಾಯಕರೊಬ್ಬರು ಟ್ವೀಟ್‌ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Chinnu Pappu: ಕಾಸರಗೋಡಿನಲ್ಲಿ ಶವವಾಗಿ ಪತ್ತೆಯಾದ ಯುವ ಇನ್ಫ್ಲುಯೆನ್ಸರ್ ಚಿನ್ನು ಪಾಪು ಹಿನ್ನಲೆಯೇನು?
ಚಿನ್ನ ಅಡವಿಟ್ಟವರಿಗೆ ಗುಡ್ ನ್ಯೂಸ್... ಸಾಲ ಮನ್ನಾ ಬಗ್ಗೆ ಶೀಘ್ರದಲ್ಲೇ ಮಹತ್ವದ ಘೋಷಣೆ?