ಕುನೋ ಉದ್ಯಾನಕ್ಕೆ ಹೊಂದಿಕೊಂಡ ಚೀತಾಗಳು: ವಿಡಿಯೋ ಟ್ವಿಟ್ ಮಾಡಿದ ಮೋದಿ

Published : Nov 06, 2022, 10:07 AM IST
ಕುನೋ ಉದ್ಯಾನಕ್ಕೆ ಹೊಂದಿಕೊಂಡ ಚೀತಾಗಳು: ವಿಡಿಯೋ ಟ್ವಿಟ್ ಮಾಡಿದ ಮೋದಿ

ಸಾರಾಂಶ

ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ 8 ಚೀತಾಗಳ ಪೈಕಿ 2 ಚೀತಾಗಳನ್ನು ಕ್ವಾರಂಟೈನ್‌ ಕೇಂದ್ರದಿಂದ ಶನಿವಾರ ಬೇಲಿ ಹಾಕಿದ ಕೊಂಚ ವಿಸ್ತಾರ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕುನೋ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ತಿಳಿಸಿದ್ದಾರೆ. 

ಶಿಯೋಪುರ (ಮ.ಪ್ರ.): ನಮೀಬಿಯಾದಿಂದ ಭಾರತಕ್ಕೆ ತರಲಾಗಿರುವ 8 ಚೀತಾಗಳ ಪೈಕಿ 2 ಚೀತಾಗಳನ್ನು ಕ್ವಾರಂಟೈನ್‌ ಕೇಂದ್ರದಿಂದ ಶನಿವಾರ ಬೇಲಿ ಹಾಕಿದ ಕೊಂಚ ವಿಸ್ತಾರ ಅರಣ್ಯ ಪ್ರದೇಶಕ್ಕೆ ಬಿಡುಗಡೆ ಮಾಡಲಾಗಿದೆ ಎಂದು ಕುನೋ ರಾಷ್ಟ್ರೀಯ ಉದ್ಯಾನವನದ ಅಧಿಕಾರಿಗಳು ತಿಳಿಸಿದ್ದಾರೆ. 

ಭಾರತದ ವಾಯುಗುಣಕ್ಕೆ (Indian climate) ಹೊಂದಿಕೊಳ್ಳುವ ಸಲುವಾಗಿ ಈ ಚೀತಾಗಳನ್ನು(cheetahs) ಈವರೆಗೆ ಕ್ವಾರಂಟೈನ್‌ ಕೇಂದ್ರದಲ್ಲಿ (quarantine center) ಇರಿಸಲಾಗಿತ್ತು. ಚೀತಾಗಳನ್ನು ಆಮದು ಮಾಡಿಕೊಂಡು ಬಹುತೇಕ 2 ತಿಂಗಳು ಕಳೆದಿರುವುದರಿಂದ 2 ಚೀತಾಗಳನ್ನು ಕೊಂಚ ವಿಸ್ತೃತ ಭಾಗಕ್ಕೆ ಬಿಡಲಾಗಿದೆ. ಉಳಿದ 6 ಚೀತಾಗಳನ್ನು ಕ್ವಾರಂಟೈನ್‌ ಕೇಂದ್ರದಲ್ಲೇ ಉಳಿಸಿಕೊಳ್ಳಲಾಗಿದೆ. ಇವುಗಳನ್ನು ಸಹ ಹಂತಹಂತವಾಗಿ ಅರಣ್ಯಕ್ಕೆ ಬಿಡುಗಡೆ ಮಾಡಲಾಗುತ್ತದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಮೀಬಿಯಾದಿಂದ ಭಾರತಕ್ಕೆ ಬಂದ ಚೀತಾ ‘ಆಶಾ’ ಗರ್ಭಿಣಿ

ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಕೂಡ ಈ ಬಗ್ಗೆ ಟ್ವಿಟ್ ಮಾಡಿದ್ದಾರೆ. ಇದೊಂದು ಖುಷಿಯ ವಿಚಾರ, ಕಡ್ಡಾಯ ಕ್ವಾರಂಟೈನ್ ನಂತರ ಕುನೋ ಆವಾಸಸ್ಥಾನಕ್ಕೆ (Kuno habitat) ಮತ್ತಷ್ಟು ಹೊಂದಿಕೊಳ್ಳಲು 2 ಚಿರತೆಗಳನ್ನು ವಿಸ್ತಾರವಾದ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಇನ್ನುಳಿದವುಗಳನ್ನು ಕೂಡ ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಈ ಎಲ್ಲಾ ಚಿರತೆಗಳು ಆರೋಗ್ಯಕರವಾಗಿವೆ. ಚುರುಕಾಗಿದ್ದು, ಇಲ್ಲಿನ ಪರಿಸರಕ್ಕೆ ಚೆನ್ನಾಗಿ ಹೊಂದಿಕೊಳ್ಳುತ್ತಿವೆ ಎಂಬುದನ್ನು ತಿಳಿದು ಖುಷಿಯಾಗಿದೆ ಎಂದು ಪ್ರಧಾನಿ ಟ್ವಿಟ್ ಮಾಡಿದ್ದಾರೆ. 

 

ಭಾರತಕ್ಕೆ ಬಂದಿಳಿದ ಆಫ್ರಿಕನ್ ಚೀತಾಗೆ ಯಾಕಿಷ್ಟು ಮಹತ್ವ: ವನ್ಯಜೀವಿ ತಜ್ಞರ ಮಾತು ಕೇಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..