ಯುನಿಫಾರ್ಮ್‌ನಲ್ಲಿ ಉದ್ಯಮಿಗೆ ಬಾಡಿಗಾರ್ಡ್ ಆಗಿ ರೀಲ್ ಮಾಡಿದ ಪೊಲೀಸರು ಸಸ್ಪೆಂಡ್

Published : Jul 09, 2024, 03:27 PM IST
ಯುನಿಫಾರ್ಮ್‌ನಲ್ಲಿ ಉದ್ಯಮಿಗೆ ಬಾಡಿಗಾರ್ಡ್ ಆಗಿ ರೀಲ್ ಮಾಡಿದ ಪೊಲೀಸರು ಸಸ್ಪೆಂಡ್

ಸಾರಾಂಶ

ರೀಲ್ ಮಾಡಿದ್ದ ಇಬ್ಬರು ಅಧಿಕಾರಿಗಳು ಅಮಾನತಿನ ಶಿಕ್ಷೆಗೆ ಒಳಗಾಗಿದ್ದಾರೆ. ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ಗಳು ರಿಯಲ್ ಎಸ್ಟೇಟ್ ಉದ್ಯಮಿಗೆ ಬಾಡಿಗಾರ್ಡ್‌ ರೀತಿಯಲ್ಲಿ ಪೋಸ್ ಕೊಟ್ಟಿದ್ದರು.

ಲಕ್ನೋ: ಸಮವಸ್ತ್ರ ಧರಿಸಿ ರೀಲ್ ಮಾಡಿದ್ದ ಇಬ್ಬರು ಸಬ್‌ ಇನ್‌ಸ್ಪೆಕ್ಟರ್ ಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಇಬ್ಬರು ಪೊಲೀಸ್ ಅಧಿಕಾರಿಗಳು ರಿಯಲ್ ಎಸ್ಟೇಟ್ ಉದ್ಯಮಿ ಜೊತೆ ಸೇರಿ ಹೆದ್ದಾರಿಯಲ್ಲಿ ಭರ್ಜರಿ ರೀಲ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ರೀಲ್‌ಗೆ ಸಾರ್ವಜನಿಕ ವಲಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಇದೀಗ ರೀಲ್ ಮಾಡಿದ್ದ ಇಬ್ಬರು ಅಧಿಕಾರಿಗಳು ಅಮಾನತಿನ ಶಿಕ್ಷೆಗೆ ಒಳಗಾಗಿದ್ದಾರೆ. ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ಗಳು ರಿಯಲ್ ಎಸ್ಟೇಟ್ ಉದ್ಯಮಿಗೆ ಬಾಡಿಗಾರ್ಡ್‌ ರೀತಿಯಲ್ಲಿ ಪೋಸ್ ಕೊಟ್ಟಿದ್ದರು.

ಧರ್ಮೇಂದ್ರ ಶರ್ಮಾ ಮತ್ತು ರಿತೇಶ್ ಕುಮಾರ್ ಅಮಾನತುಗೊಂಡ ಅಧಿಕಾರಿಗಳು. ಇಬ್ಬರು ಅಂಕುರ ವಿಹಾರ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಗಾಜಿಯಾಬಾದ್ ಜಿಲ್ಲೆಯ ಲೋನಿ ವೃತ್ತದ ಟ್ರೋನಿಕಾ ಸಿಟಿ ಬಳಿಯ ಉದ್ಯಮಿ ಕಚೇರಿ ಮುಂದಿನ ರಸ್ತೆಯಲ್ಲಿ ಈ ರೀಲ್ ಮಾಡಲಾಗಿದೆ ಎಂದು ಪಿಟಿಐ ವರದಿ ಮಾಡಿದೆ. ಈ ರೀಲ್ ಮಾಡುವ ಉದ್ದೇಶದಿಂದಲೇ ಧರ್ಮೇಂದ್ರ ಶರ್ಮಾ ಮತ್ತು ರಿತೇಶ್ ಕುಮಾರ್ ಉದ್ಯಮಿಯ ಕಚೇರಿ ಬಳಿ ತೆರಳಿದ್ದರು. 

ಒಂದೇ ಒಂದು ಗುರಿ ಸಾಧನೆಗೆ 20 ಬಾಯ್‌ಫ್ರೆಂಡ್‌ ಮಾಡ್ಕೊಂಡ ಚಾಲಾಕಿ ಯುವತಿ

ಉದ್ಯಮಿಯನ್ನು ಸರ್ತಾಜ್ ಎಂದು ಗುರುತಿಸಲಾಗಿದೆ. ಇಬ್ಬರು ಪೊಲೀಸ್ ಅಧಿಕಾರಿಗಳ ಜೊತೆ ಉದ್ಯಮಿ ಸರ್ತಾಜ್ ಹಸ್ತಲಾಘವ ಮಾಡುತ್ತಾರೆ. ನಂತರ ಮೂವರು ನಿಧಾನವಾಗಿ ವಾಕ್ ಮಾಡುತ್ತಾರೆ. ಈ ವಿಡಿಯೋ ಮಾಸ್ ಹಾಡು ಹಾಕಲಾಗಿದೆ. ಸದ್ಯ ಈ ವಿಡಿಯೋ ವೈರಲ್ ಆಗಿದ್ದು, ಕೆಲಸ ಮಾಡೋದು ಬಿಟ್ಟು ಇನ್ನೇನಾದ್ರೂ ಮಾಡಿದ್ರೆ ಹೀಗೆ ಆಗೋದು. ಮಾಡಿದ್ದುಣ್ಣೋ ಮಾರಾಯಾ ಎಂಬಂತೆ ಅಧಿಕಾರಿಗಳ ಸ್ಥಿತಿ ಆಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಗತ್ತೇ ಮೆಚ್ಚುವ ಸಿನಿಮಾ ನಿರ್ದೇಶಕ ಎಸ್‌ಎಸ್ ರಾಜಮೌಳಿಯ ಅಚ್ಚುಮೆಚ್ಚಿನ ಸಿನಿಮಾ ಯಾವುದು? ಸೀಕ್ರೆಟ್ ರಿವೀಲ್!
ನಿಫಾ ವೈರಸ್‌ನಿಂದ ಆಸ್ಪತ್ರೆ ದಾಖಲಾದ ಬಂಗಾಳದ ನರ್ಸ್ ಹೃದಯಾಘಾತಕ್ಕೆ ಬಲಿ,ಅಲರ್ಟ್ ಘೋಷಣೆ