ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನೆಯ ಇಬ್ಬರು ಯೋಧರು ನಾಪತ್ತೆ

Published : Jun 11, 2022, 11:58 PM IST
ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನೆಯ ಇಬ್ಬರು ಯೋಧರು ನಾಪತ್ತೆ

ಸಾರಾಂಶ

ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಇಬ್ಬರು ಯೋಧರು 14 ದಿನಗಳಿಂದ ನಾಪತ್ತೆಯಾಗಿದ್ದಾರೆ. ಸೈನಿಕರೊಬ್ಬರ ಪತ್ನಿ ಭಾರತೀಯ ಸೇನೆಯಿಂದ ಈ ಬಗ್ಗೆ ಉತ್ತರವನ್ನು ಕೋರಿದ್ದಾರೆ.

ಅರುಣಾಚಲ ಪ್ರದೇಶ (ಜೂ. 11): ಅರುಣಾಚಲ ಪ್ರದೇಶದಲ್ಲಿ ನಿಯೋಜನೆಗೊಂಡಿದ್ದ ಭಾರತೀಯ ಸೇನೆಯ ಇಬ್ಬರು ಯೋಧರು ಕಳೆದ 14 ದಿನಗಳಿಂದ ನಾಪತ್ತೆಯಾಗಿದ್ದಾರೆ. ಉತ್ತರಾಖಂಡದ ಇಬ್ಬರು 7 ನೇ ಗರ್ವಾಲ್ ರೈಫಲ್ಸ್ ಯೋಧರನ್ನು ಹರೇಂದ್ರ ನೇಗಿ ಮತ್ತು ಪ್ರಕಾಶ್ ಸಿಂಗ್ ರಾಣಾ ಎಂದು ಗುರುತಿಸಲಾಗಿದ್ದು, ಮೇ 28 ರಂದು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. 

ನದಿಯಲ್ಲಿ ಮುಳುಗಿರುವ ಶಂಕೆ: "ಮೇ 29 ರಂದು ಸೇನಾ ಅಧಿಕಾರಿಗಳು ತಮಗೆ ಕರೆ ಮಾಡಿ ಪತಿ ಮೇ 28 ರಂದು ನಾಪತ್ತೆಯಾಗಿದ್ದಾರೆ ಎಂದು ತಿಳಿಸಿದ್ದಾರೆ" ಎಂದು ಪ್ರಕಾಶ್ ಸಿಂಗ್ ರಾಣಾ ಅವರ ಪತ್ನಿ ಮಮತಾ ರಾಣಾ ಹೇಳಿದ್ದಾರೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ. ಜೂನ್ 9 ರಂದು ಎರಡನೇ ಫೋನ್ ಕರೆ ಬಂದಿದ್ದು ಇಬ್ಬರೂ ಸೈನಿಕರು ನದಿಯಲ್ಲಿ ಮುಳುಗಿದ್ದಾರೆ ಎಂದು ಶಂಕಿಸಲಾಗಿದೆ ಎಂದು ಅವರು ನನಗೆ ಹೇಳಿದರು ಎಂದು ಮಮತಾ ತಿಳಿಸಿದ್ದಾರೆ.

ಮಮತಾ ಮತ್ತು ಅವರ ಇಬ್ಬರು ಅಪ್ರಾಪ್ತ ಮಕ್ಕಳಾದ ಅನುಜ್ (10) ಮತ್ತು ಅನಾಮಿಕಾ (7) ಪ್ರಕಾಶ್ ಅವರ ಮಾತಿಗಾಗಿ 14 ದಿನಗಳಿಂದ ಕಾಯುತ್ತಿದ್ದಾರೆ. ಆದರೆ, ಸೇನಾ ಅಧಿಕಾರಿಗಳು ಮಮತಾ ಅವರ ಫೋನ್ ಕರೆಗಳಿಗೆ ಉತ್ತರಿಸಿಲ್ಲ ಅಥವಾ ಈ ವಿಷಯದ ಬಗ್ಗೆ ಹೇಳಿಕೆಯನ್ನು ನೀಡಿಲ್ಲ. 

ಇದನ್ನೂ ಓದಿ: ಪತ್ನಿ ಸೀಮಂತಕ್ಕೆ ಬಂದಿದ್ದ ಯೋಧ ಅಪಘಾತದಲ್ಲಿ ದುರ್ಮರಣ!

ಸೇನೆ ಮಾಹಿತಿ ನೀಡಲಿ: ಹರೇಂದ್ರ ನೇಗಿ ಅವರ ಪತ್ನಿ ಪೂನಂ ನೇಗಿ, ಇಬ್ಬರು ಸೈನಿಕರು ನದಿಯ ಬಳಿ ಹೋಗಿದ್ದು ಯಾರಿಗೂ ತಿಳಿದಿಲ್ಲ ಎಂದು ನಂಬಲು ನನಗೆ ಕಷ್ಟವಾಗುತ್ತಿದೆ ಎಂದು ಹೇಳಿದ್ದಾರೆ. ಅಲ್ಲದೇ ಅಲ್ಲಿ ಏನಾಗಿದೆ ಎಂಬುದನ್ನು ಸೇನೆಯು ವಿವರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.ಹರೇಂದ್ರ ನೇಗಿ ಮತ್ತು ಅವರ ಪತ್ನಿ ಪೂನಂ ನೇಗಿ ಅವರಿಗೆ ಒಂದು ವರ್ಷದ ಮಗುವಿದ್ದು, ಮದುವೆಯಾಗಿ ಕೇವಲ ಮೂರು ವರ್ಷಗಳಾಗಿವೆ. 

ಈ ನಡುವೆ ಸಹಸ್‌ಪುರದ ಬಿಜೆಪಿ ಶಾಸಕ ಸಹದೇವ್ ಸಿಂಗ್ ಪುಂಡೀರ್ ಶುಕ್ರವಾರ ಪ್ರಕಾಶ್ ಸಿಂಗ್ ರಾಣಾ ಅವರ ಕುಟುಂಬವನ್ನು ಅವರ ಸೈನಿಕ ಕಾಲೋನಿ ನಿವಾಸದಲ್ಲಿ ಭೇಟಿಯಾಗಿದ್ದಾರೆ. "ನಾನು ಈ ಬಗ್ಗೆ ಕೇಂದ್ರ ರಕ್ಷಣಾ ಖಾತೆ ರಾಜ್ಯ ಸಚಿವ ಅಜಯ್ ಭಟ್ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ಏನಾದರೂ ಮಾಡಲಾಗುವುದು ಎಂದು ಅವರು ನನಗೆ ಭರವಸೆ ನೀಡಿದ್ದಾರೆ" ಎಂದು ಪುಂಡೀರ್ ಹೇಳಿದ್ದಾರೆ. ಅಲ್ಲದೇ ನಾಪತ್ತೆಯಾಗಿರುವ ಯೋಧರ ವಿವರಗಳನ್ನು ಕೇಂದ್ರ ಸಚಿವರಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಲಡಾಖ್‌ನಲ್ಲಿ ಭಾರೀ ರಸ್ತೆ ಅಪಘಾತ, ನದಿಗುರುಳಿದ 26 ಯೋಧರಿದ್ದ ಸೇನಾ ವಾಹನ, 7 ಸಾವು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

India Latest News Live:ಸ್ವತಃ ಏರ್‌ಪೋರ್ಟಿಗೇ ತೆರಳಿ ಪುಟಿನ್‌ಗೆ ಪ್ರಧಾನಿ ಮೋದಿ ಅಚ್ಚರಿಯ ಸ್ವಾಗತ
ತಾಯ್ನಾಡಿನ ರಕ್ಷಣೆಗೆ ಅಂಬೇಡ್ಕರರ ಪ್ರತಿಜ್ಞೆ- ದೇಶದ ರಕ್ಷಣೆ, ಅಭಿವೃದ್ಧಿ ಬಗ್ಗೆ ಯೋಚಿಸುತ್ತಿದ್ದವರು