
ನವದೆಹಲಿ(ಜು.21): ದೇಶಾದ್ಯಂತ ಸೋಂಕಿನ ಪ್ರಮಾಣ ದಾಖಲೆಯ ಪ್ರಮಾಣದಲ್ಲಿ ಇಳಿದಿರುವ ಹೊತ್ತಿನಲ್ಲೇ, ದೇಶದಲ್ಲಿನ 6 ವರ್ಷ ಮೇಲ್ಪಟ್ಟಶೇ.67.6ರಷ್ಟುಜನರಲ್ಲಿ ಕೋವಿಡ್ ಪ್ರತಿಕಾಯಗಳು ಕಂಡುಬಂದಿವೆ. ಆದರೆ ಇನ್ನೂ 40 ಕೋಟಿ ಜನರು ಇದರ ವ್ಯಾಪ್ತಿಯಿಂದ ಹೊರಗಿರುವ ಕಾರಣ, ಅವರ ಎಚ್ಚರವಾಗಿರಬೇಕಾದ ಅಗತ್ಯವಿದೆ. ಈ ಹಂತದಲ್ಲಿ ಕೋವಿಡ್ ಮಾರ್ಗಸೂಚಿ ಉಲ್ಲಂಘನೆಯ ಯಾವುದೇ ನಿರ್ಲಕ್ಷ್ಯಕ್ಕೆ ಅವಕಾಶವಿಲ್ಲ ಐಸಿಎಂಆರ್ ಸಮೀಕ್ಷೆ ಹೇಳಿದೆ.
ಜೂನ್ ಮತ್ತು ಜುಲೈ ತಿಂಗಳಲ್ಲಿ ಐಸಿಎಂಆರ್ ದೇಶದ 21 ರಾಜ್ಯಗಳ 70 ಜಿಲ್ಲೆಗಳ 28975 ಜನರನ್ನು ಸೆರೋಸರ್ವೇ (ರಕ್ತದಲ್ಲಿನ ಸೋಂಕಿನ ಅಂಶ ಪತ್ತೆ)ಗೆ ಒಳಪಡಿಸಿತ್ತು. ಇದನ್ನು ದೇಶವ್ಯಾಪಿ ಆಧರಿಸಿ ನೋಡಿದಾಗ, ಒಟ್ಟು ಜನಸಂಖ್ಯೆಯ ಶೇ.67.6ರಷ್ಟುಜನರಲ್ಲಿ ಸೋಂಕು ನಿರೋಧಕ ಶಕ್ತಿ ಉತ್ಪತ್ತಿಯಾಗಿರುವುದು ಕಂಡುಬಂದಿದೆ. ಆದರೆ ಈ ವ್ಯಾಪ್ತಿಯಿಂದ ಹೊರಗಿರುವ 40 ಕೋಟಿ ಜನರಿಗೆ ಸೋಂಕಿನ ಅಪಾಯ ಇದ್ದೇ ಇದೆ. ಹೀಗಾಗಿ ಅವರೆಲ್ಲಾ ಎಚ್ಚರದಿಂದ ಇರಬೇಕು. ಕೋವಿಡ್ ಇನ್ನೂ ಹೋಗದಿರುವುದರಿಂದ ಯಾವುದೇ ಸಾಮಾಜಿಕ, ಧಾರ್ಮಿಕ, ರಾಜಕೀಯ ಸಮಾರಂಭಗಳು ಹಾಗೂ ಅನಗತ್ಯ ಪ್ರಯಾಣಗಳನ್ನು ಸ್ಥಗಿತಗೊಳಿಸಬೇಕು. ಸಂಪೂರ್ಣ ಲಸಿಕೆ ಪಡೆದಿದ್ದರೆ ಮಾತ್ರ ಪ್ರಯಾಣ ಮಾಡಿ ಎಂದು ಸಮೀಕ್ಷಾ ವರದಿ ಹೇಳಿದೆ.
ಇದೇ ವೇಳೆ ಈ ಪೈಕಿ 85 ಶೇ. ಆರೋಗ್ಯ ಕಾರ್ಯಕರ್ತರಲ್ಲಿ ಕೋವಿಡ್ ಪ್ರತಿಕಾಯಗಳು ಪತ್ತೆಯಾಗಿದೆ. ಜೊತೆಗೆ ಆರೋಗ್ಯ ಕಾರ್ಯಕರ್ತರಲ್ಲಿ ಮೂರನೇ ಒಂದರಷ್ಟುಮಂದಿ ಇನ್ನೂ ಲಸಿಕೆ ಪಡೆದುಕೊಂಡಿಲ್ಲ ಎಂದು ವರದಿ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ