ಉದಯಪುರ ಕನ್ಹಯ್ಯಾಲಾಲ್ ಶಿರಚ್ಛೇದ, ಭಾರತದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದ ತಸ್ಲೀಮಾ ನಸ್ರೀನ್

Published : Jun 29, 2022, 12:24 PM ISTUpdated : Jun 30, 2022, 10:34 AM IST
ಉದಯಪುರ ಕನ್ಹಯ್ಯಾಲಾಲ್ ಶಿರಚ್ಛೇದ, ಭಾರತದಲ್ಲಿ ಹಿಂದೂಗಳು ಸುರಕ್ಷಿತವಾಗಿಲ್ಲ ಎಂದ ತಸ್ಲೀಮಾ ನಸ್ರೀನ್

ಸಾರಾಂಶ

* ರಾಜಸ್ಥಾನದ ಉದಯಪುರದಲ್ಲಿ ಕನ್ಹಯ್ಯಾಲಾಲ್ ಹೆಸರಿನ ಟೈಲರ್ ಕತ್ತು ಸೀಳಿ ಕೊಲೆ * ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಕ್ಕಾಗಿ ಕೊಲೆ ಎಂದ ಮತಾಂಧರು * ಭಾರತದಲ್ಲಿ ಹಿಂದೂಗಳು ಮಾತ್ರ ಸುರಕ್ಷಿತವಾಗಿಲ್ಲ ಎಂದ ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್

ಜೈಪುರ(ಜೂ.29) ರಾಜಸ್ಥಾನದ ಉದಯಪುರದಲ್ಲಿ ಮಂಗಳವಾರ ಕನ್ಹಯ್ಯಾಲಾಲ್ ಹೆಸರಿನ ಟೈಲರ್ ಕತ್ತು ಸೀಳಿ ಕೊಲೆ ಮಾಡಲಾಗಿದೆ. ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಪೋಸ್ಟ್ ಮಾಡಿದ್ದಕ್ಕಾಗಿ ಮತಾಂಧರು ಆತನನ್ನು ಬರ್ಬರವಾಗಿ ಕೊಂದಿದ್ದಾರೆ. ಉದಯಪುರದ ಈ ಘಟನೆಯಿಂದ ರಾಜಸ್ಥಾನ ಮಾತ್ರವಲ್ಲದೆ ದೇಶದಾದ್ಯಂತ ಜನರು ಬೆಚ್ಚಿಬಿದ್ದಿದ್ದಾರೆ. ಹಿಂದೂ ಸಂಘಟನೆಗಳು ಈ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ, ಇಸ್ಲಾಮಿಕ್ ಸಂಘಟನೆಗಳು ಘಟನೆಯನ್ನು ಟೀಕಿಸಿವೆ. ಏತನ್ಮಧ್ಯೆ, ಬಾಂಗ್ಲಾದೇಶ ಮೂಲದ ಲೇಖಕಿ ತಸ್ಲೀಮಾ ನಸ್ರೀನ್ ಭಾರತದಲ್ಲಿ ಹಿಂದೂಗಳು ಮಾತ್ರ ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.

ರುಂಡ ಕತ್ತರಿಸುವ ಮದರಸಾ ಶಿಕ್ಷಣಕ್ಕಿಂತ ಮುಸ್ಲಿಮ್ ಮಕ್ಕಳಿಗೆ ಆಧುನಿಕ ಶಿಕ್ಷಣ ಬೇಕು, ಆರೀಫ್ ಖಾನ್!

ಉದಯ್‌ಪುರದಲ್ಲಿ ಕನ್ಹಯ್ಯಾಲಾಲ್‌ನ ಹತ್ಯೆಯ ಕುರಿತು ತಸ್ಲೀಮಾ ನಸ್ರೀನ್ ಟ್ವೀಟ್ ಮಾಡಿದ್ದು, "ರಿಯಾಜ್ ಮತ್ತು ಗೌಸ್ ಉದಯಪುರದಲ್ಲಿ ಟೈಲರ್ ಕನ್ಹಯ್ಯಾಲಾಲ್‌ನನ್ನು ಬರ್ಬರವಾಗಿ ಹತ್ಯೆ ಮಾಡಿ ನಂತರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡಿದ್ದಾರೆ. ತಾನು ಕೊಲೆ ಮಾಡಿದ್ದೇನೆ ಮತ್ತು ತನ್ನ ಪ್ರವಾದಿಗಾಗಿ ಏನು ಬೇಕಾದರೂ ಮಾಡುತ್ತೇನೆ ಎಂದು ನಗುತ್ತಾ ಘೋಷಿಸಿದ್ದಾರೆ. ಮೂಲಭೂತವಾದಿಗಳು ಎಷ್ಟು ಅಪಾಯಕಾರಿ ಎಂದರೆ ಭಾರತದಲ್ಲಿ ಹಿಂದೂಗಳೂ ಸುರಕ್ಷಿತವಾಗಿಲ್ಲ' ಎಂದಿದ್ದಾರೆ.

ಕಠಿಣ ಶಿಕ್ಷೆ ವಿಧಿಸಿ ಎಂದ ಕಾಂಗ್ರೆಸ್ ನಾಯಕ ಶಶಿ ತರೂರ್  

ಹಂತಕರಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ. ಉದಯಪುರದ ಧನ್ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ವ್ಯಕ್ತಿಗಳು ಟೈಲರ್‌ನ ಕತ್ತು ಸೀಳಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹಾಕಿದ್ದು, "ಇಸ್ಲಾಂಗೆ ಅವಮಾನ"ದ ಪ್ರತೀಕಾರ ತೀರಿಸಿಕೊಳ್ಳಲು ಈ ಕೃತ್ಯವೆಸಗಿರುವುದಾಗಿ ಹೇಳಿದ್ದಾರೆ. ಟ್ವಿಟರ್‌ನಲ್ಲಿ ತರೂರ್ ಅವರು, "ಉದಯ್‌ಪುರದಲ್ಲಿ ನಡೆದ ಕನ್ಹಯ್ಯಾಲಾಲ್ ಅವರ ಭೀಕರ ಹತ್ಯೆಯನ್ನು ನಾನು ಖಂಡಿಸುತ್ತೇನೆ, ಇಬ್ಬರು ಮುಸ್ಲಿಂ ಯುವಕರು ಹತ್ಯೆಯ ಭೀಕರ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಾರೆ, ಅವರಿಗೆ ನಮ್ಮ ಸಮಾಜದಲ್ಲಿ ಯಾವುದೇ ಸ್ಥಾನವಿಲ್ಲ, ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಮತ್ತು ಮಾಡಲಾಗುತ್ತಿದೆ. ಹಂತಕರಿಗೆ ತಕ್ಕ ಶಿಕ್ಷೆಯಾಗಬೇಕು ಎಂದರು. ಕುಮ್ಮಕ್ಕು ನೀಡಿದ ಪ್ರಕರಣ ಏನೇ ಇರಲಿ, ಅಂತಹ ಅಪರಾಧಗಳಿಂದ ತಪ್ಪಿಸಿಕೊಳ್ಳಬಹುದು ಎಂಬ ಭ್ರಮೆಯಲ್ಲಿ ಯಾರೂ ಇರಬಾರದು ಎಂದಿದ್ದಾರೆ.

ಪ್ರವಾದಿ ಪೈಗಂಬರ್ ಬದುಕಿದ್ದರೆ, ಮುಸ್ಲಿಂ ಸಮುದಾಯವನ್ನು ನೋಡಿ ಶಾಕ್ ಆಗ್ತಿದ್ರು!

ಜೂನ್ 17 ರಂದೇ ಘೋಷಣೆ

ರಾಜಸ್ಥಾನದ ಉದಯಪುರದ ಧನ್ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಇಬ್ಬರು ವ್ಯಕ್ತಿಗಳು ಟೈಲರ್‌ನ ಕತ್ತು ಸೀಳಿ ಕೊಂದು, "ಇಸ್ಲಾಂಗೆ ಅವಮಾನ"ದ ಸೇಡು ತೀರಿಸಿಕೊಳ್ಳಲು ಈ ರೀತಿ ಮಾಡಿರುವುದಾಗಿ ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಆರೋಪಿ ರಿಯಾಜ್ ಜೂನ್ 17 ರಂದು ಕನ್ಹಯ್ಯಾ ಲಾಲ್ ಹತ್ಯೆಯನ್ನು ವಿಡಿಯೋ ಮೂಲಕ ಘೋಷಿಸಿದ್ದ. ನೂಪುರ್ ಶರ್ಮಾ ಅವರನ್ನು ಬೆಂಬಲಿಸುವ ಪೋಸ್ಟ್ ನಂತರ ತನಗೆ ಬರುತ್ತಿರುವ ಬೆದರಿಕೆಗಳ ಬಗ್ಗೆ ದೂರು ನೀಡಿದ ನಂತರ ಕನ್ಹಯ್ಯಾಲಾಲ್ ಕೂಡ ಪೊಲೀಸರನ್ನು ತಲುಪಿದ್ದರು. ಆದರೆ ಪೊಲೀಸರು ಎರಡೂ ಕಡೆಯವರನ್ನು ಠಾಣೆಗೆ ಕರೆಸಿ ಮನವೊಲಿಸಿ ಮನೆಗೆ ಕಳುಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..