
ಮುಂಬೈ(ನ.28): ತಿಂಗಳಿಗೂ ಹೆಚ್ಚಿನ ಕಾಲದ ಹಗ್ಗ ಜಗ್ಗಾಟದ ಬಳಿಕ, ಕೊನೆಗೂ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಸರ್ಕಾರವೊಂದು ಅಸ್ತಿತ್ವಕ್ಕೆ ಬಂದಿದೆ.
ಮುಂಬೈನ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್’ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
‘ಮಹಾ’ದಲ್ಲಿ ಉದ್ಧವ್ ದರ್ಬಾರ್: ಅಸ್ತಿತ್ವಕ್ಕೆ ಬಂತು ಅಘಾಡಿ ಸರ್ಕಾರ್!
ಇನ್ನು ಅಧಿಕಾರಕ್ಕೇರುತ್ತಿದ್ದಂತೇ ವಿಖಾಸ್ ಅಘಾಡಿ ಸರ್ಕಾರ ಹಲವು ಘೋಷಣೆಗಳನ್ನು ಮಾಡಿದ್ದು, ಪ್ರಮುಖವಾಗಿ ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.80ರಷ್ಟು ಮೀಸಲಾತಿ ನೀಡುವ ಆಶ್ವಾಸನೆ ನೀಡಿದೆ.
1 ರೂ. ಕ್ಲಿನಿಕ್, 10 ರೂ.ಗೆ ಊಟ, ತಿಂಡಿ ಹಾಗೂ ರೈತರ ಸಾಲ ಮನ್ನಾ ಮಾಡುವ ಘೋಷಣೆಗಳನ್ನೂ ಹೊಸ ವಿಕಾಸ್ ಅಘಾಡಿ ಸರ್ಕಾರ ಮಾಡಿದೆ.
ನೂತನ ಸಿಎಂ ಉದ್ಧವ್ ಠಾಕ್ರೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವಿಟ್!
ಪ್ರಮಾಣವಚನಕ್ಕೂ ಮುನ್ನ ನಾಲ್ಕು ಪುಟಗಳ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಬಿಡುಗಡೆ ಮಾಡಲಾಗಿದ್ದು, ಅದರಂತೆ ರೈತರ ಸಾಲ ಮನ್ನಾ, ಯುವಕರಿಗೆ ಉದ್ಯೋಗ, ಉದ್ಯೋಗದಲ್ಲಿ ಸ್ಥಳೀಯರಿಗೆ ಶೇ.80ರಷ್ಟು ಮೀಸಲಾತಿ ಸೇರಿದಂತೆ ಹಲವು ಆಶ್ವಾಸನೆಗಳನ್ನು ಜಾರಿಗೆ ತರಲು ನಿರ್ಣಯಿಸಲಾಗಿದೆ.
ಈ ಯೋಜನೆಯ ಅಂಶಗಳ ಅನುಷ್ಠಾನಕ್ಕೆ ಎರಡು ಸಮನ್ವಯ ಸಮಿತಿಗಳನ್ನು ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
'ಮಹಾ'ಸಿಎಂ ಗಾದಿಗೆ ಠಾಕ್ರೆ, ಸಿದ್ದು ಏನಾದ್ರೂ ಹೇಳ್ತಾರೆ ಬಿಟ್ರೆ: ನ.28ರ ಪ್ರಮುಖ ಸುದ್ದಿ!
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ