ಅಧಿಕಾರ ಸ್ವೀಕರಿಸುತ್ತಿದ್ದಂತೇ ಪ್ರಮುಖ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ!

Published : Nov 28, 2019, 08:45 PM IST
ಅಧಿಕಾರ ಸ್ವೀಕರಿಸುತ್ತಿದ್ದಂತೇ ಪ್ರಮುಖ ಹುದ್ದೆಗೆ ಉದ್ಧವ್ ಠಾಕ್ರೆ ರಾಜೀನಾಮೆ!

ಸಾರಾಂಶ

ಕೊನೆಗೂ ಅಂತ್ಯಗೊಂಡ ಮಹಾರಾಷ್ಟ್ರ ರಾಜಕೀಯ ಹೈಡ್ರಾಮಾ| ಶಿವಸೇನೆ, ಕಾಂಗ್ರೆಸ್-ಎನ್’ಸಿಪಿ ಮೈತ್ರಿಕೂಟ ಅಸ್ತಿತ್ವಕ್ಕೆ| ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಶಿವಸೇನೆಯ ಉದ್ಧವ್ ಠಾಕ್ರೆ ಪ್ರಮಾಣವಚನ| ಸಾಮ್ನಾ ಸಂಪಾದಕೀಯ ಹುದ್ದೆಗೆ ರಾಜೀನಾಮೆ ನೀಡಿದ ಉದ್ಧವ್ ಠಾಕ್ರೆ| ಸಾಮ್ನಾದ ನೂತನ ಸಂಪಾದಕರಾಗಿ ಸಂಜಯ್ ರಾವುತ್ ಅಧಿಕಾರ ಸ್ವೀಕಾರ| 

ಮುಂಬೈ(ನ.28): ತಿಂಗಳಿಗೂ ಹೆಚ್ಚಿನ ಕಾಲದ ಹಗ್ಗ ಜಗ್ಗಾಟದ ಬಳಿಕ, ಕೊನೆಗೂ ಮಹಾರಾಷ್ಟ್ರದಲ್ಲಿ ಸಾಂವಿಧಾನಿಕ ಸರ್ಕಾರವೊಂದು ಅಸ್ತಿತ್ವಕ್ಕೆ ಬಂದಿದೆ.

ಮುಂಬೈನ ಐತಿಹಾಸಿಕ ಛತ್ರಪತಿ ಶಿವಾಜಿ ಮಹಾರಾಜ್ ಪಾರ್ಕ್’ನಲ್ಲಿ ಶಿವಸೇನೆಯ ಉದ್ಧವ್ ಠಾಕ್ರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.

‘ಮಹಾ’ದಲ್ಲಿ ಉದ್ಧವ್ ದರ್ಬಾರ್: ಅಸ್ತಿತ್ವಕ್ಕೆ ಬಂತು ಅಘಾಡಿ ಸರ್ಕಾರ್!

ಮಹಾರಾಷ್ಟ್ರದ 18ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ, ತಮ್ಮ ಪಕ್ಷದ ಮುಖವಾಣಿ ಸಾಮ್ನಾ ಪತ್ರಿಕೆ ಸಂಪಾದಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ರಾವತ್ ಸಾಮ್ನಾದ ನೂತನ ಸಂಪಾದಕರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. 

59 ವರ್ಷದ ಉದ್ಧವ್ ಠಾಕ್ರೆ, ಮನೋಹರ್ ಜೋಶಿ ಮತ್ತು ನಾರಾಯಣ ರಾಣೆ ನಂತರ ಶಿವಸೇನೆಯಿಂದ ಮಹಾರಾಷ್ಟ್ರದ ಮೂರನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಸಿಎಂ ಉದ್ಧವ್ ಠಾಕ್ರೆ ಅಭಿನಂದಿಸಿ ಪ್ರಧಾನಿ ಮೋದಿ ಟ್ವಿಟ್!

ಠಾಕ್ರೆ ಕುಟುಂಬದಿಂದ ಉದ್ಧವ್ ಠಾಕ್ರೆ ಮೊದಲ ಮುಖ್ಯಮಂತ್ರಿಯಾಗಿದ್ದು, ಶಿವಾಜಿ ಪಾರ್ಕ್‌ನಲ್ಲಿ ಉದ್ಧವ್ ಠಾಕ್ರೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಸ್ರೇಲ್-ಇರಾನ್ ಸಂಘರ್ಷ: ಟೆಹ್ರಾನ್‌ನಲ್ಲಿ ಸಿಲುಕಿದ 150ಕ್ಕೂ ಹೆಚ್ಚು ಕನ್ನಡಿಗರು; ಸಂಪರ್ಕ ಸಿಗದೇ ಪೋಷಕರು ಕಂಗಾಲು!
Anamika Khanna: ವಿಜಯ್-ರಶ್ಮಿಕಾ ನಡುವಿನ ಕೆಮಿಸ್ಟ್ರಿ ಅತ್ಯಂತ ನ್ಯಾಚುರಲ್.. ಪ್ಲಾನ್ ಮಾಡಿರೋ ನಾಟಕವಲ್ಲ, ಇದು ಪಕ್ಕಾ ನೈಸರ್ಗಿಕ ಪ್ರೀತಿ!