ರಾಮಮಂತ್ರ ಜಪಿಸಿದ ಶಿವಸೇನೆ: ಮಾರ್ಚ್‌ನಲ್ಲಿ ಉದ್ಧವ್‌ ಆಯೋಧ್ಯೆಗೆ!

Published : Jan 23, 2020, 09:17 AM IST
ರಾಮಮಂತ್ರ ಜಪಿಸಿದ ಶಿವಸೇನೆ: ಮಾರ್ಚ್‌ನಲ್ಲಿ ಉದ್ಧವ್‌ ಆಯೋಧ್ಯೆಗೆ!

ಸಾರಾಂಶ

ರಾಮಮಂತ್ರ ಜಪಿಸಿದ ಶಿವಸೇನೆ: ಮಾರ್ಚ್‌ನಲ್ಲಿ ಉದ್ಧವ್‌ ಆಯೋಧ್ಯೆಗೆ| ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೂ ಅಹ್ವಾನ

ಮುಂಬೈ[ಜ.23]: ರಾಮ ಜನ್ಮಭೂಮಿ-ಬಾಬ್ರಿ ತೀರ್ಪಿನ ಬಳಿಕ ಅಯೋಧ್ಯೆಗೆ ಹೋಗುವುದಾಗಿ ಘೋಷಿಸಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆಗೆ ಅಘಾಡಿ ಮೈತ್ರಿ ತಡೆಯಾಗಿತ್ತು. ಆದರೆ ಈಗ ಅದಕ್ಕೆ ಸಮಯ ಕೂಡಿ ಬಂದಿದ್ದು, ಮಾಚ್‌ರ್‍ನಲ್ಲಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ನೂರು ದಿನ ತುಂಬುವ ಹಿನ್ನೆಲೆ ಅವರು ಅಯೋಧ್ಯೆಗೆ ತೆರಳಲಿದ್ದಾರೆ ಎಂದು ಶಿವಸೇನೆ ಹೇಳಿದೆ.

ಮಾಚ್‌ರ್‍ನಲ್ಲಿ ಅಘಾಡಿ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ತುಂಬಲಿದ್ದು, ಈ ವೇಳೆ ಶ್ರೀರಾಮನ ಆಶೀರ್ವಾದ ಪಡೆಯಲು ಉದ್ಧವ್‌ ಠಾಕ್ರೆ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಹಿರಿಯ ನಾಯಕ ಸಂಜಯ್‌ ರಾವುತ್‌ ಹೇಳಿದ್ದಾರೆ. ಅಲ್ಲದೇ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿಗೂ ಅಹ್ವಾನ ನೀಡುವುದಾಗಿ ಹೇಳಿದ್ದಾರೆ.

ಈ ಹಿಂದೆ 2019 ನವೆಂಬರ್‌ 24 ರಂದು ಉದ್ಧವ್‌ ಅಯೋಧ್ಯೆಗೆ ಭೇಟಿ ನೀಡಬೇಕಿತ್ತು. ಆದರೆ ಅಘಾಡಿ ಸರ್ಕಾರ ರಚನೆ ಮಾತುಕತೆಗಳು ನಡೆಯುತ್ತಿದ್ದರಿಂದ ರದ್ದು ಗೊಳಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

India Latest News Live: ಐಪಿಎಲ್ ಜೊತೆ 3 ವರ್ಷಗಳ ಅವಧಿಗೆ ₹270 ಕೋಟಿಗೆ ಜೆಮಿನಿ ಪ್ರಾಯೋಜಕತ್ವದ ಒಪ್ಪಂದ
ಬೆಳಗಾವಿ ಗಡಿ ವಿವಾದಕ್ಕೆ ಇಂದು ಸುಪ್ರೀಂ ಪರೀಕ್ಷೆ