ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್, ಇನ್ನುಮುಂದೆ ಹೀಗಾಗಲ್ಲ

Published : Jun 03, 2021, 10:29 PM IST
ಕನ್ನಡಿಗರ ಕ್ಷಮೆಯಾಚಿಸಿದ ಗೂಗಲ್, ಇನ್ನುಮುಂದೆ ಹೀಗಾಗಲ್ಲ

ಸಾರಾಂಶ

* ತಪ್ಪು ತಿದ್ದಿಕೊಂಡು ಕನ್ನಡಿಗರ ಕ್ಷಮೆ ಯಾಚಿಸಿದ ಗೂಗಲ್ * ಭಾವನೆಗೆ ಧಕ್ಕೆಯಾಗಿದ್ದರೆ ಕ್ಷಮೆ  ಕೇಳುತ್ತೇವೆ *ಟ್ವೀಟ್ ಮಾಡಿ ಕ್ಷಮೆಯಾಚಿಸಿದ ಗೂಗಲ್ * ಕನ್ನಡಿಗರ ಸ್ವಾಭಿಮಾನದ ಕಟ್ಟೆ ಒಡೆದಿತ್ತು

ಬೆಂಗಳೂರು(ಜೂ. 03) ಕನ್ನಡಿಗರ  ಸ್ವಾಭಿಮಾನಕ್ಕೆ ಧಕ್ಕೆ ತಂದು ಕೆಂಗಣ್ಣಿಗೆ ಗುರಿಯಾಗಿದ್ದ ಗೂಗಲ್ ಕೊನೆಗೂ ಕ್ಷಮೆ ಕೇಳಿದೆ. ತನ್ನ ತಪ್ಪು ಒಪ್ಪಿಕೊಂಡಿದೆ.

ಕನ್ನಡವನ್ನು Ugliest language in India ಎಂದು ಕರೆದ ಗೂಗಲ್ ವಿರುದ್ಧ ಆಕ್ರೋಶದ ಕಟ್ಟೆ ಒಡೆದಿತ್ತು. ಕಾನೂನು ಸಮರ ನಡೆಸುತ್ತೇವೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು.

ನಮ್ಮಿಂದ ತಪ್ಪು ಅರ್ಥ ಬಂದಿದ್ದರೆ ಕ್ಷಮೆ ಕೇಳುತ್ತಿದ್ದೇವೆ ಎಂದು ಗೂಗಲ್ ಟ್ವೀಟ್ ಮಾಡಿದೆ.  ಆಂಗ್ಲ ಮತ್ತು ಕನ್ನಡದಲ್ಲಿ ಎರಡು ಹೇಳಿಕೆ ನೀಡಿದೆ.  ಮಾಜಿ ಸಿಎಂ ಕುಮಾರಸ್ವಾಮಿ ಆದಿಯಾಗಿ   ನಟ-ನಟಿಯರು ಆಕ್ರೋಶ ಹೊರಹಾಕಿದ್ದರು. ಒಟ್ಟಿನಲ್ಲಿ ಜನಾಕ್ರೋಶದ ಪರಿಣಾಮ ಗೂಗಲ್ ಸದ್ಯಕ್ಕೆ ಒಂದು ಪಾಠ ಕಲಿತಿದೆ.

ಕನ್ನಡಿಗರ ಸ್ವಾಭಿಮಾನ ಪ್ರದರ್ಶನ

Ugliest language in Indiaಕ್ಕೆ ಗೂಗಲ್ ಕನ್ನಡ ಎಂಬ ಉತ್ತರ ನೀಡುತ್ತಿದ್ದುದ್ದು ಆಕ್ರೋಶಕ್ಕೆ ಕಾರಣವಾಗಿತ್ತು. ಸೋಶಿಯಲ್ ಮೀಡಿಯಾದಲ್ಲಿ ತಕ್ಷಣವೇ ಪ್ರತಿಕ್ರಿಯೆ ವ್ಯಕ್ತವಾಗಿ ಗೂಗಲ್ ತನ್ನ ಎಡವಟ್ಟನ್ನು ತಿದ್ದಿಕೊಂಡಿತ್ತು. ಗೂಗಲ್ ವಿರುದ್ಧ ಕಾನೂನು ಸಮರ ನಡೆಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿತ್ತು. 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಬಾಬ್ರಿ ಮಸೀದಿಗೆ ಅಡಿಗಲ್ಲು ವಿವಾದ ಬೆನ್ನಲ್ಲೇ ಬಂಗಾಳದಲ್ಲಿ 5 ಲಕ್ಷ ಹಿಂದೂಗಳಿಂದ ಭಗವದ್ಗೀತೆ ಪಠಣ
ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?