ಭಾರತೀಯರ ಜೀವಿತಾವಧಿ ಭಾರಿ ಏರಿಕೆ! ತಲಾದಾಯ 5.75 ಲಕ್ಷ ರೂ ಭಾರತದ ಪ್ರಗತಿ ಅದ್ಭುತ ಎಂದ ವಿಶ್ವಸಂಸ್ಥೆ

Published : Mar 15, 2024, 09:00 AM IST
ಭಾರತೀಯರ ಜೀವಿತಾವಧಿ ಭಾರಿ ಏರಿಕೆ! ತಲಾದಾಯ  5.75 ಲಕ್ಷ ರೂ ಭಾರತದ ಪ್ರಗತಿ ಅದ್ಭುತ ಎಂದ ವಿಶ್ವಸಂಸ್ಥೆ

ಸಾರಾಂಶ

ಭಾರತೀಯರ ಜೀವಿತಾವಧಿ ಈಗ 67.7 ವರ್ಷ, ತಲಾದಾಯ ₹5.75 ಲಕ್ಷ- ಮಾನವಾಭಿವೃದ್ಧಿ ಸೂಚ್ಯಂಕದಲ್ಲಿ ಭಾರತದ ಪ್ರಗತಿ ಅದ್ಭುತ: ವಿಶ್ವಸಂಸ್ಥೆ 

ನವದೆಹಲಿ (ಮಾ.15): ಭಾರತೀಯರ ಸರಾಸರಿ ಜೀವಿತಾವಧಿ ಹಾಗೂ ತಲಾದಾಯ ಏರಿಕೆಯ ಪ್ರಮಾಣ ‘ಅದ್ಭುತವಾಗಿದೆ’ ಎಂದು ವಿಶ್ವಸಂಸ್ಥೆಯ ಮಾನವಾಭಿವೃದ್ಧಿ ಸೂಚ್ಯಂಕ (ಎಚ್‌ಡಿಐ) ವರದಿ ಶ್ಲಾಘಿಸಿದೆ. 2023ನೇ ಸಾಲಿನ ಎಚ್‌ಡಿಐ ವರದಿಯನ್ನು ವಿಶ್ವಸಂಸ್ಥೆ ಬಿಡುಗಡೆ ಮಾಡಿದ್ದು, ಅದರಲ್ಲಿ 2022ರಲ್ಲಿ ಉಂಟಾದ ಭಾರತದ ಪ್ರಗತಿಗೆ ತೀವ್ರ ಮೆಚ್ಚುಗೆ ವ್ಯಕ್ತಪಡಿಸಿದೆ.

2021ರಲ್ಲಿ ಭಾರತೀಯರ ಸರಾಸರಿ ಜೀವಿತಾವಧಿ 62.7 ವರ್ಷವಿತ್ತು. ಅದು ಒಂದೇ ವರ್ಷದಲ್ಲಿ 67.7ಕ್ಕೆ ಏರಿಕೆಯಾಗಿದೆ. ಹಾಗೆಯೇ, ಈ ಅವಧಿಯಲ್ಲಿ ಭಾರತೀಯರ ಸರಾಸರಿ ತಲಾದಾಯ ವರ್ಷಕ್ಕೆ 5.75 ಲಕ್ಷ ರು.ಗೆ ಏರಿಕೆಯಾಗಿದೆ. ಏರಿಕೆಯ ಪ್ರಮಾಣ ಶೇ.6.3ರಷ್ಟಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ಎಸ್‌ಬಿಐ ಚುನಾವಣಾ ಬಾಂಡ್‌ ದೇಣಿಗೆ ರಹಸ್ಯ ಆಯೋಗದಿಂದ ಬಹಿರಂಗ, ಬಿಜೆಪಿ ಟಾಪ್‌, ಜೆಡಿಎಸ್‌ಗೆ 43 ಕೋಟಿ!

ಒಟ್ಟಾರೆ ಎಚ್‌ಡಿಐ ಸೂಚ್ಯಂಕದಲ್ಲಿ ಜಗತ್ತಿನ 193 ದೇಶಗಳ ಪೈಕಿ ಭಾರತ 134ನೇ ಸ್ಥಾನದಲ್ಲಿದೆ. ಇದರ ಪ್ರಕಾರ ಭಾರತದ ಮಾನವಾಭಿವೃದ್ಧಿ ಸೂಚ್ಯಂಕವು ಮಧ್ಯಮ ಸ್ತರದಲ್ಲಿದೆ. ಅಂಕಿಅಂಶದ ದೃಷ್ಟಿಯಲ್ಲಿ ಭಾರತದ ಎಚ್‌ಡಿಐ ಸೂಚ್ಯಂಕ 0.644ರಷ್ಟಿದೆ ಎಂದು ವರದಿ ತಿಳಿಸಿದೆ.

ಸಂಸತ್ತಿನಿಂದ ಪಂಚಾಯಿತಿವರೆಗೆ ಏಕ ಚುನಾವಣೆ, ಕೋವಿಂದ್‌ ಸಮಿತಿ ಶಿಫಾರಸು

‘2021ರಿಂದ 2022ರ ಅವಧಿಯಲ್ಲಿ ಭಾರತದ ಮಾನವಾಭಿವೃದ್ಧಿ ಸೂಚ್ಯಂಕ ಅದ್ಭುತವಾದ ಪ್ರಗತಿ ಸಾಧಿಸಿದೆ. 1990ರಿಂದ ಈವರೆಗೆ ಭಾರತೀಯರ ಜೀವಿತಾವಧಿ 9.1 ವರ್ಷದಷ್ಟು ಹೆಚ್ಚಾಗಿದೆ. ಭಾರತೀಯರು ಶಿಕ್ಷಣ ಪಡೆಯುವ ವರ್ಷಗಳ ಅವಧಿ 4.6 ವರ್ಷದಷ್ಟು ಹೆಚ್ಚಾಗಿದೆ. ಲಿಂಗಾನುಪಾತದ ಕೊರತೆಯನ್ನು ತುಂಬಿಕೊಳ್ಳುವಲ್ಲಿಯೂ ಭಾರತದ ಪ್ರಗತಿ ಜಾಗತಿಕ ಸರಾಸರಿಗಿಂತ ಉತ್ತಮವಾಗಿದೆ. ಹೆರಿಗೆ ಸಂಬಂಧಿ ಆರೋಗ್ಯ ಸೇವೆಗಳು ಭಾರತದಲ್ಲಿ ಜಾಗತಿಕ ಸರಾಸರಿಗಿಂತ ಉತ್ತಮವಾಗಿವೆ’ ಎಂದು ವರದಿಯಲ್ಲಿ ತಿಳಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..