ಸುರಂಗ ಕುಸಿದು ಒಳಗೆ ಸಿಲುಕಿದ 40 ಕಾರ್ಮಿಕರು: ಯಮುನೋತ್ರಿಗೆ ಸಂಪರ್ಕ ಕಲ್ಪಿಸುವ ಸುರಂಗ

Published : Nov 13, 2023, 07:22 AM IST
ಸುರಂಗ ಕುಸಿದು ಒಳಗೆ ಸಿಲುಕಿದ 40 ಕಾರ್ಮಿಕರು: ಯಮುನೋತ್ರಿಗೆ ಸಂಪರ್ಕ ಕಲ್ಪಿಸುವ ಸುರಂಗ

ಸಾರಾಂಶ

ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಿಲ್‌ಕ್ಯಾರಾ ಮತ್ತು ದಾಂಡಲ್‌ಗಾಂವ್‌ ಮಧ್ಯೆ ನಿರ್ಮಾಣ ಹಂತದಲ್ಲಿದ್ದ ರಾಷ್ಟ್ರೀಯ ಹೆದ್ದಾರಿಯ ಸುರಂಗದ ಒಂದು ಭಾಗ ಕುಸಿದು 40 ಮಂದಿ ಕಾರ್ಮಿಕರು ಕುಸಿತದಡಿ ಸಿಲುಕಿಕೊಂಡಿದ್ದಾರೆ.  

ಉತ್ತರಕಾಶಿ: ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯಲ್ಲಿ ಸಿಲ್‌ಕ್ಯಾರಾ ಮತ್ತು ದಾಂಡಲ್‌ಗಾಂವ್‌ ಮಧ್ಯೆ ನಿರ್ಮಾಣ ಹಂತದಲ್ಲಿದ್ದ ರಾಷ್ಟ್ರೀಯ ಹೆದ್ದಾರಿಯ ಸುರಂಗದ ಒಂದು ಭಾಗ ಕುಸಿದು 40 ಮಂದಿ ಕಾರ್ಮಿಕರು ಕುಸಿತದಡಿ ಸಿಲುಕಿಕೊಂಡಿದ್ದಾರೆ.  ಕಾರ್ಮಿಕರು ಸಿಲುಕಿರುವ ಜಾಗದಿಂದ ಸುರಂಗದ ಪ್ರವೇಶ ದ್ವಾರವು 200 ಮೀ. ದೂರದಲ್ಲಿದ್ದು, ಅವರಿಗೆ ಉಸಿರಾಟದ ತೊಂದರೆಯಾಗದಂತೆ ಆಕ್ಸಿಜನ್‌ ಪೈಪ್‌ಗಳನ್ನು ನೀಡಲಾಗಿದೆ. ಅಲ್ಲದೇ ಆಹಾರದ ಪೊಟ್ಟಣಗಳನ್ನು ಒದಗಿಸಲಾಗಿದ್ದು ಜೆಸಿಬಿ ಮತ್ತು ಡ್ರಿಲ್ಲಿಂಗ್‌ ಮಶಿನ್‌ಗಳಿಂದ 160 ಸಿಬ್ಬಂದಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಬ್ರಹ್ಮಖಾಲ್‌- ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Brahmakhal-Yamunotri National Highway)ಭಾನುವಾರ ಮುಂಜಾನೆ 6 ರಿಂದ 7 ಗಂಟೆ ನಡುವೆ ಸುರಂಗದ ಒಂದು ಭಾಗ ದಿಢೀರನೇ ಕುಸಿದಿದೆ. ಈ ವೇಳೆ ಸ್ಥಳದಲ್ಲಿದ್ದ 40 ಕಾರ್ಮಿಕರು ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಆರಂಭಿಕ ವರದಿಗಳು ತಿಳಿಸಿವೆ. ಅದಾಗ್ಯೂ 36 ಜನ ಕಾರ್ಮಿಕರು ಮಾತ್ರ ಸಿಲುಕಿದ್ದಾರೆಂದು ರಾಷ್ಟ್ರೀಯ ಹೆದ್ದಾರಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ತಿಳಿಸಿದೆ.

ಭಾರತರತ್ನ ವಿಶ್ವೇಶ್ವರಯ್ಯ ನಿರ್ಮಿಸಿದ್ದ ಏಷ್ಯಾದ ಮೊಟ್ಟ ಮೊದಲ ನೀರಾವರಿ ಸುರಂಗ ಕಾಲುವೆಯ ಮೇಲ್ಭಾಗದ ಮಣ್ಣು ಕುಸಿತ

ಇನ್ನು ಪೊಲೀಸರು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (National Disaster Management Force) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿಗಳು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಈ ಸುರಂಗವು ಚಾರ್ ಧಾಮ್ ರಸ್ತೆ ಯೋಜನೆಯ ಭಾಗವಾಗಿದ್ದು, ಇದು ಉತ್ತರಕಾಶಿ ಮತ್ತು ಯಮುನೋತ್ರಿ (Uttarkashi and Yamunotri) ನಡುವಿನ ಪ್ರಯಾಣದ ಅವಧಿಯನ್ನು 26 ಕಿ.ಮೀಗಳಷ್ಟು ಕಡಿಮೆ ಮಾಡಲಿದೆ.

ಇಸ್ರೇಲ್‌ ಕಟ್ಟಿಹಾಕಲು ಸುರಂಗದಲ್ಲೇ ಹೊಂಚು ಹಾಕಿದ 40000 ಉಗ್ರರು: ಸುರಂಗಗಳಲ್ಲಿ ಶಸ್ತ್ರಾಸ್ತ್ರ, ಆಹಾರ ಸಂಗ್ರಹ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ರೈತರಿಗಾಗಿ ಮಸೂದೆ ಮಂಡಿಸಿದ ಸಂಸದ ಡಾ.ಕೆ.ಸುಧಾಕರ್: ಹೈನುಗಾರರು-ಹೂವು ಬೆಳೆಗಾರರಿಗೆ ದೊಡ್ಡ ಆಶಾಕಿರಣ
ಇಂದಿಗೋ ನಾಳೆಗೋ ಎನ್ನುವಂತಿಲ್ಲ, ತಕ್ಷಣದಿಂದಲೇ ಪ್ರಯಾಣಿಕರಿಗೆ ಹಣ ರೀಫಂಡ್‌ ಮಾಡಿ; ಇಂಡಿಗೋಗೆ ಸೂಚಿಸಿದ ಸರ್ಕಾರ!