ಸರ್ಕಾರದ ಆದೇಶಕ್ಕೆ ತಲೆಬಾಗಿದ ಟ್ವಿಟರ್: 702 ಅಕೌಂಟ್‌ಗಳು ಪರ್ಮನೆಂಟ್ ಬ್ಯಾನ್!

Published : Feb 10, 2021, 01:58 PM ISTUpdated : Feb 10, 2021, 02:04 PM IST
ಸರ್ಕಾರದ ಆದೇಶಕ್ಕೆ ತಲೆಬಾಗಿದ ಟ್ವಿಟರ್: 702 ಅಕೌಂಟ್‌ಗಳು ಪರ್ಮನೆಂಟ್ ಬ್ಯಾನ್!

ಸಾರಾಂಶ

ನೂತನ ಕೃಷಿ ಕಾಯ್ದೆಗಳ ವಿರುದ್ಧ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆ| ಪ್ರತಿಭಟನೆಗಳ ಮಧ್ಯೆ ಪ್ರಚೋದನಕಾರಿ ಟ್ವೀಟ್‌ಗಳ ಹಾವಳಿ| ಟಟ್ವೀಟ್‌ಗಳಿಗೆ ಕಡಿವಾಣ ಹಾಕದಿದ್ದರೆ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ| ಸರ್ಕಾರದ ಆದೇಶಕ್ಕೆ ಮಣಿದ ಟ್ವಿಟರ್‌

ನವದೆಹಲಿ(ಫೆ.10): ನೂತನ ಕೃಷಿ ಕಾಯ್ದೆಗಳ ವಿರುದ್ಧ ದೇಶದಲ್ಲಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಮೈಕ್ರೋ ಬ್ಲಾಗಿಂಗ್ ಸೈಟ್‌ ಟ್ವಿಟರ್‌ ಬಳಸಿಕೊಂಡು ಪ್ರಚೋದನಾಕಾರಿ ಪೋಸ್ಟ್‌ಗಳು ಮಾಡಲಾಗುತ್ತಿದೆ. ಹೀಗಿರುವಾಗ ಇಂತಹ ಪೋಸ್ಟ್‌ಗಳಿಗೆ ಕಡಿವಾಣ ಹಾಕುವಂತೆ ಕೇಂದ್ರ ಸರ್ಕಾರ ಟ್ವಿಟರ್‌ ಸಂಸ್ಥೆಗೆ ನೋಟೀಸ್ ಕಳುಹಿಸಿತ್ತು. ಇದರ ಬೆನ್ನಲ್ಲೇ ಟ್ವಿಟರ್ ಇಂತಹ ಪ್ರಚೋದನಾಕಾರಿ ಪೋಸ್ಟ್‌ ಇರುವ ಅಕೌಂಟ್‌ಗಳನ್ನು ಬ್ಲಾಕ್ ಹಾಗೂ ನಿಷ್ಕ್ರಿಯ ಮಾಡಲಾರಂಭಿಸಿದೆ. 

ಇಂತಹ ಕಂಟೆಂಟ್‌ಗಳನ್ನು ರಿವ್ಯೂ ಮಾಡುವುದಾಗಿ ಸರ್ಕಾರಕ್ಕೆ ಭರವಸೆ ನೀಡಿರುವ ಟ್ವಿಟರ್, ಪ್ರಚೋದನಾಕಾರಿ ಪೋಸ್ಟ್‌ಗಳಿರುವ ಅಕೌಂಟ್‌ಗಳನ್ನು ನಿಷ್ಕ್ರಿಯಗೊಳಿಸುವುದಾಗಿ ತಿಳಿಸಿದೆ. ಈವರೆಗೂ 702 ಇಂತಹ ಅಕೌಂಟ್‌ಗಳನ್ನು ಟ್ವಿಟರ್ ಬ್ಯಾನ್ ಮಾಡಿದೆ. ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯ ಐಟಿ ಆಕ್ಟ್‌ನ ಸೆಕ್ಷನ್ 69A(3)ರಡಿ ಟ್ವಿಟರ್‌ಗೆ ನೋಟೀಸ್ ನೀಡಿತ್ತು.

ಸರ್ಕಾರದ ನೋಟಿಸ್‌ಗೆ ಬೆಚ್ಚಿದ ಟ್ವೀಟರ್‌: ಸಚಿವರ ಜತೆ ಮಾತುಕತೆಗೆ ಯತ್ನ!

ಕಠಿಣ ಕ್ರಮ ತೆಗೆದುಕೊಳ್ಳಬಹುದು

ಐಟಿ ಆಕ್ಟ್‌ನ ಸೆಕ್ಷನ್ 69A(3)ರಡಿ ಸೋಶಿಯಲ್ ಮೀಡಿಯಾದಲ್ಲಿ ಆಕ್ರಮಣಕಾರಿ ಮತ್ತು ಪ್ರಚೋದಿಸುವ ಪೋಸ್ಟ್‌ಗಳನ್ನು ತಡೆಯದಿದ್ದರೆ, ಸೋಶಿಯಲ್ ಮೀಡಿಯಾ ಕಂಪನಿಯ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವ ಸಾಧ್ಯತೆ ಇದೆ. ಏಳು ವರ್ಷ ಜೈಲು ಶಿಕ್ಷೆ ಜೊತೆ ದಂಡವನ್ನೂ ವಿಧಿಸಲಾಗುತ್ತದೆ. ಸದ್ಯ ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ರವಿ ಶಂಕರ್ ಪ್ರಸಾದ್ ಟ್ವಿಟರ್ ಸರ್ಕಾರದ ನಿರ್ದೇಶನ ಪಾಲಿಸಿ ಪ್ರಚೋದನಕಾರಿ ಪೋಸ್ಟ್‌ಗಳಿರುವ ಖಾತೆಗಳನ್ನು ನಿಷ್ಕ್ರಿಯಗೊಳಿಸುವ ಕಾರ್ಯ ಆರಂಭಿಸಿದೆ ಎಂದಿದ್ದಾರೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Suvarna Special: ಮಮತಾ ಬತ್ತಳಿಕೆ ಹೊಸ ಅಸ್ತ್ರ ಯಾವುದು ? ಮೋದಿ ವಿರುದ್ಧ ಹಿಂದೂ ಅಸ್ತ್ರ ಹಿಡಿದ ದೀದಿ..!
ಸಿಎಂ ಕುರ್ಚಿಗೆ 500 ಕೋಟಿ, ಸ್ಫೋಟಕ ಹೇಳಿಕೆ ಬೆನ್ನಲ್ಲೇ ಸಿಧು ಪತ್ನಿ ಕಾಂಗ್ರೆಸ್‌ನಿಂದ ಅಮಾನತು