
ರಾಮ್ಘರ್(ನ.23): 35 ವರ್ಷದ ನಿರುದ್ಯೋಗಿ ವ್ಯಕ್ತಿಯೊಬ್ಬ ಅನುಕಂಪದ ಆಧಾರದಲ್ಲಿ ಉದ್ಯೋಗ ಪಡೆಯಲು ತಂದೆಯನ್ನೇ ಕೊಂದ ಆಘಾತಕಾರಿ ಘಟನೆ ಜಾರ್ಖಂಡ್ನ ರಾಮ್ಘರ್ ಜಿಲ್ಲೆಯಲ್ಲಿ ನಡೆದಿದೆ.
ಕೃಷ್ಣ ರಾಮ್ (55) ಎಂಬವರು ಇಲ್ಲಿನ ಕೇಂದ್ರೀಯ ಕಲ್ಲಿದ್ದಲು ಫೀಲ್ಡ್ ಲಿಮಿಟೆಡ್ (ಸಿಸಿಎಲ್) ಕಂಪನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆದರೆ ಕಳೆದ ಗುರುವಾರ ಗಂಟಲು ಸೀಳಿದ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿತ್ತು.
ಪ್ರಕರಣದ ಬೆನ್ನತ್ತಿದ ಪೊಲೀಸರು ರಾಮ್ರ ಹಿರಿಯ ಮಗ ಈ ಕೃತ್ಯ ಎಸಗಿದ್ದನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ವೇಳೆ ಸಿಸಿಎಲ್ ಕಂಪನಿಯಲ್ಲಿ ಉದ್ಯೋಗ ಪಡೆಯಲು ಕೊಲೆಗೈದಿದ್ದಾಗಿ ಆತ ಬಾಯ್ಬಿಟ್ಟಿದ್ದಾನೆ.
ಸಿಸಿಎಲ್ ಕಂಪನಿಯಲ್ಲಿ ಉದ್ಯೋಗಿಯು ಸೇವೆಯ ಅವಧಿಯಲ್ಲಿ ನಿಧನರಾದರೆ ಅವರ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕೆಂಬ ನಿಯಮವಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ