
ನವದೆಹಲಿ (ಮೇ.7): ರಾಷ್ಟ್ರೀಯ ಗೀತೆ ವಂದೇ ಮಾತರಂ ಅನ್ನು ಅಪಮಾನಿಸಿದರೆ ಅಥವಾ ಅಡ್ಡಿ ಮಾಡಿದರೆ ಜೈಲುಶಿಕ್ಷೆ ವಿಧಿಸಬಹುದಾದ ಮಹತ್ವದ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ಕಾಯ್ದೆ, 1971ಕ್ಕೆ ತಿದ್ದುಪಡಿ ಮಾಡಲು ಅನುಮೋದನೆ ನೀಡಲಾಗಿದೆ. ಈ ತಿದ್ದುಪಡಿಯಿಂದ ರಾಷ್ಟ್ರಗೀತೆ ‘ಜನ ಗಣ ಮನ’ಕ್ಕೆ ಇರುವಂತಹ ಸಮಾನ ಸ್ಥಾನಮಾನ ‘ವಂದೇ ಮಾತರಂ’ಗೂ ದೊರೆಯಲಿದೆ. ಈಗಿನ ಕಾನೂನಿನ ಪ್ರಕಾರ ರಾಷ್ಟ್ರಗೀತೆಗೆ ಅಡ್ಡಿಪಡಿಸಿದರೆ ಅಥವಾ ಅಪಮಾನಿಸಿದರೆ ಗರಿಷ್ಠ 3 ವರ್ಷ ಜೈಲುಶಿಕ್ಷೆ ಅಥವಾ ದಂಡ ಅಥವಾ ಎರಡೂ ವಿಧಿಸಬಹುದಾಗಿದೆ.
ವಂದೇ ಮಾತರಂ ಗೀತೆಯನ್ನು ರಚಿಸಿದವರು ಬಂಗಾಳಿ ಕವಿ ಬಂಕಿಂ ಚಂದ್ರ ಚಟ್ಟೋಪಾಧ್ಯಾಯ. ಪ. ಬಂಗಾಳದಲ್ಲಿ ಬಿಜೆಪಿ ಮೊದಲ ಬಾರಿ ಗೆದ್ದ ಬೆನ್ನಲ್ಲೇ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು ವಿಶೇಷ.
ಇದನ್ನೂ ಓದಿ: ಶಾಲೆಗಳಲ್ಲಿ 'ವಂದೇ ಮಾತರಂ' ಕಡ್ಡಾಯ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಿರಾಕರಿಸಿದ ಹೈಕೋರ್ಟ್
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ