ಇನ್ನು ನಕಲಿ, ಕಳಪೆ ಕೀಟನಾಶಕ ಮಾರಿದರೆ ಜೈಲು, ಭಾರೀ ದಂಡ!

Published : Feb 13, 2020, 12:29 PM IST
ಇನ್ನು ನಕಲಿ, ಕಳಪೆ ಕೀಟನಾಶಕ ಮಾರಿದರೆ ಜೈಲು, ಭಾರೀ ದಂಡ!

ಸಾರಾಂಶ

ನಕಲಿ, ಕಳಪೆ ಕೀಟನಾಶಕ ಮಾರಿದರೆ ಜೈಲು, ದಂಡ| ಕೀಟನಾಶಕದಿಂದ ರೈತ ಹಾನಿಗೀಡಾದರೆ ಪರಿಹಾರ| ಕೀಟನಾಶಕ ಮಸೂದೆಗೆ ಮೋದಿ ಸಂಪುಟ ಅಸ್ತು| ರೈತರ ನೆರವಿಗೆ ಕೇಂದ್ರ ಸರ್ಕಾರ

ನವದೆಹಲಿ[ಫೆ.13]: ದೇಶದ ಎಲ್ಲ ರೈತರಿಗೆ ವರ್ಷಕ್ಕೆ 6 ಸಾವಿರ ರು. ಸಹಾಯಧನ ನೀಡುವ ಯೋಜನೆಯನ್ನು ಕಳೆದ ವರ್ಷ ಪ್ರಕಟಿಸಿದ್ದ ಕೇಂದ್ರ ಸರ್ಕಾರ ಮತ್ತೆ ರೈತರ ನೆರವಿಗೆ ಧಾವಿಸಿದೆ. ಕೀಟನಾಶಕ ಬಳಸಿದಾಗ ಬೆಳೆಗಳು ಹಾನಿಗೀಡಾದರೆ ಅಂಥ ರೈತರಿಗೆ ಪರಿಹಾರ ನೀಡುವ ಹಾಗೂ ಕೀಟನಾಶಕ ವ್ಯಾಪಾರದಲ್ಲಿ ನಡೆಯುವ ಮೋಸಕ್ಕೆ ಕಡಿವಾಣ ಹಾಕುವ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.

ಬುಧವಾರ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ‘ಕೀಟನಾಶಕ ನಿರ್ವಹಣೆ ಮಸೂದೆ-2020’ಗೆ ಅನುಮೋದನೆ ದೊರಕಿತು. ಇದು ಹಳೆಯದಾದ ‘ಕೀಟನಾಶಕ ಕಾಯ್ದೆ-1968’ನ್ನು ನೇಪಥ್ಯಕ್ಕೆ ಸರಿಸಲಿದೆ.

ಮಸೂದೆಯಲ್ಲೇನಿದೆ?:

- ರೈತರಿಗೆ ಮೋಸ ಮಾಡುವ ನಕಲಿ ಕೀಟನಾಶಕಗಳ ಮೇಲೆ ನಿಗಾ ಇಡಲಾಗುತ್ತದೆ

- ಕೀಟನಾಶಕ ಜಾಹೀರಾತುಗಳು ರೈತರ ಹಾದಿ ತಪ್ಪಿಸಿ ಮೋಸ ಮಾಡದಂತಾಗಲು ನಿಯಂತ್ರಣ ವಿಧಿಸಲಾಗುತ್ತದೆ

- ಕೀಟನಾಶಕಗಳಿಗೆ ನಿರ್ದಿಷ್ಟಬೆಲೆ ನಿಗದಿ ಮಾಡಲಿದೆ. ನಿಯಂತ್ರಣಕ್ಕಾಗಿ ಪ್ರಾಧಿಕಾರ ರಚನೆಯಾಗಲಿದೆ.

- ಸುರಕ್ಷಿತ ಹಾಗೂ ಪರಿಣಾಮಕಾರಿ ಕೀಟನಾಶಕಳು ಇರಬೇಕು ಎಂಬ ಷರತ್ತು ವಿಧಿಸಲಾಗುತ್ತದೆ.

- ಕೀಟನಾಶಕ ಉತ್ಪಾದನಾ ಕಂಪನಿಗಳು ಹೊಸ ಕಾಯ್ದೆಯಡಿ ನೋಂದಣಿ ಆಗುವುದು ಕಡ್ಡಾಯ

- ಒಂದು ವೇಳೆ ನಿಯಮ ಉಲ್ಲಂಘಿಸಿದರೆ ಕಂಪನಿಗಳಿಗೆ ದಂಡ ಹಾಕಿ, ಜೈಲು ಶಿಕ್ಷೆ ವಿಧಿಸಲಾಗುತ್ತದೆ.

- ರೈತನಿಗೆ ನಕಲಿ ಅಥವಾ ಕಳಪೆ ಕೀಟನಾಶಕಗಳಿಂದ ಮೋಸವಾದರೆ ಪರಿಹಾರ ನೀಡಲಾಗುತ್ತದೆ

- ಕಂಪನಿಗಳ ಮೇಲೆ ಹಾಕಲಾದ ದಂಡ ಸಂಗ್ರಹಿಸಿ ಇಡಲು ಕೇಂದ್ರೀಯ ನಿಧಿ ಸ್ಥಾಪನೆ; ನಿಧಿಯ ಹಣ ಪರಿಹಾರಕ್ಕೆ ಬಳಕೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Actress Assault Case: ಆರು ಆರೋಪಿಗಳಿಗೆ 20 ವರ್ಷ ಜೈಲು ಶಿಕ್ಷೆ ಘೋಷಿಸಿದ ಕೇರಳ ಕೋರ್ಟ್‌
ಎರಡು ಹಂತಗಳಲ್ಲಿ ನಡೆಯಲಿದೆ ಜನಗಣತಿ, 11,718 ಕೋಟಿ ಮೀಸಲಿಟ್ಟ ಸರ್ಕಾರ; ಇದೇ ಮೊದಲ ಬಾರಿಗೆ ಡಿಜಿಟಲ್‌ ಮೂಲಕ ಗಣತಿ!