
ನವದೆಹಲಿ(ಜು.11): ಸಂಪುಟ ಪುನಾರಚನೆ ಬಳಿಕ ಕೇಂದ್ರ ಸರ್ಕಾರ ಆಡಳಿತಕ್ಕೆ ಮತ್ತಷ್ಟು ವೇಗ ನೀಡಲಾಗಿದೆ. ವಿಮಾನಯಾನ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಜ್ಯೋತಿರಾದಿತ್ಯ ಸಿಂಧಿಯಾ ತಮ್ಮ ರಾಜ್ಯದ ಜನತಗೆ ಸಿಹಿ ಸುದ್ದಿ ನೀಡಿದ್ದಾರೆ. ಜುಲೈ 16 ರಿಂದ 8 ಹೊಸ ವಿಮಾನ ಸೇವೆ ಘೋಷಿಸಿದ್ದಾರೆ.
ಸಂಪುಟ ಪುನಾರಚನೆ: ನಾರಾಯಾಣ ರಾಣೆ to ಸಿಂಧಿಯಾ, ಪ್ರಮಾಣ ವಚನ ಸ್ವೀಕರಿಸಿದ ಪ್ರಮುಖರು!
ಉಡಾನ್ ಯೋಜನೆಯಡಿ 8 ಹೊಸ ವಿಮಾನ ಸೇವೆ ಆರಂಭಿಸಲಾಗುತ್ತಿದೆ. ಪ್ರಯಾಣಿಕರಿಗೆ ಸ್ಪೈಸ್ಜೆಟ್ ವಿಮಾನ ಸೇವೆ ನೀಡಲಿದೆ. ಈ ಕುರಿತು ಟ್ವೀಟ್ ಮಾಡಿರುವ ಸಿಂಧಿಯಾ 8 ವಿಮಾನ ಸೇವೆ ಕುರಿತು ಮಾಹಿತಿ ನೀಡಿದ್ದಾರೆ.
- ಗ್ವಾಲಿಯರ್-ಮುಂಬೈ-ಗ್ವಾಲಿಯರ್
- ಗ್ವಾಲಿಯರ್-ಪುಣೆ-ಗ್ವಾಲಿಯರ್
- ಜಬಲ್ಪುರ್-ಸೂರತ್-ಜಬಲ್ಪುರ್
- ಅಹಮದಾಬಾದ್-ಗ್ವಾಲಿಯರ್-ಅಹಮದಾಬಾದ್
ಉಡಾನ್ ಯೋಜನೆಯಡಿ 100 ವಿಮಾನ ನಿಲ್ದಾಣಗಳನ್ನು ಕಾರ್ಯಗತಗೊಳಿಸುವ ಗುರಿಯನ್ನು ಸರ್ಕಾರ ನಿಗದಿಪಡಿಸಿದೆ ಎಂದು ಸಿಂಧಿಯಾ ಹೇಳಿದ್ದಾರೆ. ಸಣ್ಣ ವಿಮಾನ ನಿಲ್ದಾಣಗಳನ್ನು ಸಂಪರ್ಕಿಸುವತ್ತ ಗಮನಹರಿಸಿರುವ ಈ ಯೋಜನೆಯಡಿ ಕನಿಷ್ಠ 1,000 ವಾಯು ಮಾರ್ಗಗಳನ್ನು ಪ್ರಾರಂಭಿಸಲು ಸರ್ಕಾರ ಯೋಜಿಸಿದೆ ಎಂದು ಅವರು ಹೇಳಿದರು.
ಈ ಯೋಜನೆಯಡಿ ಮಧ್ಯ ಪ್ರದೇಶದಕ್ಕೆ ಇದೀಗ 8 ವಿಮಾನ ಸೇವೆ ಆರಂಭಿಸಲಾಗುತ್ತಿದೆ . ಸಿಂಧಿಯಾ ಘೋಷಣೆಗೆ ಜನರು ಜೈಕಾರ ಹಾಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ