ಕೋವಿಡ್‌ಗೆ ತುತ್ತಾದವರು ಕಠಿಣ ಕೆಲಸ ಮಾಡಬೇಡಿ: ಕೇಂದ್ರ ಆರೋಗ್ಯ ಸಚಿವ

Published : Oct 31, 2023, 06:41 AM IST
ಕೋವಿಡ್‌ಗೆ ತುತ್ತಾದವರು ಕಠಿಣ ಕೆಲಸ ಮಾಡಬೇಡಿ: ಕೇಂದ್ರ ಆರೋಗ್ಯ ಸಚಿವ

ಸಾರಾಂಶ

 ಕೊರೋನಾ ಸೋಂಕಿಗೆ ತುತ್ತಾದವರು ಕಠಿಣ ಕೆಲಸ ಅಥವಾ ಅತಿ ಹೆಚ್ಚು ಶ್ರಮ ಬೇಡುವ ಕೆಲಸದಿಂದ ದೂರ ಇದ್ದು, ಹೃದಯಾಘಾತದಿಂದ ಪಾರಾಗಬೇಕು ಎಂದು ಸ್ವತಃ ಕೇಂದ್ರ ಆರೋಗ್ಯ ಮಂತ್ರಿಯೇ ಕರೆ ಕೊಟ್ಟಿದ್ದಾರೆ.

 ಭಾವ್‌ನಗರ (ಗುಜರಾತ್‌): ಕೋವಿಡ್‌ ನಂತರ ದೇಶದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ ಎಂಬ ವಾದಗಳ ನಡುವೆಯೇ, ತೀವ್ರ ಸ್ವರೂಪದಲ್ಲಿ ಕೊರೋನಾ ಸೋಂಕಿಗೆ ತುತ್ತಾದವರು ಕಠಿಣ ಕೆಲಸ ಅಥವಾ ಅತಿ ಹೆಚ್ಚು ಶ್ರಮ ಬೇಡುವ ಕೆಲಸದಿಂದ ದೂರ ಇದ್ದು, ಹೃದಯಾಘಾತದಿಂದ ಪಾರಾಗಬೇಕು ಎಂದು ಸ್ವತಃ ಕೇಂದ್ರ ಆರೋಗ್ಯ ಮಂತ್ರಿಯೇ ಕರೆ ಕೊಟ್ಟಿದ್ದಾರೆ.

ತವರು ರಾಜ್ಯ ಗುಜರಾತ್‌ನಲ್ಲಿ ಹೃದಯಾಘಾತ ಪ್ರಕರಣಗಳು ವರದಿಯಾದ ಹಿನ್ನೆಲೆಯಲ್ಲಿ ಮಾತನಾಡಿರುವ ಸಚಿವ ಮನ್ಸುಖ್‌ ಮಾಂಡವೀಯ (Minister Mansukh Mandaviya) ಅವರು, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ವಿಸ್ತೃತ ಅಧ್ಯಯನವೊಂದನ್ನು ನಡೆಸಿದೆ. ಗಂಭೀರ ಸ್ವರೂಪದ ಕೋವಿಡ್‌ಗೆ ತುತ್ತಾದವರು ಕೆಲವು ಸಮಯದವರೆಗೆ ಕಠಿಣ ಕೆಲಸ ಮಾಡಬಾರದು ಎಂದು ಸಲಹೆ ಮಾಡಿದೆ. ಹೀಗಾಗಿ ಕಠಿಣ ಕೆಲಸಗಳನ್ನು ತೀವ್ರ ಕೋವಿಡ್‌ ಬಾಧಿತರು ಒಂದೆರಡು ವರ್ಷಗಳ ಕಾಲ ಮುಂದೂಡಬೇಕು ಎಂದು ಅವರು ಮನವಿ ಮಾಡಿದ್ದಾರೆ.

ನೀಲಿ ಬೆಂಕಿಯುಗುಳುವ ಜ್ವಾಲಾಮುಖಿ: ಯುರೋಪಿಯನ್ ಸ್ಪೇಸ್ ಏಜೆನ್ಸಿ ಸೆರೆ ಹಿಡಿದ ಅಪರೂಪದ ದೃಶ್ಯ

ಇತ್ತೀಚೆಗೆ ಗುಜರಾತ್‌ನಲ್ಲಿ ನವರಾತ್ರಿ(Navratri) ಹಬ್ಬದ ಸಂದರ್ಭದಲ್ಲಿ ಗರ್ಭಾ ನೃತ್ಯ ಮಾಡುವಾಗ 10 ಜನರು ಒಂದೇ ದಿನ ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಅಲ್ಲದೆ ಗುಜರಾತಿನಾದ್ಯಂತ ಇತ್ತೀಚೆಗೆ ಹೃದಯಾಘಾತಗಳು ಹೆಚ್ಚಾಗಿದ್ದವು. ಇದರ ಬೆನ್ನಲ್ಲೇ ಸಚಿವರು ಈ ಹೇಳಿಕೆ ನೀಡಿದ್ದಾರೆ.

ಗುಜರಾತ್‌ ಮಾತ್ರವಲ್ಲದೇ ದೇಶಾದ್ಯಂತ ಇತ್ತೀಚಿನ ವರ್ಷಗಳಲ್ಲಿ ಚಿಕ್ಕವಯಸ್ಸಿನವರೇ ಹೃದಯಾಘಾತದಿಂದ ಸಾವಿಗೀಡಾಗುವ ಪ್ರಮಾಣ ಹೆಚ್ಚಾಗಿದೆ. ಇದಕ್ಕೂ ಕೋವಿಡ್‌ಗೂ ಸಂಬಂಧವಿದೆ ಎಂಬ ಬಲವಾದ ನಂಬಿಕೆಯೂ ಸೃಷ್ಟಿಯಾಗಿದೆ. ಮನ್ಸುಖ್‌ ಮಾಂಡವೀಯ ಅವರ ಹೇಳಿಕೆ ಪರೋಕ್ಷವಾಗಿ ಅದನ್ನು ಒಪ್ಪಿಕೊಂಡಂತಿದೆ.

'ಆಕೆಗಾಗಿ' ಹೈ ಹೀಲ್ಡ್‌ ಶೂ ಧರಿಸಿ ಮೈಲು ದೂರ ನಡೆದ ಪುರುಷರು: ವೀಡಿಯೋ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್
ಮೋದಿ ಅವರೇ ನನ್ನ ಗಂಡ ವಿಕ್ರಂನನ್ನು ಪಾಕಿಸ್ತಾನಕ್ಕೆ ಕಳುಹಿಸಿ: ಪಾಕ್ ಮಹಿಳೆಯ ಮನವಿ