ಹುತಾತ್ಮರಾದ ನಾಲ್ವರು ಜಮ್ಮು ಪೊಲೀಸ್ ಕುಟುಂಬಕ್ಕೆ ಉದ್ಯೋಗ: ನೇಮಕಾತಿ ಪತ್ರ ನೀಡಿದ ಅಮಿತ್ ಷಾ

Published : Oct 05, 2022, 12:45 PM IST
ಹುತಾತ್ಮರಾದ ನಾಲ್ವರು ಜಮ್ಮು ಪೊಲೀಸ್ ಕುಟುಂಬಕ್ಕೆ ಉದ್ಯೋಗ: ನೇಮಕಾತಿ ಪತ್ರ ನೀಡಿದ ಅಮಿತ್ ಷಾ

ಸಾರಾಂಶ

ಕಣಿವೆ ನಾಡು ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಯೋತ್ಪದಾಕರ ವಿರುದ್ಧ ಹೋರಾಡಿ ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ.

ಶ್ರೀನಗರ: ಕಣಿವೆ ನಾಡು ಜಮ್ಮು ಕಾಶ್ಮೀರ ಪ್ರವಾಸದಲ್ಲಿರುವ ಕೇಂದ್ರ ಗೃಹ ಸಚಿವ ಅಮಿತ್ ಷಾ ಭಯೋತ್ಪದಾಕರ ವಿರುದ್ಧ ಹೋರಾಡಿ ಹುತಾತ್ಮರಾದ ಪೊಲೀಸರ ಕುಟುಂಬಗಳಿಗೆ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದ್ದಾರೆ. ಜಮ್ಮು ಕಾಶ್ಮೀರದ ನಾಲ್ವರು ಪೊಲೀಸ್ ಸಿಬ್ಬಂದಿ ಉಗ್ರ ಚಟುವಟಿಕೆ ಸಂಬಂಧಿ ಹಿಂಸಾಚಾರದಲ್ಲಿ ಮೃತಪಟ್ಟಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ. ಹುತಾತ್ಮರಾದ ನಾಲ್ವರು ಜಮ್ಮು ಕಾಶ್ಮೀರ ಪೊಲೀಸ್ ಕುಟುಂಬಕ್ಕೆ ಕೇಂದ್ರ ಗೃಹ ಮಂತ್ರಿ ರಾಜಭವನದಲ್ಲಿ ನೇಮಕಾತಿ ಪತ್ರ ವಿತರಿಸಿದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಗೃಹ ಸಚಿವ ಅಮಿತ್ ಷಾ (Amit Shah) ಕೂಡ ಹುತಾತ್ಮ ಪೊಲೀಸರ ಕುಟುಂಬದ ಜೊತೆಗಿನ ತಮ್ಮ ಭೇಟಿಯ ಫೋಟೋಗಳನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಉಗ್ರರ ವಿರುದ್ಧ ಹೋರಾಡಿ ಹುತಾತ್ಮರಾದ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯ ಕುಟುಂಬವನ್ನು ಭೇಟಿ ಮಾಡಿ ಅವರಿಗೆ ಉದ್ಯೋಗ ನೇಮಕಾತಿ ಪತ್ರವನ್ನು ಹಸ್ತಾಂತರಿಸಿದೆ ಎಂದು ಅಮಿತ್ ಷಾ ಬರೆದುಕೊಂಡಿದ್ದಾರೆ. ಉಗ್ರರ ವಿರುದ್ಧ ಜಮ್ಮು ಕಾಶ್ಮೀರ ಪೊಲೀಸರ ಹೋರಾಟವನ್ನು ಅವರು ಶ್ಲಾಘಿಸಿದ್ದಾರೆ. ಇಡೀ ದೇಶ ಇವರ ತ್ಯಾಗಕ್ಕೆ (sacrifice) ನಮಿಸುತ್ತದೆ ಎಂದು ಅಮಿತ್ ಷಾ ಹೇಳಿದ್ದಾರೆ. 

ಇದರೊಂದಿಗೆ ಭಯೋತ್ಪಾದಕರಿಂದ ಹತ್ಯೆಗೊಳಗಾದ ಕುಟುಂಬದವರಿಗೂ ಉದ್ಯೋಗ ನೇಮಕಾತಿ ನೀಡಲಾಗಿದೆ. ಉಗ್ರರಿಂದ ಹತ್ಯೆಗೊಳಗಾದ ಒಟ್ಟು 24 ಜನರ ಕುಟುಂಬಗಳಿಗೆ ಇದೇ ವೇಳೆ ಗೃಹ ಸಚಿವ (Union Home Minister) ಅಮಿತ್ ಷಾ ನೇಮಕಾತಿ ಪತ್ರ ವಿತರಿಸಿದರು. ಜಮ್ಮು ಕಾಶ್ಮೀರಕ್ಕೆ (Jammu and Kashmir) ನೀಡಲಾಗಿದೆ ವಿಶೇಷ ಸ್ಥಾನಮಾನದ ಕಾಯಿದೆ ಆರ್ಟಿಕಲ್ 370 ರದ್ದಾದ (abrogation of Article 370) ಬಳಿಕ ಮೊದಲ ಬಾರಿಗೆ ಕಳೆದ ವರ್ಷ ಅಕ್ಟೋಬರ್‌ನಲ್ಲಿ ಅಮಿತ್ ಷಾ ಕಣಿವೆ ನಾಡಿಗೆ ಭೇಟಿ ನೀಡಿದ್ದರು. ಈ ವೇಳೆ ಅಮಿತ್ ಷಾ, ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಪೊಲೀಸ್ ಇನ್ಸ್‌ಪೆಕ್ಟರ್‌ಗಳಾದ ನೌಗಾಮ್‌ನ ಪರ್ವಿಜ್ ಅಹ್ಮದ್ ಅವರ ಕುಟುಂಬವನ್ನು ಭೇಟಿ ಮಾಡಿದ್ದರು. ಸರ್ಕಾರಿ ಉದ್ಯೋಗದ ನೇಮಕಾತಿ ಪತ್ರವನ್ನು (appointment letters) ಕುಟುಂಬಕ್ಕೆ ಹಸ್ತಾಂತರಿಸಿದ್ದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಖ್ಯಾತ ಸ್ಟಾರ್ ನಟನಿಗೆ ಬಿಷ್ಟೋಯ್ ಗ್ಯಾಂಗ್ ಬೆದರಿಕೆ! ಆತಂಕದಲ್ಲಿರುವ ಫ್ಯಾನ್ಸ್, ಏನಾಗ್ತಿದೆ ಅಲ್ಲೀಗ?
ಮದುವೆ ನಂತರ ಕಾರಿನ ಸ್ಟೇರಿಂಗ್ ಹಿಡಿದ ವಧು; ದೇವ್ರೇ ಕಾಪಾಡಪ್ಪಾ ಎಂದು ಕೈಮುಗಿದು ಕುಳಿತುಕೊಂಡ ವರ!