'ಈ ಬಾರಿ ಮೋದಿ ವಿಕಾಸ, ಮಮತಾ ವಿನಾಶ ಸಮರ'

Kannadaprabha News   | Asianet News
Published : Feb 12, 2021, 10:42 AM IST
'ಈ ಬಾರಿ ಮೋದಿ ವಿಕಾಸ, ಮಮತಾ ವಿನಾಶ ಸಮರ'

ಸಾರಾಂಶ

ಮಮತಾ ಬ್ಯಾನರ್ಜಿ ಅವರೊಬ್ಬ ವಿಫಲ ಆಡಳಿತಗಾರ್ತಿ ಎಂದು ಗೃಹ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ. ಈ ಬಾರಿ ಮೋದಿ ವಿಕಾರ ಮಮತಾ ವಿನಾಶ ಎಂದು ಹೇಳಿದರು. 

ಕೂಚ್‌ಬೆಹರ್‌ (ಪಶ್ಚಿಮ ಬಂಗಾಳ): ಮುಂಬರುವ ಪಶ್ಚಿಮ ಬಂಗಾಳ ಚುನಾವಣೆ ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಾಸ್‌’ ಮಾದರಿ ಮತ್ತು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ‘ವಿನಾಶ್‌’ ಮಾದರಿಯ ನಡುವಿನ ಸಮರವಾಗಿದೆ. ಮಮತಾ ಬ್ಯಾನರ್ಜಿ ಅವರೊಬ್ಬ ವಿಫಲ ಆಡಳಿತಗಾರ್ತಿ ಎಂದು ಗೃಹ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯ ಪರಿವರ್ತನ್‌ ಯಾತ್ರೆಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಯಾತ್ರೆ ಮುಖ್ಯಮಂತ್ರಿಯನ್ನು, ಶಾಸಕರನ್ನು ಅಥವಾ ಮಂತ್ರಿಗಳನ್ನು ಬದಲಿಸುವ ಕಾರಣಕ್ಕಾಗಿ ಹಮ್ಮಿಕೊಂಡಿಲ್ಲ. ಬದಲಾಗಿ ರಾಜ್ಯದಲ್ಲಿ ನಡೆಯುತ್ತಿರುವ ಒಳನುಸುಳುವಿಕೆ ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿಯನ್ನು ಬದಲಿಸುವ ಸಲುವಾಗಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ನೀವು ಬಿಜೆಪಿಗೆ ಮತಹಾಕಿ ಅಧಿಕಾರಕ್ಕೆ ತಂದುನೋಡಿ. ಅಕ್ರಮ ವಲಸಿಗರ ಸಮಸ್ಯೆ ಇರುವುದಿಲ್ಲ. ಒಂದೇ ಒಂದು ಪಕ್ಷಿ ಕೂಡ ಗಡಿಯನ್ನು ದಾಟಿ ರಾಜ್ಯದ ಒಳಕ್ಕೆ ಪ್ರವೇಶಿಸಲು ಆಗುವುದಿಲ್ಲ ಎಂದು ಹೇಳಿದರು.

ಪೌರತ್ವ ಕಾಯ್ದೆ ಜಾರಿಗೆ ದಿನಾಂಕ ಫಿಕ್ಸ್ ಮಾಡಿದ ಅಮಿತ್ ಶಾ!

ಇದೇ ವೇಳೆ ಮೇನಲ್ಲಿ ನಡೆಯಲಿರುವ ಚುನಾವಣೆಯ ಬಳಿಕ ಮಮತಾ ಬ್ಯಾನರ್ಜಿ ಅವರು ಮುಖ್ಯಮಂತ್ರಿ ಆಗಿ ಇರುವುದಿಲ್ಲ. ಆ ಬಳಿಕ ಮಮತಾ ಕೂಡ ಜೈ ಶ್ರೀರಾಮ್‌ ಎಂದು ಹೇಳಲು ಆರಂಭಿಸುತ್ತಾರೆ. ಒಂದು ವೇಳೆ ಬಂಗಾಳದಲ್ಲಿ ಅಲ್ಲದೇ ಇದ್ದರೆ ಪಾಕಿಸ್ತಾನದಲ್ಲಿ ಜೈ ಶ್ರೀರಾಮ್‌ ಘೋಷಣೆಯನ್ನು ಕೂಗಲು ಅಗುವುದೇ? ಬಂಗಾಳದಲ್ಲಿ ಯಾವ ರೀತಿಯ ವಾತಾವರಣ ಸೃಷ್ಟಿಆಗಿದೆಯೆಂದರೆ ಜೈ ಶ್ರೀರಾಮ್‌ ಎಂದು ಘೊಷಣೆ ಕೂಗುವುದು ಕೂಡ ಅಪರಾಧವಾಗಿದೆ ಎಂದು ವಾಗ್ದಾಳಿ ನಡೆಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿ-ಪುಟಿನ್‌ ಒಪ್ಪಂದ: 40 ದಿನಗಳಲ್ಲ, ಕೇವಲ 24 ದಿನಗಳಲ್ಲೇ ರಷ್ಯಾಗೆ ತಲುಪಲಿದೆ ಭಾರತದ ಸರಕುಗಳು!
ನಾವ್ಯಾರಿಗೂ ಕಮ್ಮಿ ಇಲ್ಲ ಬ್ರೋ... ಆಹಾ ಭಾರತೀಯ ನಾರಿ ಕುಡಿದು ರಾಪಿಡೋ ಏರಿ ಬಿದ್ದಳು ಕೆಳಗೆ ಜಾರಿ: ವೀಡಿಯೋ