
ನವದೆಹಲಿ(ಜ.15): ಹಸುವಿನ ಸಗಣಿ ಹಾಗೂ ಮೂತ್ರದಲ್ಲಿ ರೋಗ ನಿರೋಧಕ ಅಂಶಗಳಿದ್ದು, ಈ ಕುರಿತು ಹೆಚ್ಚಿನ ವೈಜ್ಞಾನಿಕ ಸಂಶೋಧನೆ ನಡೆಸುವ ಅಗತ್ಯವಿದೆ ಎಂದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
12 ರಾಜ್ಯಗಳ ವಿವಿಧ ವಿಶ್ವವಿದ್ಯಾಲಯಗಳ ಕುಲಪತಿಗಳು ಹಾಗೂ ಪಶುವೈದ್ಯ ಅಧಿಕಾರಿಗಳ ಸಮಾವೇಶದಲ್ಲಿ ಮಾತನಾಡಿದ ಗಿರಿರಾಜ್ ಸಿಂಗ್, ಗೋಮಾತೆಯ ಸಕಾಣಿಕೆ ಲಾಭದಾಯಕ ಎಂಬುದನ್ನು ನಾಡಿನ ರೈತ ಸಮುದಾಯ ಅರಿಯಬೇಕಿದೆ ಎಂದು ಹೇಳಿದರು.
ಗೋಮಾತೆಯ ಸಾಕಾಣಿಕೆಯ ಲಾಭ ಹಾಗೂ ಅದರ ಸಗಣಿ ಮತ್ತು ಮೂತ್ರದ ಮಹತ್ವದ ಕುರಿತು ವಿಶ್ವ ವಿದ್ಯಾಲಯಗಳು ಇನ್ನೂ ಹೆಚ್ಚಿನ ಸಂಶೋಧನೆ ಕೈಗೊಳ್ಳಬೇಕು ಎಂದು ಈ ವೇಳೆ ಗಿರಿರಾಜ್ ಸಿಂಗ್ ಆಗ್ರಹಿಸಿದರು.
ಭವಿಷ್ಯದಲ್ಲಿ ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಹಸುವಿನ ಸಗಣಿ ಹಾಗೂ ಮೂತ್ರ ಅತ್ಯಂತ ಮಹತ್ವದ ಪಾತ್ರ ನಿರ್ವಹಿಸಲಿವೆ ಎಂದೂ ಗಿರಿರಾಜ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.
ಗೋಮಾತೆಯ ಮಹತ್ವದ ಅರಿವಿದ್ದೇ ಮಹಾತ್ಮಾ ಗಾಂಧಿಜೀ, ರಾಮ್ ಮನೋಹರ್ ಲೋಹಿಯಾ ಹಾಗೂ ದೀನ್ ದಯಾಳ್ ಉಪಾಧ್ಯಾಯ ಅವರಂತ ಮಹನೀಯರು ಹಸು ಸಾಕಾಣಿಕೆಗೆ ಕರೆ ಕೊಟ್ಟಿದ್ದರು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ