ಶೀಘ್ರ ಕ್ರಮ ಕೈಗೊಳ್ಳಿ: ಯುಪಿ ಪೊಲೀಸರಿಗೆ ನಖ್ವಿ ಆದೇಶ ಏನು?

Suvarna News   | Asianet News
Published : Dec 29, 2019, 06:13 PM IST
ಶೀಘ್ರ ಕ್ರಮ ಕೈಗೊಳ್ಳಿ: ಯುಪಿ ಪೊಲೀಸರಿಗೆ ನಖ್ವಿ ಆದೇಶ ಏನು?

ಸಾರಾಂಶ

ಯುಪಿ ಪೊಲೀಸರಿಗೆ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಆದೇಶ| ಅಲ್ಪಸಂಖ್ಯಾತರಿಗೆ ಪಾಕಿಸ್ತಾನಕ್ಕೆ ಹೋಗಿ ಎಂದ ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ| ಎಸ್‌ಪಿ ಅಖಿಲೇಶ್ ನಾರಾಯಣ್ ಸಿಂಗ್ ವಿರುದ್ಧ ಕ್ರಮಕ್ಕೆ ನಖ್ವಿ ಆಗ್ರಹ| 'ಶಾಂತಿಭಂಗ ಮಾಡುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದು ಪೊಲೀಸರ ಕರ್ತವ್ಯ'| 

ಲಕ್ನೋ(ಡಿ.29): ಅಲ್ಪಸಂಖ್ಯಾತರಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳಿದ್ದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಆಗ್ರಹಿಸಿದ್ದಾರೆ.

ಈ ಕುರಿತು ಯುಪಿ ಪೊಲೀಸ್ ಮುಖ್ಯಸ್ಥರಿಗೆ ಮನವಿ ಮಾಡಿರುವ ನಖ್ವಿ, ಅಲ್ಪಸಂಖ್ಯಾತರು ವಾಸಿಸುವ ಪ್ರದೇಶದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿ ದುರ್ವರ್ತನೆ ತೋರಿದ್ದು ಖಂಡನೀಯ ಎಂದು ಹೇಳಿದ್ದಾರೆ.

ಪೊಲೀಸರ ಕರ್ತವ್ಯ ಶಾಂತಿಭಂಗ ಮಾಡುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದೇ ಹೊರತು ಜನರಿಗೆ ಪಾಕಿಸ್ತಾನಕ್ಕೆ ಹೋಗಿ ಎಂದು ಹೇಳುವುದಲ್ಲ ಎಂದು ನಖ್ವಿ ಹರಿಹಾಯ್ದಿದ್ದಾರೆ.

ಅಲ್ಪಸಂಖ್ಯಾತ ಸಮುದಾಯದವರಲ್ಲಿ ಭಯ ಹುಟ್ಟಿಸಲು ಪ್ರಯತ್ನ ನಡೆಸಿದ ಪೊಲೀಸ್ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಖ್ವಿ ಆಗ್ರಹಿಸಿದ್ದಾರೆ.


ಮುಸ್ಲಿಮರ ಬಸ್ತಿಯಲ್ಲಿ ಎಸ್‌ಪಿ ಕುಸ್ತಿ: ಪಾಕಿಸ್ತಾನಕ್ಕೆ ಹೋಗಿ ಎಂದ ಅಧಿಕಾರಿ!

ಅಲ್ಪಸಂಖ್ಯಾತ ಸಮುದಾಯದವರ ಪ್ರದೇಶದಲ್ಲಿ ಕರ್ತವ್ಯನಿರತ ಎಸ್‌ಪಿ ಅಖಿಲೇಶ್ ನಾರಾಯಣ್ ಸಿಂಗ್, ಮುಸ್ಲಿಮರೆಲ್ಲಾ ಪಾಕಿಸ್ತಾನಕ್ಕೆ ಹೋಗಿ ಎಂದು ಏರು ಧ್ವನಿಯಲ್ಲಿ ಬೆದರಿಕೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಇಂಡಿಗೋದ ಭಾರೀ ಕುಸಿತ: ಒಂದೇ ವಿಮಾನಯಾನ ಸಂಸ್ಥೆಯ ಏಕಸ್ವಾಮ್ಯವಾದಾಗ
ರಿಪೇರಿಗೆ 5 ಗಂಟೆ ಬೇಕೆಂದ ರೈಲ್ವೆ ಅಧಿಕಾರಿಗಳು; ಸುತ್ತಿಗೆಯಿಂದ 10 ನಿಮಿಷದಲ್ಲಿ ಸರಿ ಮಾಡಿದ ಅಂಕಲ್