ಕೇರಳದಲ್ಲಿ ಕೇಂದ್ರ ಸಚಿವರ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

Published : Feb 09, 2023, 04:55 PM IST
ಕೇರಳದಲ್ಲಿ ಕೇಂದ್ರ ಸಚಿವರ ಮನೆ ಮೇಲೆ ದುಷ್ಕರ್ಮಿಗಳಿಂದ ದಾಳಿ

ಸಾರಾಂಶ

ಅಪರಿಚಿತ ದುಷ್ಕರ್ಮಿಗಳು ಕೇಂದ್ರ  ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರ ತಿರುವನಂತಪುರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿ  ಮನೆ ಕಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ.

ತಿರುವನಂತಪುರ: ಅಪರಿಚಿತ ದುಷ್ಕರ್ಮಿಗಳು ಕೇಂದ್ರ  ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ವಿ ಮುರಳೀಧರನ್ ಅವರ ತಿರುವನಂತಪುರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಿ  ಮನೆ ಕಟಕಿ ಗಾಜುಗಳನ್ನು ಪುಡಿಗಟ್ಟಿದ್ದಾರೆ.  ಬುಧವಾರ ರಾತ್ರಿ  ಈ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಮನೆ ಕೆಲಸದಾಕೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ.  ಮನೆಯ ಎರಡು ಕಿಟಕಿಗಳ ಗಾಜುಗಳನ್ನು ಕಲ್ಲುಗಳಿಂದ ಹೊಡೆದು ಒಡೆದು ಹಾಕಲಾಗಿದೆ. ಅಲ್ಲದೇ ಒಡೆದ ಕಿಟಕಿ ಬಳಿ ರಕ್ತದ ಕಲೆಗಳು ಕಂಡು ಬಂದಿವೆ. 

ಸಚಿವ ವಿ ಮುರಳೀಧರನ್ (V Muraleedharan) ಅವರು ರಾಜ್ಯ ರಾಜಧಾನಿಗೆ ಬಂದಾಗಲೆಲ್ಲ ಈ ನಿವಾಸದಲ್ಲಿ ವಾಸ್ತವ್ಯ ಹೂಡುತ್ತಿದ್ದರು.  ಕಣ್ಣೂರಿನ ತಲಸ್ಸೇರಿ ಮೂಲದವರಾದ  ವಿ ಮುರಳೀಧರನ್ ಅವರು ತಿರುವನಂತಪುರ (Thiruvananthapuram) ನಗರದ ಹೊರವಲಯದಲ್ಲಿ ಬರುವ ಕೊಚ್ಚುಲೂರಿನ  ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಬಳಿ ಇರುವ ಈ ಮನೆಯನ್ನು ತಿರುವನಂತಪುರಕ್ಕೆ ಬಂದಾಗ ವಾಸ ಮಾಡಲು ಬಳಸುತ್ತಿದ್ದರು.  ಅಲ್ಲದೇ ಸಚಿವರ ಕಚೇರಿಯೂ ಕೂಡ ಇಲ್ಲಿಗೆ ಸಮೀಪದಲ್ಲೇ ಇತ್ತು.  ಘಟನೆಗೆ ಸಂಬಂಧಿಸಿದಂತೆ ಮೆಡಿಕಲ್ ಕಾಲೇಜು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿಸಿಪಿ ಅಜಿತ್ ಅವರ ಮೇಲುಸ್ತುವಾರಿಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.  ವಿಧಿ ವಿಜ್ಞಾನ ಪ್ರಯೋಗಾಲಯವೂ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದೆ. 

ಕೇರಳ ಮಹಿಳೆಯಿಂದ ಕೆಂಪೇಗೌಡ ಏರ್‌ಪೋರ್ಟ್‌ಗೆ ಬಾಂಬ್‌ ಬೆದರಿಕೆ!

ಇನ್ನು ಈ ಘಟನೆಯನ್ನು ಕೇರಳ ಬಿಜೆಪಿ ಖಂಡಿಸಿದ್ದಾರೆ. ಕೇರಳ ಬಿಜೆಪಿ ಮುಖ್ಯಸ್ಥ ಈ ಘಟನೆ ಬಗ್ಗೆ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ. ಇದಾದ ಬಳಿಕ ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಹಾಗೂ ಶ್ವಾನ ದಳ ಆಗಮಿಸಿ ಪರಿಶೀಲನೆ ನಡೆಸಿತು ಎಂದು ತಿಳಿದು ಬಂದಿದೆ.  ಕೇರಳ ಬಿಜೆಪಿ ಅಧ್ಯಕ್ಷ ಕೆ ಸುರೇಂದ್ರನ್ ( K Surendran) ಅವರು ಕೇರಳ ಸಿಎಂ ಪಿಣರಾಯಿ ವಿಜಯನ್ (Pinarayi Vijayan) ಅವರಿಗೆ ಘಟನೆಯ ಬಗ್ಗೆ ಸಂಪೂರ್ಣವಾಗಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.  ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಟ್ಟಿದೆ.  ರಾಜ್ಯ ರಾಜಧಾನಿಯಲ್ಲೇ ಕೇಂದ್ರ ಸಚಿವರ ಮನೆಗೆ ಭದ್ರತೆ ಒದಗಿಸಲು ಪೊಲೀಸರಿಗೆ ಸಾಧ್ಯವಾಗುತ್ತಿಲ್ಲ. ಈ ಘಟನೆಯನ್ನು ತೀವ್ರವಾಗಿ ಖಂಡಿಸುವುದಾಗಿ ಅವರು ಹೇಳಿದ್ದಾರೆ. 

ಬಿಜೆಪಿ ಸೇರ್ತಿಲ್ಲ, ಆದರೆ ದೇಶ ದುರ್ಬಲ ಮಾಡುವ ಶಕ್ತಿಗಳ ವಿರುದ್ಧವಿದ್ದೇನೆ: ಅನಿಲ್‌ ಆಂಟನಿ!

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ರತನ್ ಟಾಟಾ ಮಲತಾಯಿ, ಲ್ಯಾಕ್‌ಮೆ ಫ್ಯಾಶನ್ ಸಂಸ್ಥಾಪಕಿ ಸೈಮನ್ ಟಾಟಾ ನಿಧನ
ಭಾರತದ 2 ಬಿಲಿಯನ್ ಡಾಲರ್ ಪರಮಾಣು ಜಲಾಂತರ್ಗಾಮಿ ಒಪ್ಪಂದ ಅಂತಿಮಗೊಳಿಸಿದ ಪುಟಿನ್ ಭೇಟಿ