
ನವದೆಹಲಿ(ಜು.14): ಕೇಂದ್ರ ಸಂಪುಟ ಪುನರಾಚನೆಗಾಗಿ ಕೆಲವರು ರಾಜೀನಾಮೆ ನೀಡಿದ್ದರೆ, ಮತ್ತೆ ಕೆಲವರ ಸ್ಥಾನ ಬದಲಾಗಿದೆ. ಹೀಗಾಗಿ ರಾಜ್ಯಸಭೆಯಲ್ಲಿ ಆಡಳಿತಾರೂಢ ಬಿಜೆಪಿ ನಾಯಕರಾಗಿದ್ದ ಥಾವರ್ ಚಂದ್ ಗೆಹ್ಲೋಟ್ ಇದೀಗ ಕರ್ನಾಟಕ ರಾಜ್ಯಪಾಲರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಥಾವರ್ ಸ್ಥಾನಕ್ಕೆ ಇದೀಗ ಕೇಂದ್ರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಆಯ್ಕೆ ಮಾಡಲಾಗಿದೆ.
ತನ್ನ ಪ್ರಾಣ ಲೆಕ್ಕಿಸದೆ ಮಗುವನ್ನು ಕಾಪಾಡಿದ್ದ ಮಯೂರ್ ಶೇಲ್ಕೆಗೆ 50 ಸಾವಿರ ಬಹುಮಾನ..!.
2010ರಿಂದ ರಾಜ್ಯಸಭಾ ಸದಸ್ಯರಾಗಿರುವ ಪಿಯೂಷ್ ಗೋಯೆಲ್, ಸದ್ಯ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾಗಿದ್ದಾರೆ. ವಕೀಲ, ಬಿಜೆಪಿ ನಾಯಕ ಭೂಪೇಂದ್ರ ಯಾದವ್ ಹಾಗೂ ಪಿಯೂಷ್ ಗೋಯೆಲ್ ನಡುವೆ ತೀವ್ರ ಸ್ಪರ್ಧೆ ಎರ್ಪಟ್ಟಿತ್ತು. ಅಂತಿಮವಾಗಿ ಪಿಯೂಷ್ ಗೋಯೆಲ್ ಅವರಿಗೆ ರಾಜ್ಯಸಭಾ ನಾಯಕತ್ವ ನೀಡಲಾಗಿದೆ.
ಭಾರತೀಯ ರೈಲ್ವೇ ಎಂದಿಗೂ ಖಾಸಗೀಕರಣ ಮಾಡುವುದಿಲ್ಲ; ಭರವಸೆ ನೀಡಿದ ಗೋಯೆಲ್
ಕಾಂಗ್ರೆಸ್ ಲೋಕಸಭೆ ನಾಯಕ ಅಧೀರ್ ರಂಜನ್ ಚೌದರಿಯನ್ನು ಬದಲಾಯಿಸುವ ಕುರಿತು ಚರ್ಚಿಸಿತ್ತು. ಆದರೆ ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಹೇಳಿವೆ. ಆದರೆ ಬಿಜೆಪಿ ಸಂಪುಟ ಪುನಾರಚನೆಯಿಂದ ತೆರವಾದ ಸ್ಥಾನಗಳಿಗೆ ಆಯ್ಕೆ ಮಾಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ