ರಾಹುಲ್ ಗಾಂಧಿ ದೇಶದ ನಂ.1 ಭಯೋತ್ಪಾದಕ: ಬಿಜೆಪಿ ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು

By Kannadaprabha NewsFirst Published Sep 16, 2024, 6:58 AM IST
Highlights

ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು ಅವರು, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂ.1 ಭಯೋತ್ಪಾದಕ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾಗಲ್ಪುರ (ಬಿಹಾರ) (ಸೆ.16): ಕೇಂದ್ರ ಸಚಿವ ಹಾಗೂ ಬಿಜೆಪಿ ನಾಯಕ ರವನೀತ್ ಸಿಂಗ್ ಬಿಟ್ಟು ಅವರು, ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಂ.1 ಭಯೋತ್ಪಾದಕ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಭಾಗಲ್ಪುರದಲ್ಲಿ ಮಾತನಾಡಿದ ಅವರು, ‘ಸಿಖ್ಖರಿಗೆ ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಇಲ್ಲ ಎಂದು ಅಮೆರಿಕದಲ್ಲಿ ರಾಹುಲ್ ಗಾಂಧಿ ಹೇಳಿದ್ದಾರೆ. ಈ ಮೂಲಕ ಸಿಖ್ಖರನ್ನು ಒಡೆಯಲು ಯತ್ನಿಸಿದ್ದಾರೆ. ಸಿಖ್ಖರು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂ ದಿಲ್ಲ. ಆದರೂ ಅವರನ್ನು ಒಂದು ಪಕ್ಷಕ್ಕೆ ಸೀಮಿತ ಮಾಡುವ ಯತ್ನ ನಡೆದಿದೆ’ ಎಂದರು.

Latest Videos

‘ಇಂಥ ಹೇಳಿಕೆ ನೀಡಿದ ರಾಹುಲ್‌ ದೇಶದ ನಂ.1 ಭಯೋತ್ಪಾದಕ. ಇಂದು ದೇಶವನ್ನು ವಿಭಜಿಸಿದವರು, ಬಾಂಬ್, ಮದ್ದುಗುಂಡು ಬಳಸಿದವರು, ರೈಲಿನಲ್ಲಿ ಸ್ಫೋ ಟ ನಡೆಸಿದವರು ರಾಹುಲ್ ಗಾಂಧಿ ಬೆಂಬಲಕ್ಕೆ ನಿಂತಿದ್ದಾರೆ. ತನಿಖಾ ಸಂಸ್ಥೆಗಳು ಯಾರನ್ನಾದರೂ ಬಂಧಿಸಬೇಕು ಎಂದರೆ ಮೊದಲು ಅದು ರಾಹುಲ್‌ ಗಾಂಧಿ’ ಎಂದು ಕಿಡಿಕಾರಿದರು.

ರಾಹುಲ್‌ ಗಾಂಧಿಯನ್ನು ‘ಪಪ್ಪು’ ಎಂದ ನೋಯ್ಡಾ ಜಿಲ್ಲಾಧಿಕಾರಿ, ಕಾಂಗ್ರೆಸ್‌ ನಾಯಕರು ಗರಂ!

ಪತ್ರಕರ್ತನ ಮೇಲೆ ಹಲ್ಲೆ: ಪಿತ್ರೋಡಾ ಕ್ಷಮೆ

ವಾಷಿಂಗ್ಟನ್‌: ಇತ್ತೀಚೆಗೆ ಅಮೆರಿಕದಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ತಂಡದಿಂದ ಹಲ್ಲೆಗೊಳಗಾದ ಇಂಡಿಯಾ ಟುಡೇ ಪತ್ರಕರ್ತ ರೋಹಿತ್ ಶರ್ಮಾ ಅವರಿಗೆ ಕರೆ ಮಾಡಿ ಭಾರತೀಯ ಸಾಗರೋತ್ತರ ಕಾಂಗ್ರೆಸ್ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ವೈಯಕ್ತಿಕ ಕ್ಷಮೆಯಾಚಿಸಿದ್ದಾರೆ.ಶರ್ಮಾಗೆ ಕರೆ ಮಾಡಿದ್ದ ಪಿತ್ರೋಡಾ ಘಟನೆ ಬಗ್ಗೆ ಸಂಪೂರ್ಣ ತನಿಖೆ ನಡೆಸುವುದಾಗಿ ಪ್ರತಿಜ್ಞೆ ಮಾಡಿದರು ಮತ್ತು ಇಂಥ ದಾಳಿ ಸ್ವೀಕಾರಾರ್ಹವಲ್ಲ. ಪತ್ರಿಕಾ ಸ್ವಾತಂತ್ರ್ಯಕ್ಕೆ ನಾನು ಬದ್ಧ ಎಂದರು ಎಂದು ಶರ್ಮಾ ಹೇಳಿದ್ದಾರೆ

click me!