ಇಂದಿರಾ ಗಾಂಧಿ ಭಾರತದ ಮಾತೆ: ಕೇಂದ್ರ ಸಚಿವ ಸುರೇಶ್‌ ಗೋಪಿ ಬಣ್ಣನೆ

Published : Jun 16, 2024, 08:47 AM IST
ಇಂದಿರಾ ಗಾಂಧಿ ಭಾರತದ ಮಾತೆ: ಕೇಂದ್ರ ಸಚಿವ ಸುರೇಶ್‌ ಗೋಪಿ ಬಣ್ಣನೆ

ಸಾರಾಂಶ

ಇಂದಿರಾ ಗಾಂಧಿಯನ್ನು ಭಾರತ ದೇಶದ ತಾಯಿ ಎನ್ನಬಹುದು. ಅದೇ ರೀತಿ ಕೇರಳದಲ್ಲಿ ಕಾಂಗ್ರೆಸ್‌ ಪಕ್ಷದ ಏಳಿಗೆಗೆ ದುಡಿದ ದಿ. ಕರುಣಾಕರನ್‌ ಅವರನ್ನು ಕೇರಳ ರಾಜ್ಯದ ಕಾಂಗ್ರೆಸ್‌ ಪಿತಾಮಹ ಹಾಗೂ ಕೆಚ್ಚೆದೆಯ ಆಡಳಿತಗಾರ ಎನ್ನಬಹುದು ಎಂದ ಕೇಂದ್ರ ಸಚಿವ, ಬಿಜೆಪಿ ನಾಯಕ ಸುರೇಶ್‌ ಗೋಪಿ 

ತ್ರಿಶ್ಶೂರ್‌(ಜೂ.16):  ಭಾರತದ ಮಾಜಿ ಪ್ರಧಾನಿ ಹಾಗೂ ಕಾಂಗ್ರೆಸ್‌ ಪಕ್ಷದ ಹಿರಿಯ ನಾಯಕಿ ಇಂದಿರಾ ಗಾಂಧಿ ಅವರನ್ನು ಭಾರತ ಮಾತೆ ಎಂದು ಕೇಂದ್ರ ಸಚಿವ, ಬಿಜೆಪಿ ನಾಯಕ ಸುರೇಶ್‌ ಗೋಪಿ ಬಣ್ಣಿಸಿದ್ದಾರೆ. ಅಲ್ಲದೆ ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್‌ ಹಾಗೂ ಸಿಪಿಎಂನ ಇ.ಕೆ.ನಯನಾರ್‌ ಅವರನ್ನು ತಮ್ಮ ರಾಜಕೀಯ ಗುರುಗಳು ಎಂದು ಹೇಳಿದ್ದಾರೆ.

ನಗರದಲ್ಲಿ ಕರುಣಾಕರನ್‌ ಸ್ಮಾರಕಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಇಂದಿರಾ ಗಾಂಧಿಯನ್ನು ಭಾರತ ದೇಶದ ತಾಯಿ ಎನ್ನಬಹುದು. ಅದೇ ರೀತಿ ಕೇರಳದಲ್ಲಿ ಕಾಂಗ್ರೆಸ್‌ ಪಕ್ಷದ ಏಳಿಗೆಗೆ ದುಡಿದ ದಿ. ಕರುಣಾಕರನ್‌ ಅವರನ್ನು ಕೇರಳ ರಾಜ್ಯದ ಕಾಂಗ್ರೆಸ್‌ ಪಿತಾಮಹ ಹಾಗೂ ಕೆಚ್ಚೆದೆಯ ಆಡಳಿತಗಾರ ಎನ್ನಬಹುದು ಎಂದಿದ್ದಾರೆ. 

ಅರಳಿರುವ ಕಮಲ ಮುದಡಲ್ಲ ; ರಾಜೀನಾಮೆ ಬಗ್ಗೆ ಕೇರಳ ಬಿಜೆಪಿ ಸಂಸದನ ಸ್ಪಷ್ಟನೆ

ಜೊತೆಗೆ ನಯನಾರ್‌ ಮತ್ತು ಕರುಣಾಕರನ್‌ ಇಬ್ಬರು ನನ್ನ ರಾಜಕೀಯ ಗುರುಗಳು’ ಎಂದಿದ್ದಾರೆ. ವಿಶೇಷವೆಂದರೆ ಲೋಕಸಭಾ ಚುನಾವಣೆಯಲ್ಲಿ ಸುರೇಶ್‌ ಗೋಪಿ ಅವರು ಕರುಣಾಕರನ್‌ ಪುತ್ರ ಮುರಳೀಧರನ್‌ರನ್ನು ಸೋಲಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಭೂರೂಪ ಬದಲಾಯಿಸಿದ ಪ್ರವಾಹ.. ವಿಶ್ವದ ಅತಿದೊಡ್ಡ ನದಿ ಮಜುಲಿ ದ್ವೀಪ ಬಗ್ಗೆ ನಿಮಗೆ ಗೊತ್ತೇ?
ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!