ಜನಸಂಖ್ಯಾ ನಿಯಂತ್ರಣಕ್ಕೆ ಹೆಜ್ಜೆ ಇಟ್ಟಿತಾ ಕೇಂದ್ರ? ಸಚಿವರ ಸ್ಫೋಟಕ ಹೇಳಿಕೆಯಿಂದ ಸಂಚಲನ!

Published : Dec 18, 2020, 03:48 PM IST
ಜನಸಂಖ್ಯಾ ನಿಯಂತ್ರಣಕ್ಕೆ ಹೆಜ್ಜೆ ಇಟ್ಟಿತಾ ಕೇಂದ್ರ? ಸಚಿವರ ಸ್ಫೋಟಕ ಹೇಳಿಕೆಯಿಂದ ಸಂಚಲನ!

ಸಾರಾಂಶ

ಜನಸಂಖ್ಯಾ ನಿಯಂತ್ರಣ ಕುರಿತು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತೊಮ್ಮೆ ಗುಡುಗಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರ ಮುಂದಿನ ನೀತಿ ಜನಸಂಖ್ಯಾ ನಿಯಂತ್ರಣವಾಗಿದೆ ಅನ್ನೋ ಮಾತುಗಳು ಕೇಳಿ ಬಂದಿದೆ. ಅಷ್ಟಕ್ಕೂ ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕುರಿತು ಸಟಿವರು ನೀಡಿದ ಹೇಳಿಕೆಯೇನು? ಇಲ್ಲಿದೆ ವಿವರ.

ನವದೆಹಲಿ(ಡಿ.18): ಬಿಜೆಪಿ ಫೈಯರ್‌ಬ್ರಾಂಡ್ ಲೀಡರ್ ಎಂದೇ ಗುರುತಿಸಿಕೊಂಡಿರುವ ಕೇಂದ್ರ ಸಚಿವ ಗಿರಿರಾಜ್ ಸಿಂಗ್ ಮತ್ತೊಮ್ಮೆ ಜನಸಂಖ್ಯಾ ನಿಯಂತ್ರ ಕುರಿತು ಮಾತನಾಡಿದ್ದಾರೆ. ದೇಶದಲ್ಲಿ ಸಾಮಾಜಿಕ ಸಾಮರಸ್ಯ ನೆಲೆಸುವಂತೆ ಮಾಡುವುದು ಅತೀ ಮುಖ್ಯ. ಹೀಗಾಗಿ ಜನಸಂಖ್ಯಾ ನಿಯಂತ್ರಣ ಕೂಡ ಅಷ್ಟೇ ಮುಖ್ಯವಾಗಿದೆ. ಆದರೆ ಜನಸಂಖ್ಯಾ ನಿಯಂತ್ರಣವನ್ನು ಧರ್ಮದ ಆಧಾರದಲ್ಲಿ ಅಥವಾ ವೋಟ್ ಬ್ಯಾಂಕ್ ಆಧಾರದಲ್ಲಿ ನೋಡಬಾರದು ಎಂದು ಗಿರಿರಾಜ್ ಸಿಂಗ್ ಹೇಳಿದ್ದಾರೆ.

ನೂತ ಕೃಷಿ ಮಸೂದೆ ಒಂದೇ ರಾತ್ರಿಯಲ್ಲಿ ಜಾರಿಗೆ ಬಂದಿಲ್ಲ; ರೈತರ ಹಾದಿ ತಪ್ಪಿಸಬೇಡಿ; ಮೋದಿ

ದೇಶದ ಅಭಿವೃದ್ಧಿ ಹಾಗೂ ಸಾಮಾಜಿಕ ಸಾಮರಸ್ಯಕ್ಕೆ ಜನಸಂಖ್ಯಾ ನಿಯಂತ್ರಣದಲ್ಲಿ ಕಠಿಣ ಕಾನೂನು ಅಗತ್ಯವಿದೆ ಎಂದಿದ್ದಾರೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಳಿ ಲವ್ ಜಿಹಾದ್ ಹಾಗೂ ಜನಸಂಖ್ಯಾ ನಿಯಂತ್ರಣ ಕಾನೂನು ತರಲು ಆಗ್ರಹಿಸಿದ ಒಂದೇ ವಾರದಲ್ಲಿ ಗಿರಿರಾಜ್ ಸಿಂಗ್ ಇದೀಗ ಭಾರತದಲ್ಲಿ ಜನಸಂಖ್ಯಾ ನಿಯಂತ್ರಣದ ಕಠಿಣ ಕಾನೂನು ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ.

ಡಿಸೆಂಬರ್ ಆರಂಭದಲ್ಲಿ ಸುಪ್ರೀಂ ಕೋರ್ಟ್‌ನಲ್ಲಿ ನಡೆದ ಜನಸಂಖ್ಯಾ ನಿಯಂತ್ರಣ ಕುರಿತು ವಿಚಾರಣೆಯಲ್ಲಿ ಕೇಂದ್ರ ತನ್ನ ನಿಲುವುಗಳನ್ನು ಸ್ಪಷ್ಟಪಡಿಸಿತ್ತು. ಕೇಂದ್ರ ಸರ್ಕಾರ ಬಲವಂತವಾಗಿ ಜನಸಂಖ್ಯಾ ನಿಯಂತ್ರಣ ಮಾಡುವ ಪ್ರಯತ್ನ ಮಾಡುವುದಿಲ್ಲ ಎಂದಿತ್ತು. ಕಾರಣ ಚೀನಾ ಮಾಡೆಲ್ ನಮ್ಮ ದೇಶದಲ್ಲಿ ಅನುಸರಿಸಲು ಸಾಧ್ಯವಿಲ್ಲ. ಇಷ್ಟೇ ಈ ರೀತಿಯ ಮಾಡೆಲ್‌ಗಳಿಂದ ಹೆಣ್ಣು-ಗಂಡಿನ ಅನುಪಾತದಲ್ಲಿ ಏರುಪೇರಾಗುವ ಸಾಧ್ಯತೆ ಹೆಚ್ಚು ಎಂದು ಕೇಂದ್ರ ಹೇಳಿತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮೋದಿಗೆ ಸಮಾಧಿ ತೋಡುತ್ತೇವೆ: ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ
'ಇದಪ್ಪಾ ಕಾನ್ಪಿಡೆನ್ಸ್‌ ಅಂದ್ರೆ..' ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಬರೋ ಮುನ್ನವೇ 12 ಸಾವಿರ ಲಡ್ಡು ಮಾಡಿಸಿಟ್ಟ ಸ್ಪರ್ಧಿ!