ಬಡವರು, ಮಧ್ಯಮ ವರ್ಗ, ರೈತರಿಗೆ ಅನುಕೂಲಕರ ಬಜೆಟ್: ಜೋಶಿ

Published : Feb 02, 2025, 06:50 AM IST
ಬಡವರು, ಮಧ್ಯಮ ವರ್ಗ, ರೈತರಿಗೆ ಅನುಕೂಲಕರ ಬಜೆಟ್: ಜೋಶಿ

ಸಾರಾಂಶ

ಆದಾಯ ತೆರಿಗೆ ವಿನಾಯಿತಿಯನ್ನು 12 ಲಕ್ಷ ರುಪಾಯಿವರೆಗೆ ವಿಸ್ತರಿಸಿರುವುದರಿಂದ ಮಧ್ಯಮ ವರ್ಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಕ್ಯಾನ್ಸರ್‌ ರೋಗಕ್ಕೆ ಸಂಬಂಧಿಸಿದ ಔಷಧಿಗಳಿಗೆ ಆಮದು ಸುಂಕ ಕಡಿಮೆ ಮಾಡಿರುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ 

ನವದೆಹಲಿ(ಫೆ.02):  ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಡವರು, ಮಧ್ಯಮ ವರ್ಗ, ರೈತರು, ಸಣ್ಣ ಉದ್ದಿಮೆದಾರರು ಹಾಗೂ ಹಿಂದುಳಿದ ವರ್ಗಗಳಿಗೆ ಅನುಕೂಲವಾಗುವ ಬಜೆಟ್ ಮಂಡಿಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಪ್ರತಿಕ್ರಿಯಿಸಿದ್ದಾರೆ.

ಆದಾಯ ತೆರಿಗೆ ವಿನಾಯಿತಿಯನ್ನು 12 ಲಕ್ಷ ರುಪಾಯಿವರೆಗೆ ವಿಸ್ತರಿಸಿರುವುದರಿಂದ ಮಧ್ಯಮ ವರ್ಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ. ಕ್ಯಾನ್ಸರ್‌ ರೋಗಕ್ಕೆ ಸಂಬಂಧಿಸಿದ ಔಷಧಿಗಳಿಗೆ ಆಮದು ಸುಂಕ ಕಡಿಮೆ ಮಾಡಿರುವುದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.

Budget 2025: ಕೇಂದ್ರದ ಇಂತಹ 10 ಬಜೆಟ್ ನೋಡಿದ್ದೇವೆ, ಪ್ರಿಯಾಂಕ್‌ ಖರ್ಗೆ

ಬೇಳೆ ಕಾಳುಗಳಲ್ಲಿ ಸ್ವಾವಲಂಬನೆ ಸಾಧಿಸಲು ಕೇಂದ್ರ ಸರ್ಕಾರ ಆಂದೋಲನ ಆರಂಭಿಸಿದೆ. ಕರ್ನಾಟಕದಲ್ಲಿ ತೊಗರಿ ಹೆಚ್ಚು ಬೆಳೆಯಲಾಗುತ್ತಿದ್ದು, ಇದರಿಂದ ರಾಜ್ಯಕ್ಕೆ ಹೆಚ್ಚು ಲಾಭವಾಗಲಿದೆ. ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ 3ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಿರುವುದರಿಂದ ರೈತರು ಕೃಷಿ ಖರ್ಚು-ವೆಚ್ಚ ಮಾಡಲು ಸಹಕಾರಿಯಾಗಲಿದೆ. ಹತ್ತಿ ಬೆಳೆಗೆ ಪ್ರೊತ್ಸಾಹ ನೀಡಲಾಗಿದೆ. ಸೇವಾ ಕ್ಷೇತ್ರದಲ್ಲಿನ ಹಂಗಾಮಿ ನೌಕರರಿಗೆ ಆರೋಗ್ಯ ವಿಮಾ ಯೋಜನೆ ವಿಸ್ತರಿಸಲಾಗಿದೆ. ಜೀವ ರಕ್ಷಕ ಔಷಧಗಳಿಗೆ ಬಜೆಟ್‌ನಲ್ಲಿ ಅಬಕಾರಿ ಸುಂಕ ವಿನಾಯಿತಿ ನೀಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಬಜೆಟ್‌ 2025: ವಾಡಿ-ಗದಗ್‌ ರೈಲ್ವೆಗೆ ಮೀಠಾ, ಯಾದಗಿರಿ-ಆಲಮಟ್ಟಿಗೆ ಖಠ್ಠಾ...!

ಪ್ರಧಾನಿ ನರೇಂದ್ರ ಮೋದಿ ಮಾರ್ಗದರ್ಶನದಲ್ಲಿ ನಿರ್ಮಲಾ ಸೀತರಾಮನ್ ಅವರು ಎಲ್ಲರನ್ನೂ ಒಳಗೊಂಡ ಅಭಿವೃದ್ಧಿ ಪರ ಬಜೆಟ್ ಮಂಡಿಸಿದ್ದಾರೆ. ಮೂರನೇ ಆರ್ಥಿಕ ಶಕ್ತಿಯಾಗಿ ಬೆಳೆಯಲು ಬೇಕಾದ ತಯಾರಿ ಬಜೆಟ್ ಮೂಲಕ ಮಾಡಲಾಗಿದೆ ಎಂದು ಅವರು ಹೇಳಿದರು.

ಹಂತ,ಹಂತವಾಗಿ ಏಮ್ಸ್‌ ಘಟಕಗಳನ್ನು ದೇಶಾದ್ಯಂತ ನೀಡಲಾಗುತ್ತಿದೆ. ಏಮ್ಸ್ ಎಲ್ಲಿ ಸ್ಥಾಪಿಸಬೇಕೆಂಬ ಬಗ್ಗೆ ರಾಜ್ಯ ಸರ್ಕಾರದದಲ್ಲಿ ಸ್ಪಷ್ಟತೆ ಇಲ್ಲ. ರಾಜ್ಯದಲ್ಲಿ ಏಮ್ಸ್‌ ನ್ನು ಎಲ್ಲಿ ಸ್ಥಾಪನೆ ಮಾಡಬೇಕೆಂಬ ಬಗ್ಗೆ ಗೊಂದಲ ಇದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..