2026ರಲ್ಲಿ ಭಾರತದ ಮೊದಲ ಬುಲೆಟ್‌ ಟ್ರೇನ್‌ ಕಾರ್ಯಾರಂಭ, ರೈಲ್ವೆ ಸಚಿವರ ಮಾಹಿತಿ

Published : Jan 11, 2024, 04:18 PM IST
2026ರಲ್ಲಿ ಭಾರತದ ಮೊದಲ ಬುಲೆಟ್‌ ಟ್ರೇನ್‌ ಕಾರ್ಯಾರಂಭ, ರೈಲ್ವೆ ಸಚಿವರ ಮಾಹಿತಿ

ಸಾರಾಂಶ

ಜಪಾನ್‌ ಶಿಂಕನ್‌ಸೆನ್‌ ಟೆಕ್ನಾಲಜಿಯನ್ನು ಬಳಸಿಕೊಂಡು ಹೈಸ್ಪೀಡ್‌ ರೈಲು ಮಾರ್ಗವನ್ನು ನಿರ್ಮಾಣ ಮಾಡಲಾಗುತ್ತದೆ. ಜಪಾನ್‌ ದೇಶದ 88 ಸಾವಿರ ಸಾಫ್ಟ್‌ ಲೋನ್‌ ಮೂಲಕ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಈ ಯೋಜನೆಗೆ ಹಣವನ್ನು ನೀಡಿದೆ.

ನವದೆಹಲಿ (ಜ.11): ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ನೀಡಿರುವ ಮಾಹಿತಿಯ ಪ್ರಕಾರ ದೇಶದ ಮೊಟ್ಟಮೊದಲ ಬುಲೆಟ್‌ ಟ್ರೈನ್‌ 2026ರಲ್ಲಿ ಕಾರ್ಯಾರಂಭ ಮಾಡಲಿದೆ. ವೈಬ್ರಂಟ್‌ ಗುಜರಾತ್‌ ಶೃಂಗಸಭೆಯಲ್ಲಿ ಮಾತನಾಡಿದ ಸಚಿವ, ಈವರೆಗೂ 270 ಕಿಲೋಮೀಟರ್‌ವರೆಗಿನ ಕೆಲಸ ಸಂಪೂರ್ಣವಾಗಿದೆ ಎಂದು ತಿಳಿಸಿದ್ದಾರೆ. ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ (NHSRCL) ಜನವರಿ 8 ರಂದು ಗುಜರಾತ್, ಮಹಾರಾಷ್ಟ್ರ ಮತ್ತು ದಾದ್ರಾ ಮತ್ತು ನಗರ ಹವೇಲಿಯಾದ್ಯಂತ ಬುಲೆಟ್ ರೈಲು ಯೋಜನೆ ಎಂದು ಕರೆಯಲ್ಪಡುವ ಮುಂಬೈ-ಅಹಮದಾಬಾದ್ ರೈಲು ಕಾರಿಡಾರ್‌ಗಾಗಿ 100% ಭೂಸ್ವಾಧೀನವನ್ನು ಪೂರ್ಣಗೊಳಿಸಿದೆ ಎಂದು ಹೇಳಿದೆ. ಭೂಸ್ವಾಧೀನದ ಸ್ಥಿತಿಯನ್ನು ಅಶ್ವಿನಿ ವೈಷ್ಣವ್ ಹಂಚಿಕೊಂಡಿದ್ದಾರೆ, ಯೋಜನೆಗೆ ಅಗತ್ಯವಿರುವ ಸಂಪೂರ್ಣ 1389.49 ಹೆಕ್ಟೇರ್ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು. ಮುಂಬೈ ಮತ್ತು ಅಹಮದಾಬಾದ್ ನಡುವೆ ಹೈಸ್ಪೀಡ್ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತಿದೆ.

ಗುಜರಾತ್‌ನ ವಲ್ಸಾದ್ ಜಿಲ್ಲೆಯ ಜರೋಲಿ ಗ್ರಾಮದ ಬಳಿ 350 ಮೀಟರ್ ಉದ್ದ ಮತ್ತು 12.6 ಮೀಟರ್ ವ್ಯಾಸದ ಮೊದಲ ಪರ್ವತ ಸುರಂಗವನ್ನು ಕೇವಲ 10 ತಿಂಗಳಲ್ಲಿ ಪೂರ್ಣಗೊಳಿಸುವುದರೊಂದಿಗೆ ಗಮನಾರ್ಹ ಮೈಲಿಗಲ್ಲನ್ನು ಸಾಧಿಸಿದೆ ಎಂದು ರಾಷ್ಟ್ರೀಯ ಹೈಸ್ಪೀಡ್ ರೈಲ್ ಕಾರ್ಪೊರೇಷನ್ ಲಿಮಿಟೆಡ್ ಹೇಳಿದೆ.

ಭಾರತದ ಮೊದಲ ಬುಲೆಟ್‌ ರೈಲು ಮಾರ್ಗದ ಸುರಂಗ ನಿರ್ಮಾಣ ಯಶಸ್ವಿ

ಜಪಾನ್‌ನ ಶಿಂಕನ್‌ಸೆನ್ ಟೆಕ್ನಾಲಜಿಯನ್ನು ಬಳಸಿಕೊಂಡು ಹೈ-ಸ್ಪೀಡ್ ರೈಲು ಮಾರ್ಗವನ್ನು ನಿರ್ಮಿಸಲಾಗುತ್ತಿದೆ ಮತ್ತು ಯೋಜನೆಯು ಹೆಚ್ಚಿನ ಆವರ್ತನ ಸಮೂಹ ಸಾರಿಗೆ ವ್ಯವಸ್ಥೆಯನ್ನು ರಚಿಸುವ ಗುರಿಯನ್ನು ಹೊಂದಿದೆ. ಜಪಾನ್‌ನಿಂದ 88,000 ಕೋಟಿ ರೂಪಾಯಿಗಳ ಮೃದು ಸಾಲದೊಂದಿಗೆ ಜಪಾನ್ ಇಂಟರ್ನ್ಯಾಷನಲ್ ಕೋಆಪರೇಷನ್ ಏಜೆನ್ಸಿ (JICA) ಈ ಯೋಜನೆಗೆ ಹಣವನ್ನು ನೀಡಿದೆ. 1.10 ಲಕ್ಷ ಕೋಟಿ ವೆಚ್ಚದ ಯೋಜನೆಯು 2022 ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿತ್ತು ಆದರೆ ಭೂಸ್ವಾಧೀನದಲ್ಲಿ ಅಡಚಣೆಗಳನ್ನು ಇದು ಎದುರಿಸಿತ್ತು.

Bullet Train : ದೆಹಲಿ-ವಾರಣಾಸಿ, ಮುಂಬೈ-ನಾಗ್ಪುರ ನಡುವೆ ಹೈಸ್ಪೀಡ್ ರೈಲು!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಜಾತ್ಯತೀತತೆ ಯಾರೂ ಯಾರಿಗೂ ಕಲಿಸಲಾಗಲ್ಲ: ಜಾವೇದ್
ಇಲಿಗಳು 7 ಕೋಟಿ ರು. ಮೌಲ್ಯದ 26000 ಟನ್‌ ಭತ್ತ ತಿಂದು ತೇಗಿದವಂತೆ! ಅಕ್ಕಿ ನಾಪತ್ತೆಗೆ ಸರ್ಕಾರದ ಉತ್ತರ