UP Elections : ಸೀತಾಪುರ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಅಜಮ್ ಖಾನ್!

Suvarna News   | Asianet News
Published : Jan 26, 2022, 11:52 PM IST
UP Elections : ಸೀತಾಪುರ ಜೈಲಿನಿಂದಲೇ ನಾಮಪತ್ರ ಸಲ್ಲಿಸಿದ ಅಜಮ್ ಖಾನ್!

ಸಾರಾಂಶ

ರಾಮಪುರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಅಜಮ್ ಖಾನ್ ಸೀತಾಪುರ ಜೈಲಿನಲ್ಲಿರುವ ಸಮಾಜವಾದಿ ಪಕ್ಷದ ನಾಯಕ ಅಜಮ್ ಖಾನ್, ನಹೀದ್ ಹಸನ್ ಗೆ ಟಿಕೆಟ್ ನೀಡಿರುವುದನ್ನು ಸಮರ್ಥಿಸಿಕೊಂಡಿರುವ ಅಖಿಲೇಶ್ ಯಾದವ್

ಲಖನೌ (ಜ. 26): ತನ್ನ ವಿವಾದಿತ ಹೇಳಿಕೆಗಳಿಂದಲೇ ಸುದ್ದಿಯಾಗುವ ಸಮಾಜವಾದಿ ಪಕ್ಷದ (Samajwadi Party ) ನಾಯಕ ಮೊಹಮದ್ ಅಜಮ್ ಖಾನ್ (Mohammad Azam Khan ), ಸೀತಾಪುರ ಜೈಲಿನಿಂದಲೇ(Sitapur Jail )  ರಾಮಪುರ (Rampur) ಕ್ಷೇತ್ರದಲ್ಲಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದ್ದಾರೆ. ಹೆಚ್ಚುವರಿ ಮುಖ್ಯ ಜುಡಿಷಿಯಲ್ ಮ್ಯಾಜಿಸ್ಟ್ರೇಟ್ ರಾಂಪುರ ನ್ಯಾಯಾಲಯದಿಂದ ಆದೇಶ ಹೊರಡಿಸಿದ ನಂತರ ರಾಮ್‌ಪುರದ ಚುನಾವಣಾಧಿಕಾರಿ ನಾಮಪತ್ರವನ್ನು ಪಡೆಯಲು ಜೈಲಿಗೆ ಭೇಟಿ ನೀಡಿದ್ದರು ಎಂದು ಜೈಲರ್ ಆರ್‌ಎಸ್ ಯಾದವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

"ಈಗ ಎಲ್ಲಾ ಪತ್ರದ ವಿಧಿವಿಧಾನಗಳು ಪೂರ್ಣಗೊಂಡಿವೆ" ಎಂದು ಅವರು ಹೇಳಿದರು. ಉತ್ತರ ಪ್ರದೇಶ ಎರಡನೇ ಹಂತದ ಚುನಾವಣೆಯಲ್ಲಿ ರಾಮಪುರಕ್ಕೆ ಫೆ.14 ರಂದು ಮತದಾನ ನಡೆಯಲಿದೆ. ರಾಮಪುರದ ಸಂಸದ ಅಜಮ್ ಖಾನ್, ಭೂಕಬಳಿಕೆ ಮತ್ತು ಇತರ ಹಲವು ಪ್ರಕರಣಗಳಲ್ಲಿ ಫೆಬ್ರವರಿ 2020 ರಿಂದ ಸೀತಾಪುರ ಜೈಲಿನಲ್ಲಿದ್ದಾರೆ.

ಇದಕ್ಕೂ ಮುನ್ನ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav), ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ಕೆಲವು ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಪಕ್ಷದ ನಿರ್ಧಾರವನ್ನು ಬುಧವಾರ ಸಮರ್ಥಿಸಿಕೊಂಡರು ಮತ್ತು ಈ ಪ್ರಕರಣಗಳಲ್ಲಿ ಹೆಚ್ಚಿನವು ಬಿಜೆಪಿ ಸರ್ಕಾರದ ಅವಧಿಯಲ್ಲಿ ದಾಖಲಾಗಿವೆ ಎಂದು ಹೇಳಿದರು. ಗಾಯತ್ರಿ ಪ್ರಜಾಪತಿ ಅವರ ಪತ್ನಿ ವಿರುದ್ಧ ಯಾವುದೇ ಪ್ರಕರಣಗಳಿಲ್ಲ, ಪತಿ ವಿರುದ್ಧ ಪ್ರಕರಣಗಳಿವೆ. ಅಜಂ ಖಾನ್ ವಿರುದ್ಧ ಹೆಚ್ಚಿನ ಪ್ರಕರಣಗಳು ಬಿಜೆಪಿ ಆಡಳಿತದಲ್ಲಿ ದಾಖಲಾಗಿವೆ. ನಹಿದ್ ಹಸನ್ ಅವರಿಗೆ ಸಂಬಂಧಿಸಿದಂತೆ, ಬಿಜೆಪಿ (ಸರ್ಕಾರ) ಅವರ ವಿರುದ್ಧ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಿದೆ," ಅಖಿಲೇಶ್ ಯಾದವ್ ಹೇಳಿದರು.

ಅಖಿಲೇಶ್ ಯಾದವ್ ವಿರುದ್ಧ ಮಂಗಳವಾರ ವಾಗ್ದಾಳಿ ನಡೆಸಿದ್ದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ (Uttar Pradesh Deputy Chief Minister Keshav Prasad Maurya), ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದನ್ನು ತಡೆಯಲು ಅವರ ಪಕ್ಷ ಮತ್ತು ಅವರ ಮಿತ್ರಪಕ್ಷಗಳಿಗೆ ಸಾಧ್ಯವಿಲ್ಲ ಮತ್ತು ಎಸ್‌ಪಿ ಅಪರಾಧಿಗಳಿಗೆ ಟಿಕೆಟ್ ನೀಡುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಅಖಿಲೇಶ್ ಯಾದವ್ ತಮ್ಮ ಪಕ್ಷದ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು.

ರಾಜ್ಯದಲ್ಲಿ ಬಿಜೆಪಿ ಕಮಲ ಅರಳುವುದನ್ನು ತಡೆಯಲು ಎಸ್‌ಪಿಗೆ ಸಾಧ್ಯವಿಲ್ಲ, ಮುಂಬರುವ ಚುನಾವಣೆಗೆ ಎಸ್‌ಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿಯಿಂದ ಅದು ರಾಜಕೀಯ ಪಕ್ಷವಲ್ಲ, ದರೋಡೆಕೋರರು, ಕ್ರಿಮಿನಲ್‌ಗಳು, ಮಾಫಿಯಾಗಳ ಪಕ್ಷ ಎಂಬುದನ್ನು ತೋರಿಸುತ್ತದೆ. ಅವರು ಯುಪಿಯಲ್ಲಿ ಚುನಾವಣೆಗೆ ಹೋರಾಡುತ್ತಿಲ್ಲ ಆದರೆ ರಾಜ್ಯದ ಜನರಿಗೆ ಬೆದರಿಕೆ ಹಾಕುತ್ತಿದ್ದಾರೆ. ನೀವು ಎಷ್ಟು ಅಪರಾಧಿಗಳಿಗೆ ಟಿಕೆಟ್ ನೀಡುತ್ತೀರೋ, ನಿಮ್ಮ ಸೈಕಲ್ ಪಂಕ್ಚರ್ ಆಗಿದೆ ಮತ್ತು ಪಂಕ್ಚರ್ ಆಗಿರುತ್ತದೆ ಎಂದು ನಾನು ಅವರಿಗೆ ಹೇಳಲು ಬಯಸುತ್ತೇನೆ ಎಂದು ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದರು. ಜೈಲಿನಲ್ಲಿರುವ ಉತ್ತರ ಪ್ರದೇಶದ ಮಾಜಿ ಸಚಿವ ಗಾಯತ್ರಿ ಪ್ರಜಾಪತಿ ಅವರ ಪತ್ನಿ ಮಹಾರಾಜಿ ದೇವಿಗೆ (Maharaji Devi ) ಮುಂಬರುವ ಯುಪಿ ಚುನಾವಣೆಗೆ ಸಮಾಜವಾದಿ ಪಕ್ಷವು ಅಮೇಥಿಯಿಂದ ಟಿಕೆಟ್ ನೀಡಿದೆ.

ಕೈರಾನಾದಿಂದ ಎಸ್‌ಪಿ ಅಭ್ಯರ್ಥಿ ನಾಶಿದ್ ಹಸನ್ ಅವರನ್ನು ಈ ತಿಂಗಳ ಆರಂಭದಲ್ಲಿ ದರೋಡೆಕೋರರ ಕಾಯಿದೆಯಡಿಯಲ್ಲಿ ಯುಪಿ ಪೊಲೀಸರು ಬಂಧಿಸಿದ್ದರು ಮತ್ತು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ. ಉತ್ತರ ಪ್ರದೇಶದ 403 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರವರಿ 10 ರಿಂದ ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಉತ್ತರ ಪ್ರದೇಶದಲ್ಲಿ ಫೆಬ್ರವರಿ 10, 14, 20, 23, 27 ಮತ್ತು ಮಾರ್ಚ್ 3 ಮತ್ತು 7 ರಂದು ಮತದಾನ ನಡೆಯಲಿದೆ. ಮತಗಳ ಎಣಿಕೆ ಮಾರ್ಚ್ 10 ರಂದು ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಮುಸ್ಲಿಂ ಲೀಗ್‌, ಜಿನ್ನಾಗೆ ಮಣಿದ ನೆಹರು, ವಂದೇ ಮಾತರಂ ಅನ್ನು ಹರಿದು ಹಾಕಿದ್ದು ಕಾಂಗ್ರೆಸ್‌: ಮೋದಿ ವಾಗ್ದಾಳಿ
ಮದುವೆಯಾದ್ರೆ ಸಿಗುತ್ತೆ 2.5 ಲಕ್ಷ ರೂಪಾಯಿ; ಶೇ.99 ಜನರಿಗೆ ಈ ವಿಷಯವೇ ಗೊತ್ತಿಲ್ಲ