
ಲಖನೌ(ಫೆ.23): ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆದು, ಅದರ ಸಂಬಂಧಿತ ಕಾರ್ಯಚಟುವಟಿಕೆ ಆರಂಭವಾಗಿರುವ ಬೆನ್ನಲ್ಲೇ, ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರ ಭರ್ಜರಿ 640 ಕೋಟಿ ರು. ಅನುದಾನ ಪ್ರಕಟಿಸಿದೆ.
ಸೋಮವಾರ ರಾಜ್ಯ ವಿಧಾನಸಭೆಯಲ್ಲಿ ಮಂಡಿಸಲಾದ ಬಜೆಟ್ನಲ್ಲಿ ವಿವಿಧ ಯೋಜನೆಗಳಿಗೆ ಹಣ ನೀಡಲಾಗಿದೆ.
ರಾಮಮಂದಿರ ಮತ್ತು ಮಂದಿರ ಸಂಕೀರ್ಣವನ್ನು ತಲುಪಲು ಸಂಪರ್ಕ ರಸ್ತೆಗೆ 300 ಕೋಟಿ ರು., ಅಯೋಧ್ಯೆ ನಗರದ ಅಭಿವೃದ್ದಿ ಕಾರ್ಯಗಳು ಮತ್ತು ಪ್ರವಾಸೋದ್ಯಮ ಸ್ಥಳಗಳ ಸೌಂದರೀಕರಣ ಯೋಜನೆಗೆ 140 ಕೋಟಿ ರು., ಅಯೋಧ್ಯೆಯಲ್ಲಿ ನಿರ್ಮಾಣವಾಗಲಿರುವ ಮರ್ಯಾದಾ ಪುರುಷೋತ್ತಮ ಶ್ರೀ ರಾಮ ಅಯೋಧ್ಯೆ ವಿಮಾನ ನಿಲ್ದಾಣಕ್ಕೆ 101 ಕೋಟಿ ರು. ಮತ್ತು ನಗರದ ಸರ್ವಾಂಗೀಣ ಅಬಿವೃದ್ಧಿ ಯೋಜನೆಗಳಿಗೆ 100 ಕೋಟಿ ರು. ಮೀಸಲಿಡಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ