
ಲಕ್ನೋ, ಜನವರಿ 16. ಮುಂಬರುವ ಜನವರಿ 29 ರಂದು ಮೌನಿ ಅಮಾವಾಸ್ಯೆ ಪ್ರಯುಕ್ತ 8-10 ಕೋಟಿ ಭಕ್ತರು ಸಂಗಮ ಸ್ನಾನ ಮಾಡುವ ನಿರೀಕ್ಷೆಯಿದ್ದು, ವ್ಯವಸ್ಥೆಗಳನ್ನು ಇನ್ನಷ್ಟು ಉತ್ತಮಪಡಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬುಧವಾರ ಹಿರಿಯ ಅಧಿಕಾರಿಗಳ ಜೊತೆ ಕಳೆದ 3 ದಿನಗಳ ಪರಿಸ್ಥಿತಿ ಪರಿಶೀಲಿಸಿದ ಅವರು, ಪೌಷ ಪೂರ್ಣಿಮೆ ಮತ್ತು ಮಕರ ಸಂಕ್ರಾಂತಿಯಂದು 6 ಕೋಟಿಗೂ ಹೆಚ್ಚು ಜನರು ತ್ರಿವೇಣಿ ಸ್ನಾನ ಮಾಡಿದ್ದಾರೆ.
ಮೌನಿ ಅಮಾವಾಸ್ಯೆಗೆ 8-10 ಕೋಟಿ ಜನರು ಬರುವ ಸಾಧ್ಯತೆ ಇದ್ದು, ವ್ಯವಸ್ಥೆಗಳನ್ನು ಇನ್ನಷ್ಟು ಉತ್ತಮಪಡಿಸಬೇಕು ಎಂದರು. ರೈಲ್ವೆ ಇಲಾಖೆಯೊಂದಿಗೆ ಸಂಪರ್ಕದಲ್ಲಿರಿ, ಕುಂಭ ಮೇಳದ ವಿಶೇಷ ರೈಲುಗಳ ಸಮಯಕ್ಕೆ ಸರಿಯಾಗಿ ಸಂಚರಿಸುವಂತೆ ನೋಡಿಕೊಳ್ಳಿ ಎಂದು ಸೂಚಿಸಿದರು. ನಿಯಮಿತ ಮತ್ತು ವಿಶೇಷ ರೈಲುಗಳ ಸಂಚಾರ ಮುಂದುವರಿಯಲಿ, ಭಕ್ತರ ಸಂಖ್ಯೆ ನೋಡಿಕೊಂಡು ರೈಲುಗಳ ಸಂಖ್ಯೆ ಹೆಚ್ಚಿಸಬೇಕು ಎಂದರು.
ಮೇಳದಲ್ಲಿ ಮೊಬೈಲ್ ನೆಟ್ವರ್ಕ್ ಸುಧಾರಣೆ, ಬಸ್, ಶಟಲ್ ಬಸ್ ಮತ್ತು ವಿದ್ಯುತ್ ಚಾಲಿತ ಬಸ್ಗಳ ನಿರಂತರ ಸಂಚಾರಕ್ಕೆ ಒತ್ತು ನೀಡಿದರು. ಶೌಚಾಲಯಗಳ ನಿಯಮಿತ ಸ್ವಚ್ಛತೆ, ಘಾಟ್ಗಳ ಬ್ಯಾರಿಕೇಡಿಂಗ್, ಎಲ್ಲಾ ವಲಯಗಳಲ್ಲಿ 24×7 ವಿದ್ಯುತ್ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.
ಇದನ್ನೂ ಓದಿ: ಮಹಾ ಕುಂಭ ಮೇಳದಲ್ಲಿ ಬ್ಯುಸಿನೆಸ್, ಕಡಿಮೆ ಬಂಡವಾಳ ಲಕ್ಷಾಂತರ ಸಂಪಾದನೆ !
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ