WATCH | 500 ವರ್ಷಗಳ ಹಿಂದೆ ಬಾಬರ್ ಏನು ಮಾಡಿದ್ನೋ, ಅದೇ ಈಗ ಬಾಂಗ್ಲಾದೇಶ, ಸಂಭಾಲ್‌ನಲ್ಲಿ ನಡ್ತೀದೆ: ಸಿಎಂ ಯೋಗಿ ಕೆಂಡ!

Published : Dec 05, 2024, 02:15 PM ISTUpdated : Dec 05, 2024, 04:18 PM IST
WATCH | 500 ವರ್ಷಗಳ ಹಿಂದೆ ಬಾಬರ್ ಏನು ಮಾಡಿದ್ನೋ, ಅದೇ ಈಗ ಬಾಂಗ್ಲಾದೇಶ, ಸಂಭಾಲ್‌ನಲ್ಲಿ ನಡ್ತೀದೆ: ಸಿಎಂ ಯೋಗಿ ಕೆಂಡ!

ಸಾರಾಂಶ

ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೌನ ಮುರಿದಿದ್ದು, ಹಿಂಸಾಚಾರಕ್ಕೆ ಕಾರಣರಾದ ಅನ್ಯಸಮುದಾಯದ ನಡೆ ವಿರುದ್ಧ ಕಿಡಿಕಾರಿದ್ದಾರೆ.

ಉತ್ತರ ಪ್ರದೇಶ (ಡಿ.5): ಉತ್ತರ ಪ್ರದೇಶದ ಸಂಭಾಲ್ ನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೌನ ಮುರಿದಿದ್ದು, ಹಿಂಸಾಚಾರಕ್ಕೆ ಕಾರಣರಾದ ಅನ್ಯಸಮುದಾಯದ ನಡೆ ವಿರುದ್ಧ ಕಿಡಿಕಾರಿದ್ದಾರೆ.

ಅಯೋಧ್ಯೆಯಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು, '500 ವರ್ಷಗಳ ಹಿಂದೆ ಬಾಬರ್ ಏನು ಮಾಡಿದ್ದರೋ ಅದು ಇಂದು ಬಾಂಗ್ಲಾದೇಶ ಮತ್ತು ಸಂಭಾಲ್‌ನಲ್ಲಿ ನಡೆಯುತ್ತಿದೆ. ಸಂಭಾಲ್ ಮತ್ತು ಬಾಂಗ್ಲಾದೇಶದ ಘಟನೆಗಳ ಸ್ವರೂಪ ಒಂದೇ ಆಗಿವೆ ಮತ್ತು ಎರಡೂ ಘಟನೆಗಳಲ್ಲಿ ಭಾಗಿಯಾಗಿರುವ ಜನರ ಡಿಎನ್‌ಎ ಒಂದೇ ಆಗಿದೆ. ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ. 

'500 ವರ್ಷಗಳ ಹಿಂದೆ ಅಯೋಧ್ಯೆ ಕುಂಭದಲ್ಲಿ ಬಾಬರ್‌ ಮಾಡಿದ್ದನ್ನು ನೆನಪಿಸಿಕೊಳ್ಳಿ. ಸಂಭಾಲ್‌ನಲ್ಲಿ ಅದೇ ಸಂಭವಿಸಿದೆ, ಬಾಂಗ್ಲಾದೇಶದಲ್ಲೂ ಅದೇ ನಡೆಯುತ್ತಿದೆ. ಮೂರರ ಸ್ವಭಾವ ಮತ್ತು ಡಿಎನ್ ಎ ಒಂದೇ ಆಗಿದೆ. ಇದು ಬಾಂಗ್ಲಾದೇಶದಲ್ಲಿ ನಡೆಯುತ್ತಿದೆ ಎಂದು ಯಾರಾದರೂ ನಂಬಿದರೆ, ಅದೇ ಅಂಶಗಳು ನಿಮ್ಮನ್ನು ಎಚ್ಚರಿಸಲು ಇಲ್ಲಿ ಕಾಯುತ್ತಿವೆ. ಸಾಮಾಜಿಕ ಏಕತೆಯನ್ನು ಮುರಿಯಲು ಅವರು ಸಂಪೂರ್ಣ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದನ್ನ ಸುಳ್ಳು ಎನ್ನುವವರು, ಅವರನ್ನು ಓಲೈಕೆ ಮಾಡುವ ಕೆಲವರು ವಿದೇಶದಲ್ಲಿ ಸಾಕಷ್ಟು ಆಸ್ತಿ ಹೊಂದಿರುವವರು. ಇಲ್ಲಿ ಯಾವುದಾದರೂ ಬಿಕ್ಕಟ್ಟು ಬಂದರೆ ಓಡಿಹೋಗುತ್ತಾರೆ, ಬೇರೆಯವರನ್ನು ಇಲ್ಲಿ ಸಾಯಲು ಬಿಡುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ರಾಷ್ಟ್ರಪತಿಯೂ ಅಲ್ಲ, ಪ್ರಧಾನಿಯೂ ಅಲ್ಲ.. ಕಾರ್‌ನಿಂದ ಇಳಿದ ಬಳಿಕ ಪುಟಿನ್‌ ಶೇಕ್‌ಹ್ಯಾಂಡ್‌ ಮಾಡಿದ್ದು ಇವರಿಗೆ..