ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದುರಂತ, ಐವರು ಭಕ್ತರು ಸಾವು!

Published : Oct 16, 2021, 02:58 PM ISTUpdated : Oct 16, 2021, 03:16 PM IST
ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದುರಂತ, ಐವರು ಭಕ್ತರು ಸಾವು!

ಸಾರಾಂಶ

* ನವರಾತ್ರಿ ಸಂಭ್ರಮದ ಮಧ್ಯೆ ಪ್ರಾಣ ಕಳೆದುಕೊಂಡ ಐವರು ಯುವಕರು * ನದಿಯಲ್ಲಿ ದುರ್ಗಾ ಮಾತೆ ಮೂರ್ತಿ ವಿಸರ್ಜನೆ ವೇಳೆ ದುರಂತ * ಮೂರ್ತಿ ವಿಸರ್ಜನೆಗೆ ಪಕ್ಕದ ಗ್ರಾಮದಿಂ<ದ ಬಂದಿದ್ದ ಯುವಕರು

ಆಗ್ರಾ(ಅ.16): ದೇಶಾದ್ಯಂತ ದಸರಾ, ನವರಾತ್ರಿ(Navratri) ಸಂಭ್ರಮ ಕಳೆಗಟ್ಟಿತ್ತು. ಆದರೀಗ ಈ ಹಬ್ಬದ ವಾತಾವರಣದ ಮಧ್ಯೆ ರಾಜಸ್ಥಾನದ(Rajasthan) ಧೋಲ್‌ಪುರದಲ್ಲಿ ಪಾರ್ವತಿ ನದಿಯಲ್ಲಿ(Partvati River) ದುರ್ಗಾ ಮೂರ್ತಿ ವಿಸರ್ಜನೆಯ ವೇಳೆ ಆಗ್ರಾ(Agra) ಮೂಲದ ಐವರು ಮುಳುಗಿ ಸಾವನ್ನಪ್ಪಿದ್ದಾರೆ. ಹೌದು ನವರಾತ್ರಿ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಈ ದುರಂತ ಸಂಭವಿಸಿದೆ. ಇನ್ನು ದುರ್ಗಾ ಮಾತೆಯ ಮೂರ್ತಿಯನ್ನು ನದಿಯಲ್ಲಿ ವಿಸರ್ಜಿಸಲು ಹೋಗಿ ಮೃತಪಟ್ಟ ಐವರೂ ಆಗ್ರಾದ ಭಾವನಾಪುರ ಗ್ರಾಮದಿಂದ ಧೋಲ್​ಪುರಕ್ಕೆ ಬಂದಿದ್ದರು ಎಂಬುವುದು ಉಲ್ಲೇಖನೀಯ. 

ಶುಕ್ರವಾರ ದುರ್ಗಾ ಮೂರ್ತಿಯನ್ನು ನಿಮಜ್ಜನ ಮಾಡಲು ತೆರಳಿದಾಗ ಈ ದುರ್ಘಟನೆ ಸಂಭವಿಸಿದ್ದು, ಮೃತರು ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಭಾವನಪುರ ಗ್ರಾಮದ ನಿವಾಸಿಗಳು ಎಂದು ಆಗ್ರಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮುನಿರಾಜ್ ಹೇಳಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಈ ಆಘಾತಕಾರಿ ಸುದ್ದಿ ಆಲಿಸಿದ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 

ಸಾವನ್ನಪ್ಪಿದ ಐವರು ಕೂಡ ಯುವಕರಾಗಿದ್ದಾರೆ. ಶೋಧ ಕಾರ್ಯಾಚರಣೆ ಬಳಿಕ ಆ ಐವರ ಶವಗಳನ್ನು ಹೊರಗೆ ತೆಗೆಯಲಾಗಿದೆ. ಡೈವರ್‌ಗಳ ಸಹಾಯದಿಂದ 5 ದೇಹಗಳನ್ನು ನದಿಯಿಂದ ಹೊರಗೆ ತೆಗೆಯಲಾಗಿದೆ. ಮೃತಪಟ್ಟವರೆಲ್ಲರೂ ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯ ಜಗ್ನೇರ್ ಪೊಲೀಸ್ ಠಾಣಾ ಪ್ರದೇಶದ ನಿವಾಸಿಗಳಾಗಿದ್ದಾರೆ.

ಧೋಲ್ಪುರದ ಬಸ್ಡಿ ಪೊಲೀಸ್ ಠಾಣಾ ವ್ಯಾಪ್ತಿಯ ಭೂತೇಶ್ವರ ಮಹಾದೇವ್ ಬಳಿ ಹಾದುಹೋಗುವ ಪಾರ್ವತಿ ನದಿಯಲ್ಲಿ ವಿಗ್ರಹ ವಿಸರ್ಜನೆಯ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ. ಸ್ಥಳೀಯರು ಘಟನೆಯನ್ನು ಪೊಲೀಸರಿಗೆ ಮತ್ತು ಆಡಳಿತಕ್ಕೆ ತಿಳಿಸಿದ್ದಾರೆ. ಸುಮಾರು 12ಕ್ಕೂ ಹೆಚ್ಚು ಯುವಕರ ಗುಂಪು ದುರ್ಗಾ ಮೂರ್ತಿಯನ್ನು ಹಿಡಿದುಕೊಂಡು ಪಾರ್ವತಿ ನದಿ ನೀರಿನಲ್ಲಿ ಇಳಿದಿತ್ತು. ಆದರೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಿದ್ದು, ರಭಸವಾಗಿ ಹರಿಯುತ್ತಿತ್ತು. ಹೀಗಾಗಿ ಈ ಐವರು ಯುವಕರು ಮುಳುಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಮನೆಯಲ್ಲಿ ಒಂದು ರೂಪಾಯಿ ಇಲ್ಲ ಆದ್ರೂ ಸಿಸಿಟಿವಿ ಯಾಕೆ ಹಾಕಿದ್ರಿ: ಸಿಕ್ಕಿದ್ದನ್ನು ದೋಚಿ ಪತ್ರ ಬರೆದಿಟ್ಟು ಹೋದ ಕಳ್ಳ
ಲೋಕಸಭೆಯಲ್ಲಿ ನೌಕರರ ಪರ ಮಸೂದೆ ಮಂಡನೆ: ಉದ್ಯೋಗಿಗಳ ಲೈಫ್​ ಜಿಂಗಾಲಾಲಾ- ಏನಿದೆ ಇದರಲ್ಲಿ?