
ಲಖನೌ(ಅ.03): ಉತ್ತರ ಪ್ರದೇಶದ ಹಾಥ್ರಸ್ನಲ್ಲಿ ಸಂಭವಿಸಿದ ಅತ್ಯಾಚಾರ ಪ್ರಕರಣದ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ‘ಮಹಿಳೆಯರ ಮೇಲೆ ಕಣ್ಣು ಹಾಕಿದವರ ವಿನಾಶ ಮಾಡಲಾಗುವುದು’ ಎಂದು ಗುಡುಗಿದ್ದಾರೆ.
ಈ ಬಗ್ಗೆ ಶುಕ್ರವಾರ ಸಂಜೆ ಟ್ವೀಟ್ ಮಾಡಿರುವ ಅವರು, ‘ಉತ್ತರ ಪ್ರದೇಶದದಲ್ಲಿ ತಾಯಂದಿರು-ಸೋದರಿಯರ ಗೌರವ ಹಾಗೂ ಸ್ವಾಭಿಮಾನಕ್ಕೆ ಚ್ಯುತಿ ತರುವಂಥ ಯೋಚನೆ ಮಾಡುವವರ ಸಂಪೂರ್ಣ ವಿನಾಶ ಆಗುವಂತೆ ನೋಡಿಕೊಳ್ಳಲಾಗುವುದು. ಇವರಿಗೆ ಎಂಥ ಶಿಕ್ಷೆ ಆಗಲಿದೆ ಎಂದರೆ, ಭವಿಷ್ಯದಲ್ಲಿ ಈ ಶಿಕ್ಷೆ ಒಂದು ಉದಾಹರಣೆಯಾಗಿ ಉಳಿಯಲಿದೆ’ ಎಂದಿದ್ದಾರೆ.
‘ನಿಮ್ಮ ಉತ್ತರ ಪ್ರದೇಶ ಸರ್ಕಾರ ಎಲ್ಲ ತಾಯಂದಿರು ಹಾಗೂ ಸೋದರಿಯರ ಸುರಕ್ಷತೆ ಹಾಗೂ ಅಭಿವೃದ್ಧಿಗೆ ಸಂಕಲ್ಪಬದ್ಧವಾಗಿದೆ. ಇದು ನಮ್ಮ ಸಂಕಲ್ಪ ಹಾಗೂ ವಚನ’ ಎಂದು ಟ್ವೀಟ್ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ