ಕನ್ವರ್‌ ಯಾತ್ರೆ ನೇಮ್‌ಪ್ಲೇಟ್‌ ಆರ್ಡರ್‌, ಮೂರು ರಾಜ್ಯಗಳಿಗೆ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌!

Published : Jul 22, 2024, 04:05 PM IST
ಕನ್ವರ್‌ ಯಾತ್ರೆ ನೇಮ್‌ಪ್ಲೇಟ್‌ ಆರ್ಡರ್‌, ಮೂರು ರಾಜ್ಯಗಳಿಗೆ ನೋಟಿಸ್‌ ನೀಡಿದ ಸುಪ್ರೀಂ ಕೋರ್ಟ್‌!

ಸಾರಾಂಶ

ಮಧ್ಯಂತರ ಆದೇಶದಲ್ಲಿ, ಸುಪ್ರೀಂ ಕೋರ್ಟ್ ಉತ್ತರ ಪ್ರದೇಶದ ಅಂಗಡಿಗಳು ಕನ್ವರ್ ಯಾತ್ರೆಯ ಮಾರ್ಗಗಳಲ್ಲಿ ತಮ್ಮ ಅಂಗಡಿಗಳಲ್ಲಿ ಇರುವ ಆಹಾರದ ವಿವರಗಳನ್ನು ಮಾತ್ರ ಪ್ರದರ್ಶನ ಮಾಡಬೇಕು. ಮಾಲೀಕರ ಹೆಸರನ್ನು ಪ್ರದರ್ಶನ ಮಾಡುವ ಅಗತ್ಯವಿಲ್ಲ ಎಂದು ಹೇಳಿದೆ.  

ನವದೆಹಲಿ (ಜು.22): ಉತ್ತರ ಪ್ರದೇಶದ ಕನ್ವರ್ ಯಾತ್ರೆಯ ಮಾರ್ಗದಲ್ಲಿ ಅಂಗಡಿಗಳ ಮಾಲೀಕರು ತಮ್ಮ ಹೆಸರುಗಳನ್ನೂ ಹಾಕಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಸೋಮವಾರ ತಡೆ ನೀಡಿದೆ. ಮಧ್ಯಂತರ ಆದೇಶ ನೀಡಿದ ಸುಪ್ರೀಂ ಕೋರ್ಟ್‌, ಅಂಗಡಿಗಳ ಮಾಲೀಕರು ತಮ್ಮ ಅಂಗಡಿಗಳಲ್ಲಿ ಸಿಗುವಂಥ ಆಹಾರಗಳ ವಿವರಗಳನ್ನು ಪ್ರದರ್ಶನ ಮಾಡಿದರೆ ಸಾಕು, ಮಾಲೀಕರ ಹೆಸರನ್ನು ಪೋಸ್ಟರ್‌ನಲ್ಲಿ ಹಾಕುವ ಅಗತ್ಯವವಿಲ್ಲ ಎಂದು ನ್ಯಾಯಾಲಯ ಹೇಳಿದೆ. ನ್ಯಾಯಮೂರ್ತಿಗಳಾದ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರ ಪೀಠವು ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳಿಗೆ 'ನಾಮಫಲಕ ಆದೇಶ' ಹೊರಡಿಸಿದ್ದರ ಕುರಿತು ನೋಟಿಸ್ ಜಾರಿ ಮಾಡಿದೆ. ಉತ್ತರ ಪ್ರದೇಶ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಅಸೋಸಿಯೇಷನ್ ​​ಆಫ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ ಎಂಬ ಎನ್‌ಜಿಒ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸಿತು.

ವಿಚಾರಣೆಯ ಸಂದರ್ಭದಲ್ಲಿ, ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಯಾವುದೇ ಕಾನೂನಿನ ಅಧಿಕಾರವಿಲ್ಲದೆ ಆದೇಶವನ್ನು ಹೊರಡಿಸಲಾಗಿದೆ ಎಂದಿದ್ದಾರೆ. ರಾಜ್ಯ ಸರ್ಕಾರದ ಆದೇಶವನ್ನು ಉಲ್ಲಂಘಿಸುವವರಿಗೆ ದಂಡ ವಿಧಿಸಲಾಗುತ್ತದೆ. ನಾವು ಸಾವಿರಾರು ಕಿಲೋಮೀಟರ್‌ಗಳ ಬಗ್ಗೆ ಮಾತನಾಡುತ್ತಿದ್ದೇವೆ. ಈ ಅಂಗಡಿಗಳಲ್ಲಿ ಹೆಚ್ಚಿನವು ಟೀ ಅಂಗಡಿಗಳು ಮತ್ತು ಕೆಲವು ಹಣ್ಣಿನ ಅಂಗಡಿಗಳ ಮಾಲೀಕರಿಗೆ ಸೇರಿವೆ. ಇದರಿಂದ ಆರ್ಥಿಕತೆಯ ಸಾವಾಗಲಿದೆ ಎಂದು ಹೇಳಿದ್ದಾರೆ.

ಈ ಆದೇಶ ಹೊರಡಿಸಿದ್ದರ ಕಾರಣವೇನು ಅನ್ನೋದು ಕೂಡ ಮುಖ್ಯವಾಗಿದೆ. ಆಹಾರದ ಮೆನ್ಯು ನೋಡಿ ನೀವು ರೆಸ್ಟೋರೆಂಟ್‌ಗೆ ಹೋಗುತ್ತೀರಿ. ಅಲ್ಲಿ ಯಾರು ಸರ್ವ್‌ ಮಾಡುತ್ತಿದ್ದಾರೆ ಎನ್ನುವುದನ್ನು ನೋಡಿಕೊಂಡು ಯಾರೂ ರೆಸ್ಟೋರೆಂಟ್‌ಗೆ ಹೋಗೋದಿಲ್ಲ ಎಂದು ಸಿಂಘ್ವಿ ವಾದದ ವೇಳೆ ಹೇಳಿದ್ದಾರೆ. ಯಾತ್ರೆಗಳು ದಶಕಗಳಿಂದ ನಡೆಯುತ್ತಿದ್ದು, ಎಲ್ಲಾ ಧರ್ಮದ ಜನರು ತಮ್ಮ ಯಾತ್ರೆಯಲ್ಲಿ ಕನ್ವರಿಯಾರಿಗೆ ಸಹಾಯ ಮಾಡುತ್ತಿದ್ದಾರೆ ಎಂದಿದ್ದಾರೆ.

"ಇದು ಗುರುತಿನ ಸೇರ್ಪಡೆಗೆ ಸಂಬಂಧಿಸಿದೆ. ಕಾನೂನಿನ ಯಾವುದೇ ಅಧಿಕಾರವಿಲ್ಲದೆ ಆದೇಶವನ್ನು ಹೊರಡಿಸಲಾಗಿದೆ. ಹೆಸರನ್ನು ನೀಡುವ ಮತ್ತು ರೆಸ್ಟೋರೆಂಟ್‌ಗಳಲ್ಲಿ ತಿನ್ನುವ ಉದ್ದೇಶಗಳು ಮತ್ತು ವಸ್ತುಗಳ ನಡುವಿನ ಈ ಸಂಬಂಧದ ಹಿಂದಿನ ತಾರ್ಕಿಕತೆ ಏನು?" ಅವರು ಹೇಳಿದರು.

ಎನ್‌ಜಿಒ ಪರ ವಾದ ಮಂಡಿಸಿದ ವಕೀಲ ಸಿಯು ಸಿಂಗ್, ಆದೇಶಕ್ಕೆ ಯಾವುದೇ ಶಾಸನಬದ್ಧ ಬೆಂಬಲವಿಲ್ಲ ಮತ್ತು ಇದು ಯಾವುದೇ ಉದ್ದೇಶವನ್ನು ಪೂರೈಸಿಲ್ಲ ಎಂದು ಹೇಳಿದರು. "ಇದನ್ನು ಹಿಂದೆಂದೂ ಮಾಡಿಲ್ಲ. ಇದಕ್ಕೆ ಯಾವುದೇ ಶಾಸನಬದ್ಧ ಬೆಂಬಲವಿಲ್ಲ. ಯಾವುದೇ ಕಾನೂನು ಪೊಲೀಸ್ ಆಯುಕ್ತರಿಗೆ ಇದನ್ನು ಮಾಡಲು ಅಧಿಕಾರ ನೀಡುವುದಿಲ್ಲ. ಪ್ರತಿ ಟೀ ಸ್ಟಾಲ್‌ಗಳು ಮತ್ತು ಇತರ ರಸ್ತೆ ಬದಿಯ ಅಂಗಡಿಗಳಿಗೆ ನೌಕರರು ಮತ್ತು ಮಾಲೀಕರ ಹೆಸರನ್ನು ನೀಡುವ ನಿರ್ದೇಶನವು ಯಾವುದೇ ಉದ್ದೇಶವನ್ನು ಪೂರೈಸುವುದಿಲ್ಲ" ಎಂದಿದ್ದಾರೆ.

ಆಹಾರ ಮಳಿಗೆಯ ಬೋರ್ಡ್‌ಗಳಲ್ಲಿ ಮಾಲೀಕರ ಹೆಸರು ಕಡ್ಡಾಯಕ್ಕೆ ಸುಪ್ರೀಂ ಮಧ್ಯಂತರ ತಡೆ

ಕಳೆದ ವಾರ, ಮುಜಫರ್‌ನಗರ ಪೊಲೀಸರು ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಎಲ್ಲಾ ತಿನಿಸುಗಳಿಗೆ ತಮ್ಮ ಮಾಲೀಕರ ಹೆಸರನ್ನು ಪ್ರದರ್ಶಿಸಲು ಸೂಚನೆ ನೀಡಿದ್ದರು. ನಂತರ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ರಾಜ್ಯಾದ್ಯಂತ ಆದೇಶವನ್ನು ವಿಸ್ತರಿಸಿತು. ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳೂ ಇದನ್ನೇ ಅನುಸರಿಸಿದವು.

ಹೋಟೆಲ್ ಬೋರ್ಡಲ್ಲಿ ಮಾಲೀಕರ ಹೆಸರು ಕಡ್ಡಾಯ ಪ್ರಶ್ನಿಸಿ ಸುಪ್ರೀಂಗೆ ಅರ್ಜಿ

ಈ ಕ್ರಮವು ಪ್ರತಿಪಕ್ಷಗಳಿಂದ ಮಾತ್ರವಲ್ಲದೆ ಜೆಡಿ (ಯು) ಮತ್ತು ಆರ್‌ಎಲ್‌ಡಿ ಸೇರಿದಂತೆ ಕೆಲವು ಎನ್‌ಡಿಎ ಮಿತ್ರಪಕ್ಷಗಳಿಂದಲೂ ವಿರೋಧ ಎದುರಿಸಿತು. ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕಾನೂನು ಸುವ್ಯವಸ್ಥೆ ಮತ್ತು ಯಾತ್ರಾರ್ಥಿಗಳ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಮರ್ಥಿಸಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ವಂದೇ ಮಾತರಂ ಚರ್ಚೆ ವೇಳೆ ಶಾ ವರ್ಸಸ್‌ ಖರ್ಗೆ
25 ಜನರು ಸಾವನ್ನಪ್ಪಿದ ಪಬ್‌ ಮಾಲೀಕರ ರೆಸಾರ್ಟ್‌ ಧ್ವಂಸ