
ಲಕ್ನೋ(ನ.16): ಉತ್ತರ ಪ್ರದೇಶದ ಇಂಧನ ಸಚಿವ ಶ್ರೀಕಾಂತ್ ಶರ್ಮಾ ತಮ್ಮ ಮನೆಯಲ್ಲಿ ಪ್ರೀಪೇಯ್ಡ್ ವಿದ್ಯುತ್ ಮಾಪಕವನ್ನು ಅಳವಡಿಸಿಕೊಳ್ಳುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.
25 KV ಸಾಮರ್ಥ್ಯ ಹೊಂದಿರುವ ಪ್ರೀಪೇಯ್ಡ್ ಮಾಪಕವನ್ನು ಶ್ರೀಕಾಂತ್ ಶರ್ಮಾ ಕಾಳಿದಾಸ ಮಾರ್ಗ್ ನಲ್ಲಿರುವ ತಮ್ಮ ಅಧಿಕೃತ ನಿವಾಸಕ್ಕೆ ಅಳವಡಿಸಿಕೊಂಡಿದ್ದಾರೆ. ಪ್ರೀಪೇಯ್ಡ್ ಮಾಪಕದಲ್ಲಿರುವ ಮಿತಿ ಮುಕ್ತಾಯಗೊಳ್ಳುತ್ತಿದ್ದಂತೆಯೇ ವಿದ್ಯುತ್ ಪೂರೈಕೆ ಸ್ವಯಂಚಾಲಿತವಾಗಿ ತಾನಾಗಿಯೇ ಕಡಿತಗೊಳ್ಳುವುದು ಈ ಮಾಪಕದ ವಿಶೇಷತೆಯಾಗಿದೆ.
ಉದ್ಧಾರ! ಸಚಿವರು, ಅಧಿಕಾರಿಗಳ 13000 ಕೋಟಿ ವಿದ್ಯುತ್ ಬಿಲ್ ಬಾಕಿ
ಈ ಕುರಿತು ಮಾತನಾಡಿರುವ ಶ್ರೀಕಾಂತ್ ಶರ್ಮಾ, ಸರ್ಕಾರಿ ಅಧಿಕಾರಿಗಳು ಹಾಗೂ ರಾಜಕಾರಣಿಗಳು ವಿದ್ಯುತ್ ಬಾಕಿಯನ್ನು ಪಾವತಿ ಮಾಡುವುದಿಲ್ಲ ಎಂಬ ಆರೋಪವನ್ನು ಅಳಿಸಲು ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.
ನೆಲದಡಿಯೇ ಇನ್ನು ವಿದ್ಯುತ್ ಕೇಬಲ್
ಎಲ್ಲಾ ಸರ್ಕಾರಿ ಅಧಿಕಾರಿಗಳು, ಸಚಿವರು, ರಾಜಕಾರಣಿಗಳ ಮನೆಗಳಿಗೆ ಪ್ರೀಪೇಯ್ಡ್ ವಿದ್ಯುತ್ ಮೀಟರ್ಗಳನ್ನು ಅಳವಡಿಸಬೇಕೆಂಬ ನಿರ್ಧಾರವನ್ನು ಕೈಗೊಳ್ಳಲಾಗಿತ್ತು. ಈಗ ಸ್ವತಃ ಇಂಧನ ಸಚಿವರೇ ಪ್ರಿಪೇಯ್ಡ್ ಮೀಟರ್ ಅಳವಡಿಸಿಕೊಂಡಿದ್ದು, ಈ ಪ್ರೀಪೇಯ್ಡ್ ಮೀಟರ್ ಅಳವಡಿಸಿಕೊಳ್ಳುವಂತೆ ಜನತೆಗೆ ಕರೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ