ಜನಸಂಖ್ಯಾ ನಿಯಂತ್ರಣಕ್ಕೆ ಯೋಗಿ ಹೊಸ ನೀತಿ: ಗರ್ಭಪಾತಕ್ಕೆ ಸುರಕ್ಷಿತ ವ್ಯವಸ್ಥೆ!

Published : Jul 10, 2021, 12:50 PM ISTUpdated : Jul 10, 2021, 01:15 PM IST
ಜನಸಂಖ್ಯಾ ನಿಯಂತ್ರಣಕ್ಕೆ ಯೋಗಿ ಹೊಸ ನೀತಿ: ಗರ್ಭಪಾತಕ್ಕೆ ಸುರಕ್ಷಿತ ವ್ಯವಸ್ಥೆ!

ಸಾರಾಂಶ

* ವಿಶ್ವ ಜನಸಂಖ್ಯಾ ದಿನದಂದು 10 ವರ್ಷದ ನೀತಿ ಬಿಡುಗಡೆ * ಜನಸಂಖ್ಯಾ ನಿಯಂತ್ರಣಕ್ಕೆ ಯೋಗಿ ಹೊಸ ನೀತಿ * ಸಮುದಾಯಗಳ ನಡುವಿನ ಜನಸಂಖ್ಯಾ ಅಸಮತೋಲನ ತಡೆಗೆ ಕ್ರಮ * ದೇಶದಲ್ಲೇ ಅತಿ ಹೆಚ್ಚು 20 ಕೋಟಿ ಜನಸಂಖ್ಯೆ ಹೊಂದಿರುವ ರಾಜ್ಯ

ಲಖನೌ(ಜು.10): ಉತ್ತರ ಪ್ರದೇಶ ಸರ್ಕಾರವು ವಿಶ್ವ ಜನಸಂಖ್ಯಾ ದಿನವಾದ ಜುಲೈ 11ರಂದು ಜನಸಂಖ್ಯಾ ನಿಯಂತ್ರಣ ನೀತಿ ಬಿಡುಗಡೆ ಮಾಡಲಿದೆ. ಮುಂದಿನ 10 ವರ್ಷದವರೆಗೆ- ಅಂದರೆ 2030ರವರೆಗೆ ರಾಜ್ಯದ ಜನಸಂಖ್ಯೆ ನಿಯಂತ್ರಣ ಮಾಡುವುದೇ ಇದರ ಉದ್ದೇಶವಾಗಿದೆ.

‘ರಾಜ್ಯದಲ್ಲಿ ಕೆಲವು ಸಮುದಾಯಗಳಲ್ಲಿ ಜನಸಂಖ್ಯೆ ಬಗ್ಗೆ ಜಾಗೃತಿ ಇಲ್ಲ. ಇಂಥ ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಸಾಮುದಾಯಿಕ ಜಾಗೃತಿ ಮೂಡಿಸುವ ಯತ್ನಗಳನ್ನು ಸರ್ಕಾರ ಮಾಡಲಿದೆ’ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

ಫರ್ಟಿಲಿಟಿ ದರವು (ಮಹಿಳೆಯೊಬ್ಬರಿಗೆ ಮಕ್ಕಳ ಜನನದ ಸರಾಸರಿ ಪ್ರಮಾಣ) ಶೇ.2.1ರಷ್ಟುಇದ್ದರೆ ಉತ್ತಮ. ಆದರೆ ಉತ್ತರ ಪ್ರದೇಶದಲ್ಲಿ ಶೇ.2.7 ಇದೆ. ಬಿಹಾರ ಹಾಗೂ ಉತ್ತರ ಪ್ರದೇಶ ಹೊರತುಪಡಿಸಿ ಮಿಕ್ಕ ರಾಜ್ಯಗಳು ಶೇ.2.1ರ ಮಿತಿಯಲ್ಲಿವೆ. ಹೀಗಾಗಿ 20 ಕೋಟಿ ಜನಸಂಖ್ಯೆ ಹೊಂದಿರುವ ಉತ್ತರ ಪ್ರದೇಶ, ಈಗ ಜನಸಂಖ್ಯಾ ನಿಯಂತ್ರಣಕ್ಕೆ ಮುಂದಾಗಿದೆ.

ನೀತಿಯಲ್ಲಿ ಏನಿರಲಿದೆ?:

- ಗರ್ಭನಿರೋಧಕ ಔಷಧ ಸಾಕಷ್ಟುಲಭ್ಯ ಆಗುವಂತೆ ನೋಡಿಕೊಳ್ಳುವುದು.

- ಕುಟುಂಬ ಕಲ್ಯಾಣ ಯೋಜನೆಯ ಸಮರ್ಪಕ ಅನುಷ್ಠಾನ

- ಗರ್ಭಪಾತಕ್ಕೆ ಸುರಕ್ಷಿತ ವ್ಯವಸ್ಥೆ

- ಸಮುದಾಯಗಳ ನಡುವೆ ಜನಸಂಖ್ಯಾ ಸಮತೋಲನಕ್ಕೆ ಕ್ರಮ

- ಪೌಷ್ಟಿಕ ಆಹಾರ ನೀಡಿ ಶಿಶು ಹಾಗೂ ಗರ್ಭಾವಸ್ಥೆಯಲ್ಲೇ ಮಗು ಸಾವಿನ ಪ್ರಮಾಣ ಕಡಿಮೆ ಮಾಡುವುದು

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

25 ಜನರ ಬಲಿ ಪಡೆದ ಗೋವಾ ಕ್ಲಬ್ ಬೆಂಕಿ ದುರಂತ ಸಂಭವಿಸಿದ ಕೆಲ ಗಂಟೆಗಳಲ್ಲೇ ಥೈಲ್ಯಾಂಡ್‌ಗೆ ಹಾರಿದ ಕ್ಲಬ್ ಮಾಲೀಕ
Vande Mataram ಎರಡು ಪದಗಳ ಅರ್ಥ ವಿವರಿಸಿದ ಇಕ್ರಾ ಹಸನ್: ಸಂಸದೆಯ ಮಾತು ವೈರಲ್